AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ

ಪಶ್ಚಿಮ ಬಂಗಾಳದಲ್ಲಿ ಶೇಕಡಾ 3ರಷ್ಟು  ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದು, ಉಳಿದ ಶೇಕಡಾ 97 ವಿದ್ಯಾರ್ಥಿಗಳು ಫೇಲ್​​​ ಆಗಿದ್ದಾರೆ. ಇದೀಗ ಈ ವಿಚಾರವಾಗಿ ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಹಾಗೂ ಗೌಟೆಂಗ್ ವಿಶ್ವವಿದ್ಯಾಲಯಕ್ಕೆ ಧಿಕ್ಕಾರ ಹಾಕಿದ್ದಾರೆ. 

ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ
ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಅಕ್ಷಯ್​ ಪಲ್ಲಮಜಲು​​
|

Updated on:Jul 09, 2024 | 1:24 PM

Share

ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ನಡೆಸಿದ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದೀಗ ಈ ವಿಚಾರವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಸರ್ಕಾರ ಹಾಗೂ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಹಾಕುತ್ತಿದ್ದಾರೆ. ಪರೀಕ್ಷೆ ಬರೆದ ಶೇಕಡಾ ನೂರು ವಿದ್ಯಾರ್ಥಿಗಳಲ್ಲಿ ಶೇಕಡಾ ಮೂರರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣಗೊಂಡಿದ್ದಾರೆ. ಶೇಕಡಾ 97 ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ವಿದ್ಯಾರ್ಥಿಗಳಲ್ಲಿ ಅಚ್ಚರಿ ತಂದಿದೆ. ಇದೀಗ ಈ ಪರೀಕ್ಷೆಯಲ್ಲಿ ದೊಡ್ಡ ಅಕ್ರಮವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಗೌರ್ಬಂಗ್ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಭಟನೆ ಮಾಡಿ, ಮರು ಮೌಲ್ಯಮಾಪನ ಮಾಡಬೇಕು, ಹಾಗೂ ಈ ಫಲಿತಾಂಶವನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಯೊಬ್ಬರು ತಮ್ಮ ಬೇಡಿಕೆಯ ಪತ್ರವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

ಮಾಲ್ಡಾ ಜಿಲ್ಲಾ ತೃಣಮೂಲ ಛಾತ್ರ ಪರಿಷತ್ತಿನ ನಿಯೋಗ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಬಗ್ಗೆ ಉತ್ತರಿಸುವಂತೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ ಅಧ್ಯಕ್ಷ ಪ್ರಸೂನ್ ರಾಯ್ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಶೇ.97ರಷ್ಟು ಮಂದಿ ಪ್ರಮುಖ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ನಾವು ನಮ್ಮ ಬೇಡಿಕೆಯನ್ನು ವಿಶ್ವವಿದ್ಯಾಲಯದ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 9 July 24

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್