AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuntal Ghsoh Arrest: ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿ ನಾಯಕ ಕುಂತಲ್ ಘೋಷ್ ಬಂಧಿಸಿ ಇ.ಡಿ

ಚಿನಾರ್ ಪಾರ್ಕ್‌ನಲ್ಲಿರುವ ಕುಂತಲ್ ಘೋಷ್ ಅವರ ಐಷಾರಾಮಿ ಫ್ಲ್ಯಾಟ್​​ಗೆ ಶುಕ್ರವಾರವೇ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಕುಂತಲ್ ಅವರನ್ನು ಸುದೀರ್ಘ ವಿಚಾರಣೆಗೂ ಒಳಪಡಿಸಿದ್ದರು.

Kuntal Ghsoh Arrest: ಶಿಕ್ಷಕರ ನೇಮಕಾತಿ ಹಗರಣ; ಟಿಎಂಸಿ ನಾಯಕ ಕುಂತಲ್ ಘೋಷ್ ಬಂಧಿಸಿ ಇ.ಡಿ
ಕುಂತಲ್ ಘೋಷ್
ಗಣಪತಿ ಶರ್ಮಾ
|

Updated on:Jan 21, 2023 | 1:21 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ಶಿಕ್ಷಕರ ನೇಮಕಾತಿ ಹಗರಣಕ್ಕೆ (Teachers’ Tecruitment Scam) ಸಂಬಂಧಿಸಿ ತೃಣಮೂಲ ಕಾಂಗ್ರೆಸ್ (TMC) ಯುವ ನಾಯಕ ಕುಂತಲ್ ಘೋಷ್ (Kuntal Ghsoh) ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬೆಳಿಗ್ಗೆ ಬಂಧಿಸಿದೆ. ಚಿನಾರ್ ಪಾರ್ಕ್‌ನಲ್ಲಿರುವ ಕುಂತಲ್ ಘೋಷ್ ಅವರ ಐಷಾರಾಮಿ ಫ್ಲ್ಯಾಟ್​​ಗೆ ಶುಕ್ರವಾರವೇ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು. ಕುಂತಲ್ ಅವರನ್ನು ಸುದೀರ್ಘ ವಿಚಾರಣೆಗೂ ಒಳಪಡಿಸಿದ್ದರು. ವಿಚಾರಣೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳು ಹಲವು ದಾಖಲೆಗಳನ್ನೂ ವಶಪಡಿಸಿದ್ದಾರೆ. ಆದರೆ, ಯಾವುದೇ ಹಣ ಸಿಕ್ಕಿಲ್ಲ ಎಂದು ಇ.ಡಿ ಮೂಲಗಳು ತಿಳಿಸಿವೆ.

ಕುಂತಲ್ ಘೋಷ್ ಅವರು ಬಳಗಢ ಬ್ಲಾಕ್‌ನ ಶ್ರೀಪುರ ಬಳಗಾರ ಪಂಚಾಯತ್‌ನ ಧವಾಪರ ನಿವಾಸಿಯಾಗಿದ್ದಾರೆ. 2016ರಲ್ಲಿ ರಾಜಕೀಯ ಆರಂಭಿಸಿದ ಅವರು, ಕ್ರಮೇಣ ರಾಜಕೀಯದಲ್ಲಿ ಔನ್ನತ್ಯಕ್ಕೇರಿದರು. ರಾಜಕೀಯದ ಹೊರತಾಗಿ ಎನ್‌ಜಿಒ ಒಂದನ್ನೂ ಅವರು ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

2014ರಿಂದ 2021ರ ಅವಧಿಯಲ್ಲಿ ನಡೆದಿದ್ದ ಶಿಕ್ಷಕರ ನೇಮಕಾತಿ ಸಂದರ್ಭ ಅಭ್ಯರ್ಥಿಗಳಿಂದ ಟಿಎಂಸಿ ನಾಯಕರು ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈ ಕುರಿತು ಸಿಬಿಐ ಹಾಗೂ ಇ.ಡಿ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು ಈ ಹಿಂದೆಯೇ ಇ.ಡಿ ಬಂಧಿಸಿದ್ದು, ಅಪಾರ ಪ್ರಮಾಣದ ನಗದು ವಶಪಡಿಸಿಕೊಂಡಿತ್ತು.

ಇದನ್ನೂ ಓದಿ: Big News: ಶಿಕ್ಷಕರ ನೇಮಕಾತಿ ಹಗರಣ: ಇಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

ಹಲವೆಡೆ ದಾಳಿ ನಡೆಸಿದ್ದ ಇ.ಡಿ

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಳಿಸಿರುವ ಇ.ಡಿ ಶುಕ್ರವಾರ ಪಶ್ಚಿಮ ಬಂಗಾಳದ ಹಲವೆಡೆ ದಾಳಿ ನಡೆಸಿತ್ತು. ಕುಂತಲ್ ಘೋಷ್ ಫ್ಲ್ಯಾಟ್ ಮಾತ್ರವಲ್ಲದೆ ಇನ್ನೂ ಕೆಲವು ನಾಯಕರ ನಿವಾಸಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು. ಟಿಎಂಸಿ ನಾಯಕ ಶಂತನು ಬ್ಯಾನರ್ಜಿ ಅವರ ಹೂಗ್ಲಿಯ ಬಲಗಢ್‌ನಲ್ಲಿರುವ ಮನೆ ಮೇಲೂ ಇ.ಡಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಸುಮಾರು 12 ಗಂಟೆಗಳ ಕಾಲ ಶೋಧ ನಡೆಸಿದ್ದರು. ಶಿಕ್ಷಕರ ನೇಮಕಾತಿ ಅವ್ಯವಹಾರ ಪ್ರಕರಣದಲ್ಲಿ ಶಂತನು ಹೆಸರೂ ಕೇಳಿ ಬಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Sat, 21 January 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು