AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

West Bengal Post-Poll Violence: ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರದ ಹಿಂಸಾಚಾರದ ಪರಿಣಾಮವಾಗಿ ಜನರು ಹಲ್ಲೆಗೆ ಒಳಗಾಗಿದ್ದರು, ಮನೆಗಳಿಂದ ಪಲಾಯನಗೈದರು ಮತ್ತು ಅವರ ಆಸ್ತಿಗಳನ್ನು ನಾಶಪಡಿಸಲಾಗಿದೆ ಎಂದು ಪಿಐಎಲ್‌ಗಳಲ್ಲಿ ಹೇಳಲಾಗಿದ್ದು ಇವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹೇಳಲಾಗಿದೆ.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತ ಹೈಕೋರ್ಟ್​
TV9 Web
| Edited By: |

Updated on:Aug 19, 2021 | 12:26 PM

Share

ದೆಹಲಿ: ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ (post-poll violence) ವೇಳೆ ನಡೆದ ಕೊಲೆ, ಅತ್ಯಾಚಾರ ಪ್ರಕರಣಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಿದೆ. ಇತರ ಅಪರಾಧಗಳ ತನಿಖೆಗಾಗಿ ಎಸ್ಐಟಿಯನ್ನು ಸ್ಥಾಪಿಸಲು ಹೈಕೋರ್ಟ್ ಆದೇಶಿಸಿದೆ. ಪಶ್ಚಿಮ ಬಂಗಾಳ ಕೇಡರ್‌ನ ಹಿರಿಯ ಅಧಿಕಾರಿಗಳು ವಿಶೇಷ ತನಿಖಾ ತಂಡದ ಭಾಗವಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ. ಎಲ್ಲಾ ದಾಖಲೆಗಳನ್ನು ಮತ್ತು ರೆಕಾರ್ಡ್​​ಗಳನ್ನುತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರವನ್ನು ಕೇಳಲಾಗಿದೆ. “ಒಂದು ವೇಳೆ, ರಾಜ್ಯವು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು” ಎಂದು ಹೈಕೋರ್ಟ್ ಹೇಳಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಕೋರಿರುವ ಪಿಐಎಲ್‌ಗಳ ವಿಚಾರಣೆ ನಡೆಸಿ ನ್ಯಾಯಾಲಯ ಈ ಆದೇಶ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರದ ಹಿಂಸಾಚಾರದ ಪರಿಣಾಮವಾಗಿ ಜನರು ಹಲ್ಲೆಗೆ ಒಳಗಾಗಿದ್ದರು, ಮನೆಗಳಿಂದ ಪಲಾಯನಗೈದರು ಮತ್ತು ಅವರ ಆಸ್ತಿಗಳನ್ನು ನಾಶಪಡಿಸಲಾಗಿದೆ ಎಂದು ಪಿಐಎಲ್‌ಗಳಲ್ಲಿ ಹೇಳಲಾಗಿದ್ದು ಇವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹೇಳಲಾಗಿದೆ.

“ಚುನಾವಣೋತ್ತರ ಹಿಂಸಾಚಾರ” ದಲ್ಲಿ ವಿವಿಧ ಆರೋಪಗಳನ್ನು ತನಿಖೆ ಮಾಡಲು ತನಿಖಾ ಸಮಿತಿಯನ್ನು ರಚಿಸುವಂತೆ ರಾಷ್ಟ್ರೀಯ ಮಾನವ ಸಂಪನ್ಮೂಲ ಆಯೋಗಕ್ಕೆ (NHRC)ಗೆ ಹೈಕೋರ್ಟ್ ಆದೇಶಿಸಿತ್ತು. ತನ್ನ ವರದಿಯಲ್ಲಿ NHRC ಸಮಿತಿ “ಕೊಲೆ ಮತ್ತು ಅತ್ಯಾಚಾರದಂತಹ ಘೋರ ಅಪರಾಧಗಳ” ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.

ಚುನಾವಣೆಯ ನಂತರದ ಹಿಂಸಾಚಾರದ ಸಮಯದಲ್ಲಿ ನಡೆದಿದೆ ಎಂದು ಹೇಳಿರುವ ಈ ಪ್ರಕರಣಗಳ ವಿಚಾರಣೆಯನ್ನು ರಾಜ್ಯದ ಹೊರಗೆ ನಡೆಸಬೇಕು ಎಂದು ಹೇಳಿದೆ. ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನ ನಂತರ ಭುಗಿಲೆದ್ದ ರಾಜಕೀಯ ಹಿಂಸಾಚಾರವನ್ನು ತಡೆಯುವಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವರದಿಯು ಬಲವಾಗಿ ಟೀಕಿಸಿದೆ.

ಇದನ್ನೂ ಓದಿ: ಮಂಗಗಳ ಮಾರಣಹೋಮ‌ ಮಾಸುವ ಮುನ್ನವೇ ಹಾಸನದಲ್ಲಿ 20ಕ್ಕೂ ಹೆಚ್ಚು ಕರುಗಳು ಸಾವು

ಇದನ್ನೂ ಓದಿ: Ashraf Ghani: ಅಫ್ಘಾನಿಸ್ತಾನ ಬಿಟ್ಟ ಮೇಲೆ ಮೊದಲ ವಿಡಿಯೋ ಬಿಡುಗಡೆ ಮಾಡಿದ ಅಶ್ರಫ್​ ಘನಿ; ಹೇಳಿದ್ದೇನು?

(West Bengal post-poll violence Calcutta high court ordered CBI probe into alleged into murder rape cases)

Published On - 12:26 pm, Thu, 19 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!