AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು

ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪಶ್ಚಿಮ ಬಂಗಾಳದಲ್ಲಿ 2022ರಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ತನಿಖಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಪಶ್ಚಿಮ ಬಂಗಾಳ: ಎನ್‌ಐಎ ತಂಡದ ಕಾರಿನ ಮೇಲೆ ದಾಳಿ ಮಾಡಿದ ಸ್ಥಳೀಯರು
ಅಕ್ಷಯ್​ ಪಲ್ಲಮಜಲು​​
|

Updated on:Apr 06, 2024 | 12:35 PM

Share

ಭೂಪತಿನಗರ, ಎ.6: ಪಶ್ಚಿಮ ಬಂಗಾಳದ (West Bengal) ಪೂರ್ವ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಇಂದು (ಎ.06) ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡವು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರ ಮನೆಯ ಮೇಲೆ 2022ರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ದಾಳಿಯನ್ನು ನಡೆಸಿತ್ತು. ಈ ವೇಳೆ ಕಿಡಿಗೇಡಿಗಳು ಎನ್‌ಐಎ ತಂಡದ ಕಾರಿನ ಮೇಲೆ ಇಟ್ಟಿಗೆಗಳನ್ನು ಎಸೆದು ವಿಂಡ್‌ಸ್ಕ್ರೀನ್‌ಗೆ ಹಾನಿ ಮಾಡಿದ್ದಾರೆ. ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನಕ್ಕೆ ಪ್ರತಿಭಟನೆ ನಡೆಸಿ ಕಾರಿನ ಮೇಲೆ ದಾಳಿ ಮಾಡಿದ್ದಾರೆ.

ಈ ಘಟನೆಯಿಂದ ಎನ್‌ಐಎ ತಂಡದ ಅಧಿಕಾರಿಗೊಬ್ಬರಿಗೆ ಗಾಯ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪೊಲೀಸ್‌ ದೂರು ದಾಖಲಿಸಿದೆ. ಇದೀಗ ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಡಿಸೆಂಬರ್ 3, 2022 ರಂದು, ಭೂಪತಿನಗರದಲ್ಲಿ ಹುಲ್ಲಿನ ಮೇಲ್ಛಾವಣಿಯ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ಕಳೆದ ತಿಂಗಳು ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಎಂಟು ತೃಣಮೂಲ ಕಾಂಗ್ರೆಸ್ ನಾಯಕರನ್ನು ವಿಚಾರಣೆಗೆ ಕರೆಸಿತ್ತು. ಎನ್‌ಐಎ ದಾಳಿಯನ್ನು ಬಿಜೆಪಿ ವ್ಯಕ್ತಿಗಳು ಮಾಡಿದ್ದರೆ ಎಂದು ಟಿಎಂಸಿ ಆರೋಪಿಸಿತ್ತು.

ಇದನ್ನೂ ಓದಿ: ‘ದೇಶ ಮೊದಲು’ ಮಂತ್ರದೊಂದಿಗೆ ಜನಸೇವೆಯಲ್ಲಿ ತೊಡಗಿರುವ ಬಿಜೆಪಿ ದೇಶದ ಅತ್ಯಂತ ನೆಚ್ಚಿನ ಪಕ್ಷ: ಪ್ರಧಾನಿ ಮೋದಿ

ಮಾರ್ಚ್ 28 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರಿಗೆ ನೋಟಿಸ್​​​ ನೀಡಿತ್ತು. ಇದಕ್ಕೆ ಉತ್ತರ ನೀಡದ ಕಾರಣ ಇಂದು ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆಯೂ ಪಶ್ಚಿಮ ಬಂಗಾಳದಲ್ಲಿ ಎನ್​​​ಐಎ ಕಾರಿನ ಮೇಲೆ ನಡೆಸಿದರು. ಇದೀಗ ಮತ್ತೆ ಅವರ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:22 pm, Sat, 6 April 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ