ವಕ್ಫ್​ ಪ್ರತಿಭಟನೆ: ಪಶ್ಚಿಮ ಬಂಗಾಳದಲ್ಲಿ 3 ಮಂದಿ ಸಾವು, 138 ಜನರ ಬಂಧನ, ಹಿಂದೂಗಳು ಸುರಕ್ಷಿತವಾಗಿಲ್ಲ ಎಂದ ಬಿಜೆಪಿ

Updated on: Apr 13, 2025 | 8:30 AM

ಇತ್ತೀಚೆಗಷ್ಟೇ ಅಂಗೀಕಾರ ಪಡೆದಿರುವ ವಕ್ಫ್​ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ನಡೆದ ವಿಧ್ವಂಸಕ ಕೃತ್ಯಗಳ ವರದಿಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಶನಿವಾರ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.

ಪಶ್ಚಿಮ ಬಂಗಾಳ, ಏಪ್ರಿಲ್ 13: ಇತ್ತೀಚೆಗಷ್ಟೇ ಅಂಗೀಕಾರ ಪಡೆದಿರುವ ವಕ್ಫ್​ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ನಡೆದ ವಿಧ್ವಂಸಕ ಕೃತ್ಯಗಳ ವರದಿಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಶನಿವಾರ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ.

ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಪೊಲೀಸರು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 138 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಮೃತರಲ್ಲಿ ಒಬ್ಬ ತಂದೆ ಮತ್ತು ಮಗನನ್ನು ಶನಿವಾರ ಗುಂಪೊಂದು ಹತ್ಯೆ ಮಾಡಿದ್ದರೆ, ಮತ್ತೊಬ್ಬ ಪ್ರತಿಭಟನಾಕಾರ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತರಲ್ಲ ಎಂದು ಆರೋಪಿಸಿದ್ದು, ಮತ್ತೊಂದೆಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಾಂತಿಗಾಗಿ ಮನವಿ ಮಾಡಿದರು ಮತ್ತು ಕೆಲವು ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ವಕ್ಫ್ ಕಾನೂನನ್ನು ಕೇಂದ್ರ ಸರ್ಕಾರ ರಚಿಸಿದ್ದು, ಅದರ ಉತ್ತರವನ್ನು ಕೇಂದ್ರದಿಂದಲೇ ಪಡೆಯಬೇಕು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದರು. ರಾಜ್ಯದಲ್ಲಿ ವಕ್ಫ್ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಕೂಡ ಸ್ಪಷ್ಟಪಡಿಸಿದ್ದಾರೆ.

ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಸುಮಾರು 300 ಬಿಎಸ್‌ಎಫ್ ಸಿಬ್ಬಂದಿಯಲ್ಲದೆ, ಪಶ್ಚಿಮ ಬಂಗಾಳ ಸರ್ಕಾರದ ಕೋರಿಕೆಯ ಮೇರೆಗೆ ಇನ್ನೂ 5 ಕಂಪನಿಗಳನ್ನು ನಿಯೋಜಿಸಲಾಗಿದೆ. ಮುರ್ಷಿದಾಬಾದ್, ಮಾಲ್ಡಾ, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಯಿತು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಯಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 13, 2025 08:28 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More