AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengal Panchayat Elections: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ದಿನದಂದು ತಡರಾತ್ರಿ ಹಿಂಸಾಚಾರ, ಐಎಸ್​ಎಫ್ ಕಾರ್ಯಕರ್ತ ಸಾವು, ಪೊಲೀಸರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election)ಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ.

Bengal Panchayat Elections: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ದಿನದಂದು ತಡರಾತ್ರಿ ಹಿಂಸಾಚಾರ, ಐಎಸ್​ಎಫ್ ಕಾರ್ಯಕರ್ತ ಸಾವು, ಪೊಲೀಸರಿಗೆ ಗಾಯ
ಹಿಂಸಾಚಾರImage Credit source: India Today
ನಯನಾ ರಾಜೀವ್
|

Updated on:Jul 12, 2023 | 10:19 AM

Share

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election)ಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ. ಜುಲೈ 11 ರಂದು ಮತಎಣಿಕೆ ನಡೆದಿದ್ದು ತಡರಾತ್ರಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಸೆಕ್ಯುಲರ್ ಫ್ರಂಟ್(ISF)ಕಾರ್ಯಕರ್ತ ಸಾವನ್ನಪ್ಪಿದ್ದು, ಪೊಲೀಸ್​ ಅಧಿಕಾರಿಗೆ ಗಾಯಗಳಾಗಿವೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಗಳ ಭಂಗಾರ್ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು, ಒಂದು ಬೂತ್‌ನಲ್ಲಿ ಮುನ್ನಡೆ ಸಾಧಿಸಿದ್ದ ಐಎಸ್‌ಎಫ್ ಅಭ್ಯರ್ಥಿಯೊಬ್ಬರು ಎಣಿಕೆಯ ಕೊನೆಯ ಸುತ್ತಿನಲ್ಲಿ ಸೋತ ನಂತರ ಘರ್ಷಣೆಗೆ ಕಾರಣವಾಯಿತು. ಸ್ಥಳದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿತ್ತು.

ಘರ್ಷಣೆಯ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೈಗೆ ಗುಂಡು ತಗುಲಿದೆ. ಗಾಯಗೊಂಡ ಅಧಿಕಾರಿಯನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯನ್ನು ಬೆಚ್ಚಿಬೀಳಿಸಿದ ಹಿಂಸಾಚಾರವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ 11 ಮಂದಿಯೊಂದಿಗೆ ಕನಿಷ್ಠ 15 ಜನರನ್ನು ಬಲಿ ತೆಗೆದುಕೊಂಡಿತು. ಕಳೆದ ತಿಂಗಳು ಚುನಾವಣೆ ಘೋಷಣೆಯಾದಾಗಿನಿಂದ, ಚುನಾವಣೆಗೆ ಸಂಬಂಧಿಸಿದ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿದೆ.

74 ಸಾವಿರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿದೆ, ಗ್ರಾಮ ಪಂಚಾಯತ್​ನಲ್ಲಿ 30,391 ಸ್ಥಾನಗಳಲ್ಲಿ, ತಾಲೂಕು ಪಂಚಾಯಿತಿಯ 2155 ಸ್ಥಾನಗಳಲ್ಲಿ, ಜಿಲ್ಲಾ ಪಂಚಾಯಿತಿಯ 88 ಸ್ಥಾನಗಳಲ್ಲಿ ಟಿಎಂಸಿ ಗೆಲುವು ದಾಖಲಿಸಿದೆ.

ಮತ್ತಷ್ಟು ಓದಿ: Bengal Panchayat Election Results: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರಾಬಲ್ಯ, 30 ಸಾವಿರಕ್ಕೂ ಅಧಿಕ ಪಂಚಾಯತ್ ಸ್ಥಾನಗಳಲ್ಲಿ ಗೆಲುವು

ಬಿಜೆಪಿಯು ಗ್ರಾಮ ಪಂಚಾಯತ್​ನ 8239 ಸ್ಥಾನಗಳಲ್ಲಿ, ತಾಲೂಕು ಪಂಚಾಯಿತಿಯ 214 ಸ್ಥಾನಗಳಲ್ಲಿ, ಜಿಲ್ಲಾ ಪಂಚಾಯಿತಿಯ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಅಖಿಲ ಭಾರತ ಸೆಕ್ಯುಲರ್ ಫ್ರಂಟ್ ಮತ್ತು ಸ್ವತಂತ್ರರು ಸೇರಿದಂತೆ 1732 ಸ್ಥಾನಗಳಲ್ಲಿ ಗೆಲವಿನ ನಗೆ ಬೀರಿದ್ದಾರೆ.

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಮತ ಎಣಿಕೆಯ ದಿನದಂದು ವಿವಿಧ ಸ್ಥಳಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು ಮುಂದುವರೆದವು. ಮತ ಎಣಿಕೆಗೂ ಮುನ್ನವೇ ಹಿಂಸಾಚಾರದ ವರದಿಯಾಗಿದೆ. ದಿನ್ಹಾಟಾ, ಹೌರಾ, ಬಸಿರ್ಹತ್, ಕೂಚ್ ಬೆಹಾರ್, ಮಾಲ್ಡಾ, ದಕ್ಷಿಣ 24 ಪರಗಣ ಜಿಲ್ಲೆಗಳ ವಿವಿಧ ಮತ ಎಣಿಕೆ ಕೇಂದ್ರಗಳಲ್ಲಿ ಬಾಂಬ್ ಸ್ಫೋಟಗಳು ಮತ್ತು ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:19 am, Wed, 12 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ