AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಎಂದುಕೊಂಡು ಆ್ಯಸಿಡ್ ಹಾಕಿ ಅಡುಗೆ ಮಾಡಿದ ಮಹಿಳೆ; ಉಂಡವರ ಸ್ಥಿತಿ ಗಂಭೀರ!

ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು ನೀರು ಎಂದು ಭಾವಿಸಿ ಆ್ಯಸಿಡ್ ಹಾಕಿ ಅಡುಗೆ ಮಾಡಿದ್ದಾರೆ. ಈ ಅಡುಗೆ ಊಟ ಮಾಡಿದ ಆ ಮಹಿಳೆ ಸೇರಿದಂತೆ ಮನೆಯ 6 ಜನರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೀರು ಎಂದು ಭಾವಿಸಿ ಆ್ಯಸಿಡ್ ಹಾಕಿ ಬೇಯಿಸಿದ ಆಹಾರವನ್ನು ಸೇವಿಸಿದ ನಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ 6 ಜನರಲ್ಲಿ ಮೂವರು ವಯಸ್ಕರು ಮತ್ತು ಮೂವರು ಮಕ್ಕಳು ಎಂದು ತಿಳಿದುಬಂದಿದೆ.

ನೀರು ಎಂದುಕೊಂಡು ಆ್ಯಸಿಡ್ ಹಾಕಿ ಅಡುಗೆ ಮಾಡಿದ ಮಹಿಳೆ; ಉಂಡವರ ಸ್ಥಿತಿ ಗಂಭೀರ!
Food
ಸುಷ್ಮಾ ಚಕ್ರೆ
|

Updated on: Nov 26, 2025 | 9:40 PM

Share

ಕೊಲ್ಕತ್ತಾ, ನವೆಂಬರ್ 26: ಪಶ್ಚಿಮ ಬಂಗಾಳದ (West Bengal) ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಘಾಟಲ್‌ನ ಒಂದು ಕುಟುಂಬದ 6 ಜನರು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ಅವರೆಲ್ಲರೂ ಮನೆಯಲ್ಲಿ ತಿಂದ ಊಟ. ಆ ಮನೆಯ ಮಹಿಳೆ ನೀರು ಎಂದು ಭಾವಿಸಿ ಆ್ಯಸಿಡ್ ಹಾಕಿ ಅಡುಗೆ ಮಾಡಿದ್ದರು. ಅದನ್ನು ಊಟ ಮಾಡಿದವರ ಸ್ಥಿತಿ ಗಂಭೀರವಾಗಿದೆ. ಈ ವಿಚಿತ್ರ ಘಟನೆ ಕೇಳಿ ಆಸ್ಪತ್ರೆಯ ವೈದ್ಯರು ಹಾಗೂ ಪೊಲೀಸರು ದಂಗಾಗಿದ್ದಾರೆ.

ಈ ಘಟನೆ ನವೆಂಬರ್ 23ರಂದು ಘಾಟಲ್‌ನ ಮನೋಹರ್‌ಪುರ I ಗ್ರಾಮ ಪಂಚಾಯತ್ ವ್ಯಾಪ್ತಿಯ ರತ್ನೇಶ್ವರಬತಿ ಪ್ರದೇಶದಲ್ಲಿ ನಡೆದಿದೆ. ನೀರಿನ ಬದಲು ಆಸಿಡ್ ಬಳಸಿ ಬೇಯಿಸಿದ ಆಹಾರವನ್ನು ಸೇವಿಸಿದ ಸ್ವಲ್ಪ ಸಮಯದ ನಂತರ 6 ಜನರು ಅಸ್ವಸ್ಥರಾಗಿದ್ದಾರೆ. ಮೂವರು ಮಕ್ಕಳು ಸೇರಿದಂತೆ 6 ಜನರನ್ನೂ ಕೊಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ಅತ್ಯಾಚಾರ ಪ್ರಕರಣ; ಕಠಿಣ ಕ್ರಮಕ್ಕೆ ಮಮತಾ ಸರ್ಕಾರಕ್ಕೆ ಒಡಿಶಾ ಸಿಎಂ ಒತ್ತಾಯ

ಸಂಧು ಎಂಬ ವ್ಯಕ್ತಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಅವರು ಬೆಳ್ಳಿ ಆಭರಣಗಳನ್ನು ತಯಾರಿಸುವ ವ್ಯವಹಾರ ನಡೆಸುತ್ತಿದ್ದಾರೆ. ಸಾಮಾನ್ಯವಾಗಿ, ಕೆಲವು ಆಮ್ಲಗಳನ್ನು ಬೆಳ್ಳಿ ಪಾತ್ರೆಗಳಲ್ಲಿ ಬಳಸಲಾಗುತ್ತದೆ. ಆ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಮಹಿಳೆ ಬೆಳ್ಳಿ ಪಾತ್ರೆಗಳಿಗಾಗಿ ಇಟ್ಟಿದ್ದ ಆ್ಯಸಿಡ್ ಅನ್ನು ತೆಗೆದುಕೊಂಡು ಅದನ್ನು ನೀರು ಎಂದು ಭಾವಿಸಿ ಅದರಲ್ಲೇ ಅಡುಗೆ ಮಾಡಿದ್ದಾರೆ. ಆ್ಯಸಿಡ್ ಅನ್ನು ಸಾಮಾನ್ಯವಾಗಿ ನೀರು ಹಾಕಿಡುವ ಪಾತ್ರೆಯಲ್ಲಿ ಇಡಲಾಗಿತ್ತು. ಹೀಗಾಗಿ, ಆ ಮಹಿಳೆ ಅದನ್ನು ನೀರು ಎಂದು ಭಾವಿಸಿ ಅಡುಗೆ ಮಾಡಿದ್ದಾರೆ. ಅದರಲ್ಲಿ ಆ್ಯಸಿಡ್ ಹಾಕಿಟ್ಟಿರುವ ವಿಷಯ ಆಕೆಗೆ ತಿಳಿದಿರಲಿಲ್ಲ.

ಇದನ್ನೂ ಓದಿ: ರೈಲಿನೊಳಗೆ ಮ್ಯಾಗಿ ಬೇಯಿಸಿ, ಚಹಾ ಮಾಡಿದ ಮಹಿಳೆ! ರೈಲ್ವೆ ಇಲಾಖೆ ಎಚ್ಚರಿಕೆ

ಆ ಕುಟುಂಬದ 6 ಜನರು ಆಸಿಡ್ ಮಿಶ್ರಿತ ಊಟವನ್ನು ಸೇವಿಸಿದರು. ನಂತರ, ಅವರಿಗೆ ಹೊಟ್ಟೆ ನೋವು, ವಾಕರಿಕೆ ಮತ್ತು ತಲೆತಿರುಗುವಿಕೆ ಕಾಣಿಸಿಕೊಂಡ ನಂತರ ಅವರನ್ನು ತಕ್ಷಣ ಹತ್ತಿರದ ಕಡಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಅವರಿಗೆ ತುರ್ತು ಚಿಕಿತ್ಸೆ ನೀಡಿದರು.

ಸಮಸ್ಯೆಯ ಗಂಭೀರತೆಯನ್ನು ಅರಿತ ವೈದ್ಯರು, 6 ಮಂದಿಯನ್ನು ಉನ್ನತ ಚಿಕಿತ್ಸೆಗಾಗಿ ಕೋಲ್ಕತ್ತಾದ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವರಿಗೆ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವವರ ಸ್ಥಿತಿ ಗಂಭೀರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?