AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal Elections 2021: ಮತದಾನ ಆರಂಭದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ 22 ಕಚ್ಚಾ ಬಾಂಬ್ ಪತ್ತೆ

ಚುನಾವಣೆಯ ಮೊದಲ ಹಂತದ ಬೆಳ್ಳಂಬೆಳಗ್ಗೆ ಅಪಾರ ಪ್ರಮಾಣದ ಕಚ್ಚಾ ಬಾಂಬ್​ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

West Bengal Elections 2021: ಮತದಾನ ಆರಂಭದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ 22 ಕಚ್ಚಾ ಬಾಂಬ್ ಪತ್ತೆ
ಮೊದಲ ಹಂತದ ಚುನಾವಣೆಯಲ್ಲಿ ತಾಪಮಾನ ಪರೀಕ್ಷೆ ಮಾಡಲಾಗುತ್ತಿದೆ.
guruganesh bhat
|

Updated on: Mar 27, 2021 | 9:40 AM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ. ಈ ಬೆನ್ನಲ್ಲೇ ಕೊಲ್ಕತ್ತಾ ಪೊಲೀಸರು 22 ಕಚ್ಚಾ ಬಾಂಬ್​ಗಳನ್ನು ವಶಪಸಿಕೊಂಡಿದ್ದಾರೆ. ಚುನಾವಣೆಯ ಮೊದಲ ಹಂತದ ಬೆಳ್ಳಂಬೆಳಗ್ಗೆ ಅಪಾರ ಪ್ರಮಾಣದ ಕಚ್ಚಾ ಬಾಂಬ್​ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಪಶ್ಚಿಮಬಂಗಾಳದ 30 ವಿಧಾನಸಭಾ ಕ್ಷೇತ್ರಗಳ 191 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ. ಬಂಕುರಾ, ಪುರುಲಿಯಾ, ಜಾರ್ಗ್ರಾಮ್, ಪೂರ್ವ ಮಿಡ್ನಾಪುರ ಮತ್ತು ಪಶ್ಚಿಮ ಮೆಡ್ನಾಪುರ ಕ್ಷೇತ್ರಗಳು ಇಂದು ಮತದಾನ ನಡೆಯುವ ಮಹತ್ವದ ಕ್ಷೇತ್ರಗಳಾಗಿವೆ.‌ ಇಂದು ನಡೆಯಲಿರುವ ಕ್ಷೇತ್ರಗಳಲ್ಲಿ 2016 ರಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ 27 ಸ್ಥಾನಗಳನ್ನು ಗೆದ್ದಿತ್ತು ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಿ ಗೆದ್ದಿತ್ತು. ಇಂದು ಚುನಾವಣೆ ನಡೆಯುವ 30 ಕ್ಷೇತ್ರಗಳಲ್ಲಿ ಬಿಜೆಪಿ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಬಿಜೆಪಿ ಮಿತ್ರಪಕ್ಷ ಎಜೆಎಸ್‌ಯು ಒಂದು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದೆ. ಟಿಎಂಸಿ ಕೂಡ 29 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಒಂದು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಗೆ ಟಿಎಂಸಿ ಬೆಂಬಲ ಘೋಷಿಸಿದೆ. ಬೆಳಗ್ಗೆ 8ರಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6ಕ್ಕೆ ಮುಕ್ತಾಯವಾಗಲಿದೆ. ( West Bengal phase 1 elections started early morning 22 crude bombs recovered from Kolkata)

ಪಶ್ಚಿಮ ಬಂಗಾಳದಲ್ಲಿ ಬಂಗಾಳದ ಕುವರಿ ಮಮತಾ ಬ್ಯಾನರ್ಜಿ ಅವರಿಗೆ ಖಂಡಿತವಾಗಿಯೂ ಜಯ ದೊರಕಲಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಓ‘ಬ್ರೆಯಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮೊದಲ ಹಂತದ ಮತದಾನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ