AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Panchayat Election: ಮುರ್ಷಿದಾಬಾದ್‌, ದಿನಾಟಾದಲ್ಲಿ ಮತದಾನ ಸ್ಥಗಿತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಮುಖ್ಯಮಂತ್ರಿ  ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಕೊಲೆ ಮತ್ತು ಅವ್ಯವಸ್ಥೆಗಳಿಲ್ಲದೆ ಮಮತಾ ಬ್ಯಾನರ್ಜಿಗೆ ರಾಜ್ಯದಲ್ಲಿ ಚುನಾವಣೆ ನಡೆಸಲು ಬರುವುದಿಲ್ಲ. ಪಂಚಾಯತ್ ಚುನಾವಣೆಯಲ್ಲಿ ತನ್ನ ಪಕ್ಷದ ಪ್ರಾಬಲ್ಯವನ್ನು ಸ್ಥಾಪಿಸಲು ಅವರು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ನೋಡಿ ಎಂದು ಹೇಳಿದ್ದಾರೆ.

West Bengal Panchayat Election: ಮುರ್ಷಿದಾಬಾದ್‌, ದಿನಾಟಾದಲ್ಲಿ ಮತದಾನ ಸ್ಥಗಿತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ
Follow us
ರಶ್ಮಿ ಕಲ್ಲಕಟ್ಟ
|

Updated on:Jul 08, 2023 | 8:08 PM

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ (West Bengal Panchayat Election) ವೇಳೆ ವ್ಯಾಪಕ ಹಿಂಸಾಚಾರ ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಪಡೆಗಳು ವಿಫಲವಾಗಿವೆ ಎಂದು ತೃಣಮೂಲ ಕಾಂಗ್ರೆಸ್ (TMC) ಆರೋಪಿಸಿದೆ. ಕೂಚ್ ಬೆಹಾರ್ ಜಿಲ್ಲೆಯ ದಿನಾಟಾದಲ್ಲಿ, ಬಾರಾವಿಟಾ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ ಮತಪತ್ರಗಳಿಗೆ ಬೆಂಕಿ ಹಚ್ಚಲಾಯಿತು. ಬಾರ್ನಾಚಿನಾ ಪ್ರದೇಶದ ಮತ್ತೊಂದು ಮತಗಟ್ಟೆಯಲ್ಲಿ ಸ್ಥಳೀಯರು ಫೇಕ್ ಮತದಾನ ಮಾಡಲಾಗಿದೆ ಎಂದು ಆರೋಪಿಸಿ ಮತಯಂತ್ರಗಳ ಜತೆಗೆ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆಗಳೂ ನಡೆದಿವೆ.

ನಂದಿಗ್ರಾಮದಲ್ಲಿ ಮಹಿಳಾ ಮತದಾರರು ತಮ್ಮ ಕೈಯಲ್ಲಿ ವಿಷದ ಬಾಟಲಿಗಳೊಂದಿಗೆ ಪೊಲೀಸ್ ಅಧಿಕಾರಿಯನ್ನು ಘೇರಾವ್ ಮಾಡಿ, ಪ್ರದೇಶದಲ್ಲಿ ಕೇಂದ್ರ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದರು. ಇದೆಲ್ಲದರ ನಡುವೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಉತ್ತರ 24 ಪರಗಣದ ವಿವಿಧ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ದೂರುಗಳನ್ನು ಆಲಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇಲ್ಲಿವರೆಗೆ ಏನೇನಾಯ್ತು?

  1. ಚುನಾವಣಾ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯ ಚುನಾವಣಾ ಆಯುಕ್ತರ ಕಚೇರಿಗೆ ಆಗಮಿಸಿದ್ದಾರೆ.
  2. ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಡಾ ಸುಕಾಂತ ಮಜುಂದಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾದ ನಂತರ ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವಂತೆ ಮನವಿ ಮಾಡಿದ್ದಾರೆ. ಮಜುಂದಾರ್ ಅವರು 17 ಜಿಲ್ಲೆಗಳಲ್ಲಿ ಬೂತ್ ವಶಪಡಿಸಿಕೊಳ್ಳುವಿಕೆ, ಸುಳ್ಳು ಮತದಾನ ನಡೆದಿರುವುದಾಗಿ ಆರೋಪಿಸಿದ್ದಾರೆ.
  3. ಪಶ್ಚಿಮ ಮಿಡ್ನಾಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.79.1ರಷ್ಟು ಮತದಾನವಾಗಿದೆ.
  4. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 66.2 ರಷ್ಟು ಮತದಾನವಾಗಿದೆ.
  5. ಬಂಗಾಳ ಪಂಚಾಯತ್ ಚುನಾವಣೆಯ ಹಿಂಸಾಚಾರಕ್ಕೆ ವಿರೋಧ ಪಕ್ಷಗಳನ್ನು ಟಿಎಂಸಿ ದೂಷಿಸಿದ್ದು, ರಾಜ್ಯಪಾಲರು ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ.
  6. ಮುರ್ಷಿದಾಬಾದ್ ಜಿಲ್ಲೆಯ ಹರಿಹರಪಾರಾದಲ್ಲಿ ಕೇಂದ್ರ ಪಡೆಯ ಯೋಧನ ಬಲಗಣ್ಣಿಗೆ ಗಾಯವಾಗಿದೆ.
  7. ರಾಜ್ಯ ಚುನಾವಣಾ ಆಯೋಗವು ತರಾತುರಿಯಲ್ಲಿ ಕೇಂದ್ರ ಪಡೆಗಳ ನಿಯೋಜನೆ ಇಲ್ಲದೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ. ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದೆವು, ನ್ಯಾಯಾಲಯವೂ ಒಪ್ಪಿಕೊಂಡಿದೆ. ಆದರೆ ನೆಲದ ವಾಸ್ತವವೇ ಬೇರೆ. ಕೇಂದ್ರ ಪಡೆಗಳನ್ನು ಗಸ್ತು ಕರ್ತವ್ಯಕ್ಕೆ ಮಾತ್ರ ಇರಿಸಲಾಗಿದೆ ಮತ್ತು ಕೇಂದ್ರ ಪಡೆ ಸಿಬ್ಬಂದಿಯನ್ನು ಯಾವುದೇ ಬೂತ್‌ನಲ್ಲಿ ನಿಯೋಜಿಸಲಾಗಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿ ಹೇಳಿದ್ದಾರೆ.

ಕೊಲೆ ನಡೆದರೆ ಅಧಿಕಾರ ಗ್ಯಾರಂಟಿ ಎಂದು ಟಿಎಂಸಿ ಭಾವಿಸುತ್ತದೆ: ಬಿಜೆಪಿ

ಶನಿವಾರ ನಡೆದ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರದ ಬಗ್ಗೆ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, “ಕೊಲೆಗಳನ್ನು” ಅಧಿಕಾರದ ಗ್ಯಾರಂಟಿ ಎಂದು ಮಮತಾ ನೇತೃತ್ವದ ಪಕ್ಷ ಭಾವಿಸುತ್ತದೆ. ರಾಜ್ಯದ “ಬಾಂಬ್ ಸಂಸ್ಕೃತಿ” ಭಾರತ ಮತ್ತು ಅದರ ಪ್ರಜಾಪ್ರಭುತ್ವವನ್ನು ವಿಶ್ವದಾದ್ಯಂತ ಅವಮಾನಕ್ಕೀಡಾಗುವಂತೆ ಮಾಡಿದೆ. ಮುಖ್ಯಮಂತ್ರಿ  ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಕೊಲೆ ಮತ್ತು ಅವ್ಯವಸ್ಥೆಗಳಿಲ್ಲದೆ ಮಮತಾ ಬ್ಯಾನರ್ಜಿಗೆ ರಾಜ್ಯದಲ್ಲಿ ಚುನಾವಣೆ ನಡೆಸಲು ಬರುವುದಿಲ್ಲ. ಪಂಚಾಯತ್ ಚುನಾವಣೆಯಲ್ಲಿ ತನ್ನ ಪಕ್ಷದ ಪ್ರಾಬಲ್ಯವನ್ನು ಸ್ಥಾಪಿಸಲು ಅವರು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ನೋಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video Viral: ಮತಗಟ್ಟೆಯಿಂದ ಮತ ಪೆಟ್ಟಿಗೆ ಕದ್ದು ಓಡಿಹೋದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಚುನಾವಣೆ ಸಮಯದಲ್ಲಿ 12 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು. ಮತಯಂತ್ರಗಳಲ್ಲಿ ಇವಿಎಂಗಳ ಬದಲಿಗೆ ಮತಪೆಟ್ಟಿಗೆಗಳ ಬಳಕೆಯನ್ನು ಕಟುವಾಗಿ ಟೀಕಿಸಿದ ಅವರು, ಗೂಂಡಾಗಳು ಈ ಪೆಟ್ಟಿಗೆಗಳೊಂದಿಗೆ ಓಡಿಹೋಗುತ್ತಿರುವ ದೃಶ್ಯವನ್ನು ಉಲ್ಲೇಖಿಸಿ ಅಧಿಕಾರ ಸ್ಥಾಪಿಸಲು ಜನರನ್ನು ಕೊಲ್ಲಲಾಗುತ್ತಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Sat, 8 July 23

ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ