AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ

ಬಂಗಾಳದ ಪಂಚಾಯತ್ ಚುನಾವಣೆಗಳಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ 604 ಮತಗಟ್ಟೆಗಳಲ್ಲಿ ನಡೆದ ಮತದಾನವನ್ನು ಅಸಿಂಧು ಎಂದು ಘೋಷಿಸಿದ ರಾಜ್ಯ ಚುನಾವಣಾ ಆಯೋಗವು, ನಾಳೆ (ಜುಲೈ 10) ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮರು ಮತದಾನ ನಡೆಯಲಿದೆ ಎಂದು ಘೋಷಿಸಿದೆ.

West Bengal: ಹಿಂಸಾಚಾರ ಹಿನ್ನೆಲೆ ಪಶ್ಚಿಮ ಬಂಗಾಳದ 604 ಪಂಚಾಯತ್ ಬೂತ್‌ಗಳಲ್ಲಿ ಮರು ಮತದಾನ
ಪಶ್ಚಿಮ ಬಂಗಾಳದ ವಿವಿಧ ಪಂಚಾಯತ್ ಬೂತ್​ಗಳಿಗೆ ನಾಳೆ ಮರು ಮತದಾನImage Credit source: PTI
Follow us
Rakesh Nayak Manchi
|

Updated on: Jul 09, 2023 | 10:04 PM

ಪಶ್ಚಿಮ ಬಂಗಾಳದ ಪಂಚಾಯತ್​ ಚುನಾವಣೆ (West Bengal Panchayat Elections) ವೇಳೆ ಭಾರೀ ಹಿಂಸಾಚಾರ (Violence) ನಡೆದ ಹಿನ್ನೆಲೆ 604 ಮತಗಟ್ಟೆಗಳಲ್ಲಿ ನಡೆದ ಮತದಾನವನ್ನು ಅಸಿಂಧುಗೊಳಿಸಿ ಇಂದು (ಜುಲೈ 9) ರಾಜ್ಯ ಚುನಾವಣಾ ಆಯೋಗವು ಆದೇಶಿಸಿದೆ. ಅಲ್ಲದೆ, ನಾಳೆ (ಜುಲೈ 10) ಈ ಬೂತ್​ಗಳಿಗೆ ಮರುಮತದಾನ ನಡೆಯಲಿದೆ ಎಂದು ಘೋಷಿಸಿದ್ದು, ಬೆಳಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮುರ್ಷಿದಾಬಾದ್‌ನಲ್ಲಿ 175 ಬೂತ್‌ಗಳಲ್ಲಿ ಮರು ಮತದಾನ ನಡೆಯಲಿದ್ದು, ಮಾಲ್ಡಾದಲ್ಲಿ 112, ನಾಡಿಯಾದಲ್ಲಿ 89, ಉತ್ತರ 24 ಪರಗಣಗಳಲ್ಲಿ 46, ದಕ್ಷಿಣ 24 ಪರಗಣಗಳಲ್ಲಿ 36, ಪುರ್ಬಾ ಮೇದಿನಿಪುರದಲ್ಲಿ 31, ಹೂಗ್ಲಿಯಲ್ಲಿ 29, ದಕ್ಷಿಣ ದಿನಾಜ್‌ಪುರದಲ್ಲಿ 18, ಜಲ್ಪೈಗುರಿಯಲ್ಲಿ 14, ಬಿರ್ಭೂಮ್ನಲ್ಲಿ 14, ಪಶ್ಚಿಮ ಮೇದಿನಿಪುರದಲ್ಲಿ 10, ಬಂಕುರಾದಲ್ಲಿ 8, ಹೌರಾದಲ್ಲಿ 8, ಪಶ್ಚಿಮ ಬರ್ಧಮಾನ್​ನಲ್ಲಿ 6, ಪುರುಲಿಯಾದಲ್ಲಿ 4, ಅಲಿಪುರ್‌ದುವಾರ್‌ನಲ್ಲಿ 1 ಹಾಗೂ ಪುರ್ಬಾ ಬರ್ಧಮಾನ್‌ನಲ್ಲಿ 3 ಬೂತ್​ಗಳಿಗೆ ಮರು ಮತದಾನ ನಡೆಯಲಿದೆ​.

ಇದನ್ನೂ ಓದಿ: West Bengal: ಚುನಾವಣಾ ಸಂಬಂಧಿತ ಹಿಂಸಾಚಾರ, ಇಬ್ಬರು ಟಿಎಂಸಿ ಕಾರ್ಯಕರ್ತರ ಸಾವು, ಒಟ್ಟು ಮೃತರ ಸಂಖ್ಯೆ 20ಕ್ಕೆ ಏರಿಕೆ

ದಕ್ಷಿಣ 24 ಪ್ಯಾರಗನ್‌ಗಳಲ್ಲಿ, ಡೈಮಂಡ್ ಹಾರ್ಬರ್‌ನಲ್ಲಿ 10 ಸೇರಿದಂತೆ 36 ಬೂತ್‌ಗಳಲ್ಲಿ ಮರು ಮತದಾನ ನಡೆಯಲಿದ್ದು, ಗೋಸಾಬ ಮತ್ತು ಜೋಯನಗರದಲ್ಲಿ ತಲಾ 5, ಬಸಂತಿಯಲ್ಲಿ 4, ಕುಲ್ತಾಲಿ, ಜೋಯ್‌ನಗರ II ರಲ್ಲಿ ತಲಾ 3, ಮಂದಿರ ಬಜಾರಿನಲ್ಲಿ 2, ಬಿಷ್ಣುಪುರ್, ಬರುಯಿಪುರ್, ಮಥುರಾಪುರ ಮತ್ತು ಮಗ್ರಾಹತ್‌ನಲ್ಲಿ ತಲಾ ಒಂದೊಂದು ಬೂತ್​ಗಳಲ್ಲಿ ಮರು ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಶನಿವಾರ ಪಂಚಾಯತ್ ಚುನಾವಣೆಗೆ ಮತದಾನ ನಡೆದಿತ್ತು. ಈ ವೇಳೆ ಹಲವೆಡೆ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಹಿಂಸಾಚಾರಗಳು ನಡೆದಿದ್ದವು. ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು. ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿದ ಹಲವಾರು ಘಟನೆಗಳು ಕೂಡ ನಡೆದಿರುವುದಾಗಿ ವರದಿಯಾಗಿತ್ತು. ಅದರಂತೆ ರಾಜ್ಯ ಚುನಾವಣಾ ಆಯೋಗವು ಹಿಂಸಾಚಾರದಲ್ಲಿ ಆದ ಸಾವುಗಳು ಮತ್ತು ಹಿಂಸಾಚಾರದ ಬಗ್ಗೆ ವಿವರವಾದ ವರದಿಯನ್ನು ಜಿಲ್ಲಾಧಿಕಾರಿಗಳಿಂದ ಕೇಳಿದೆ.

ರಾಜ್ಯದ ಮೂರು ಹಂತದ ಪಂಚಾಯತ್ ವ್ಯವಸ್ಥೆಯಲ್ಲಿ ಒಟ್ಟು 73,887 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ 5.67 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರೆ, ತಾತ್ಕಾಲಿಕವಾಗಿ ಶೇಕಡಾ 66.28 ರಷ್ಟು ಮತದಾನ ದಾಖಲಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ