AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ರಾಜ್ಯಸಭಾ ಸದಸ್ಯೆ ಅರ್ಪಿತಾ ಘೋಷ್​ ರಾಜೀನಾಮೆ; ಹೆಚ್ಚೇನೂ ಪ್ರತಿಕ್ರಿಯೆ ನೀಡದ ಪಕ್ಷ

Arpita Ghosh: ರಾಜ್ಯಸಭೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಅರ್ಪಿತಾ ಘೋಷ್​​ರನ್ನು ಇತ್ತೀಚೆಗೆ ಆಕೆಯ ಮೂವರು ಸಹೋದ್ಯೋಗಿಗಳೊಂದಿಗೆ ಅಮಾನತುಗೊಳಿಸಲಾಗಿತ್ತು.

ಟಿಎಂಸಿ ರಾಜ್ಯಸಭಾ ಸದಸ್ಯೆ ಅರ್ಪಿತಾ ಘೋಷ್​ ರಾಜೀನಾಮೆ; ಹೆಚ್ಚೇನೂ ಪ್ರತಿಕ್ರಿಯೆ ನೀಡದ ಪಕ್ಷ
ಅರ್ಪಿತಾ ಘೋಷ್​
Follow us
TV9 Web
| Updated By: Lakshmi Hegde

Updated on: Sep 16, 2021 | 1:35 PM

ತೃಣಮೂಲ ಕಾಂಗ್ರೆಸ್​ ರಾಜ್ಯಸಭೆ ಸಂಸದೆ ಅರ್ಪಿತಾ ಘೋಷ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅರ್ಪಿತಾ ಘೋಷ್​ ನಿನ್ನೆ  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅವರು ಅದನ್ನು ಅಂಗೀಕಾರ ಮಾಡಿದ್ದಾರೆ.  2020ರ ಏಪ್ರಿಲ್​ 3ರಂದು ಅವರು ರಾಜ್ಯಸಭೆಗೆ ಚುನಾಯಿತರಾಗಿದ್ದು, ಇನ್ನೂ 5ವರ್ಷಗಳ ಕಾಲ ಅಧಿಕಾರದ ಅವಧಿ ಬಾಕಿ ಇತ್ತು. ಆದರೆ ಅದಕ್ಕೂ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬಾಲುರ್​ಘಾಟ್​​ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅದರೊಂದಿಗೆ ಅವರು ಥಿಯೇಟರ್​ ಆರ್ಟಿಸ್ಟ್​. ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.  

ಇನ್ನು ಅರ್ಪಿತಾ ಘೋಷ್​ ಪಕ್ಷದ ಇಚ್ಛೆಗೆ ಅನುಗುಣವಾಗಿಯೇ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳಿಂತ ತಿಳಿದುಬಂದಿದೆ. ಹಾಗಂತ ಅವರ ರಾಜೀನಾಮೆಗೆ ಕಾರಣವೇನು ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಕಾರ್ಯಕಾರಿ ಅಧಿಕಾರಿಯೊಬ್ಬರು, ಬೇರೆ ಹೊಸಬರಿಗಾಗಿ ಯಾರಾದರೂ ಜಾಗ ಬಿಟ್ಟುಕೊಡಲೇಬೇಕಾಗಿತ್ತು ಎಂದು ಹೇಳಿದ್ದಾರೆ.

ಇತ್ತೀಚೆಗೆ ಅಮಾನತಾಗಿದ್ದರು  ರಾಜ್ಯಸಭೆಯಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಅರ್ಪಿತಾ ಘೋಷ್​​ರನ್ನು ಇತ್ತೀಚೆಗೆ ಆಕೆಯ ಮೂವರು ಸಹೋದ್ಯೋಗಿಗಳೊಂದಿಗೆ ಅಮಾನತುಗೊಳಿಸಲಾಗಿತ್ತು. ಅದಾದ ಮೇಲೆ ಕೂಡ ಅವರೆಲ್ಲ ಸದನದ ಹೊರಗೆ ಪ್ರತಿಭಟನೆ ನಡೆಸಿದ್ದರು. ಅಂದು ಸದನದ ಕೊನೆಯಲ್ಲಿ, ತಮ್ಮ ತಮ್ಮ ಬ್ಯಾಗ್​ಗಳನ್ನು ತೆಗೆದುಕೊಳ್ಳಲು ಒಳಗೆ ಬಂದಾಗಲೂ ಕೂಡ ಭದ್ರತಾ ಸಿಬ್ಬಂದಿಯೊಂದಿಗೆ ಜಗಳ ಮಾಡಿದ್ದರು. ಟೇಬಲ್​ಗೆ ಹಾಕಿದ್ದ ಗಾಜಿನ ಹಲಗೆಗಳನ್ನು ಮುರಿದು ಹಾಕಿದ್ದರು. ಈ ಗಲಾಟೆಯಲ್ಲಿ ಮಹಿಳಾ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ದೂರು ನೀಡಿದ್ದರು.

ಇದನ್ನೂ ಓದಿ: ಹೈದರಾಬಾದ್: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದ ಆರೋಪಿಯ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

‘ಬೂಸ್ಟರ್ ಡೋಸ್​​ನಿಂದ ರೋಗ ನಿರೋಧಕ ಪ್ರತಿಕ್ರಿಯೆ ಹೆಚ್ಚಾಗಿ ನಂತರ ಸಂಕುಚಿತವಾಗುತ್ತದೆ’; ಕೊವಿಡ್ 3ನೇ ಡೋಸ್ ಎಷ್ಟು ಪರಿಣಾಮಕಾರಿ?

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ