AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ

ಪಶ್ಚಿಮ ಬಂಗಾಳದಲ್ಲಿ ಶೇಕಡಾ 3ರಷ್ಟು  ವಿದ್ಯಾರ್ಥಿಗಳು ಮಾತ್ರ ಪಾಸ್​ ಆಗಿದ್ದು, ಉಳಿದ ಶೇಕಡಾ 97 ವಿದ್ಯಾರ್ಥಿಗಳು ಫೇಲ್​​​ ಆಗಿದ್ದಾರೆ. ಇದೀಗ ಈ ವಿಚಾರವಾಗಿ ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಹಾಗೂ ಗೌಟೆಂಗ್ ವಿಶ್ವವಿದ್ಯಾಲಯಕ್ಕೆ ಧಿಕ್ಕಾರ ಹಾಕಿದ್ದಾರೆ. 

ಪಶ್ಚಿಮ ಬಂಗಾಳ: ಶೇಕಡಾ 3ರಷ್ಟು ವಿದ್ಯಾರ್ಥಿಗಳು ಮಾತ್ರ ಪಾಸ್​​, ಉಳಿದ ಶೇಕಡಾ 97ರಷ್ಟು ವಿದ್ಯಾರ್ಥಿಗಳ ಜೀವನ ಬೀದಿಗೆ
ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಅಕ್ಷಯ್​ ಪಲ್ಲಮಜಲು​​
|

Updated on:Jul 09, 2024 | 1:24 PM

Share

ಪಶ್ಚಿಮ ಬಂಗಾಳದ ಗೌಟೆಂಗ್ ವಿಶ್ವವಿದ್ಯಾಲಯದ ನಡೆಸಿದ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದೀಗ ಈ ವಿಚಾರವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ, ಸರ್ಕಾರ ಹಾಗೂ ವಿಶ್ವವಿದ್ಯಾಲಯದ ವಿರುದ್ಧ ಘೋಷಣೆ ಹಾಕುತ್ತಿದ್ದಾರೆ. ಪರೀಕ್ಷೆ ಬರೆದ ಶೇಕಡಾ ನೂರು ವಿದ್ಯಾರ್ಥಿಗಳಲ್ಲಿ ಶೇಕಡಾ ಮೂರರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣಗೊಂಡಿದ್ದಾರೆ. ಶೇಕಡಾ 97 ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ವಿದ್ಯಾರ್ಥಿಗಳಲ್ಲಿ ಅಚ್ಚರಿ ತಂದಿದೆ. ಇದೀಗ ಈ ಪರೀಕ್ಷೆಯಲ್ಲಿ ದೊಡ್ಡ ಅಕ್ರಮವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಗೌರ್ಬಂಗ್ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಭಟನೆ ಮಾಡಿ, ಮರು ಮೌಲ್ಯಮಾಪನ ಮಾಡಬೇಕು, ಹಾಗೂ ಈ ಫಲಿತಾಂಶವನ್ನು ವಾಪಸ್ಸು ಪಡೆಯಬೇಕು ಎಂದು ಹೇಳಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಯೊಬ್ಬರು ತಮ್ಮ ಬೇಡಿಕೆಯ ಪತ್ರವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಧರ್ಮದೇಟು; ವಿಡಿಯೋ ವೈರಲ್

ಮಾಲ್ಡಾ ಜಿಲ್ಲಾ ತೃಣಮೂಲ ಛಾತ್ರ ಪರಿಷತ್ತಿನ ನಿಯೋಗ ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳು ಈ ಬಗ್ಗೆ ಉತ್ತರಿಸುವಂತೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ ಅಧ್ಯಕ್ಷ ಪ್ರಸೂನ್ ರಾಯ್ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ನಂತರ ಶೇ.97ರಷ್ಟು ಮಂದಿ ಪ್ರಮುಖ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ನಾವು ನಮ್ಮ ಬೇಡಿಕೆಯನ್ನು ವಿಶ್ವವಿದ್ಯಾಲಯದ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 9 July 24

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ