Bengal Panchayat Elections: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ದಿನದಂದು ತಡರಾತ್ರಿ ಹಿಂಸಾಚಾರ, ಐಎಸ್​ಎಫ್ ಕಾರ್ಯಕರ್ತ ಸಾವು, ಪೊಲೀಸರಿಗೆ ಗಾಯ

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election)ಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ.

Bengal Panchayat Elections: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ದಿನದಂದು ತಡರಾತ್ರಿ ಹಿಂಸಾಚಾರ, ಐಎಸ್​ಎಫ್ ಕಾರ್ಯಕರ್ತ ಸಾವು, ಪೊಲೀಸರಿಗೆ ಗಾಯ
ಹಿಂಸಾಚಾರImage Credit source: India Today
Follow us
|

Updated on:Jul 12, 2023 | 10:19 AM

ಪಶ್ಚಿಮ ಬಂಗಾಳದಲ್ಲಿ ನಡೆದ ಪಂಚಾಯತ್ ಚುನಾವಣೆ(Panchayat Election)ಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ. ಜುಲೈ 11 ರಂದು ಮತಎಣಿಕೆ ನಡೆದಿದ್ದು ತಡರಾತ್ರಿ ನಡೆದ ಹಿಂಸಾಚಾರದಲ್ಲಿ ಭಾರತೀಯ ಸೆಕ್ಯುಲರ್ ಫ್ರಂಟ್(ISF)ಕಾರ್ಯಕರ್ತ ಸಾವನ್ನಪ್ಪಿದ್ದು, ಪೊಲೀಸ್​ ಅಧಿಕಾರಿಗೆ ಗಾಯಗಳಾಗಿವೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಗಳ ಭಂಗಾರ್ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು, ಒಂದು ಬೂತ್‌ನಲ್ಲಿ ಮುನ್ನಡೆ ಸಾಧಿಸಿದ್ದ ಐಎಸ್‌ಎಫ್ ಅಭ್ಯರ್ಥಿಯೊಬ್ಬರು ಎಣಿಕೆಯ ಕೊನೆಯ ಸುತ್ತಿನಲ್ಲಿ ಸೋತ ನಂತರ ಘರ್ಷಣೆಗೆ ಕಾರಣವಾಯಿತು. ಸ್ಥಳದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದರಿಂದ ಉದ್ವಿಗ್ನತೆ ಹೆಚ್ಚಿತ್ತು.

ಘರ್ಷಣೆಯ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೈಗೆ ಗುಂಡು ತಗುಲಿದೆ. ಗಾಯಗೊಂಡ ಅಧಿಕಾರಿಯನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ಜುಲೈ 8 ರಂದು ನಡೆದ ಪಂಚಾಯತ್ ಚುನಾವಣೆಯನ್ನು ಬೆಚ್ಚಿಬೀಳಿಸಿದ ಹಿಂಸಾಚಾರವು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ 11 ಮಂದಿಯೊಂದಿಗೆ ಕನಿಷ್ಠ 15 ಜನರನ್ನು ಬಲಿ ತೆಗೆದುಕೊಂಡಿತು. ಕಳೆದ ತಿಂಗಳು ಚುನಾವಣೆ ಘೋಷಣೆಯಾದಾಗಿನಿಂದ, ಚುನಾವಣೆಗೆ ಸಂಬಂಧಿಸಿದ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿದೆ.

74 ಸಾವಿರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಟಿಎಂಸಿ ಗೆಲುವು ಸಾಧಿಸಿದೆ, ಗ್ರಾಮ ಪಂಚಾಯತ್​ನಲ್ಲಿ 30,391 ಸ್ಥಾನಗಳಲ್ಲಿ, ತಾಲೂಕು ಪಂಚಾಯಿತಿಯ 2155 ಸ್ಥಾನಗಳಲ್ಲಿ, ಜಿಲ್ಲಾ ಪಂಚಾಯಿತಿಯ 88 ಸ್ಥಾನಗಳಲ್ಲಿ ಟಿಎಂಸಿ ಗೆಲುವು ದಾಖಲಿಸಿದೆ.

ಮತ್ತಷ್ಟು ಓದಿ: Bengal Panchayat Election Results: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರಾಬಲ್ಯ, 30 ಸಾವಿರಕ್ಕೂ ಅಧಿಕ ಪಂಚಾಯತ್ ಸ್ಥಾನಗಳಲ್ಲಿ ಗೆಲುವು

ಬಿಜೆಪಿಯು ಗ್ರಾಮ ಪಂಚಾಯತ್​ನ 8239 ಸ್ಥಾನಗಳಲ್ಲಿ, ತಾಲೂಕು ಪಂಚಾಯಿತಿಯ 214 ಸ್ಥಾನಗಳಲ್ಲಿ, ಜಿಲ್ಲಾ ಪಂಚಾಯಿತಿಯ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಅಖಿಲ ಭಾರತ ಸೆಕ್ಯುಲರ್ ಫ್ರಂಟ್ ಮತ್ತು ಸ್ವತಂತ್ರರು ಸೇರಿದಂತೆ 1732 ಸ್ಥಾನಗಳಲ್ಲಿ ಗೆಲವಿನ ನಗೆ ಬೀರಿದ್ದಾರೆ.

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಮತ ಎಣಿಕೆಯ ದಿನದಂದು ವಿವಿಧ ಸ್ಥಳಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು ಮುಂದುವರೆದವು. ಮತ ಎಣಿಕೆಗೂ ಮುನ್ನವೇ ಹಿಂಸಾಚಾರದ ವರದಿಯಾಗಿದೆ. ದಿನ್ಹಾಟಾ, ಹೌರಾ, ಬಸಿರ್ಹತ್, ಕೂಚ್ ಬೆಹಾರ್, ಮಾಲ್ಡಾ, ದಕ್ಷಿಣ 24 ಪರಗಣ ಜಿಲ್ಲೆಗಳ ವಿವಿಧ ಮತ ಎಣಿಕೆ ಕೇಂದ್ರಗಳಲ್ಲಿ ಬಾಂಬ್ ಸ್ಫೋಟಗಳು ಮತ್ತು ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:19 am, Wed, 12 July 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?