AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಇಡಿ ದಾಳಿ ವೇಳೆ ರಕ್ಷಾಕವಚ ಧರಿಸಲಿದ್ದಾರೆ ಸಿಆರ್‌ಪಿಎಫ್ ಯೋಧರು

ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ನಿವಾಸದ ಆವರಣಕ್ಕೆ ಹೋದಾಗ ಎದುರಿಸಬೇಕಾದ ಪರಿಸ್ಥಿತಿಯಿಂದ ಸಿಆರ್ ಪಿಎಫ್ ಈಗ ಜಾಗೃತವಾಗಿದ್ದು ಯೋಧರಿಗೆ ಭದ್ರತೆ ಹೆಚ್ಚಿಸಲಾಗಿದೆ. ಕೈಯಲ್ಲಿ ಶಸ್ತ್ರಾಸ್ತ್ರಗಳಿದ್ದರೂ ತಾವು ಸುರಕ್ಷಿತವಾಗಿದ್ದೇವೆ ಎಂದು ಭದ್ರತಾಪಡೆ ಭಾವಿಸುವುದಿಲ್ಲ. ಇನ್ನು ಮುಂದೆ ಯೋಧರಿಗೆ ಶೀಲ್ಡ್ ಅಥವಾ ರಕ್ಷಾ ಕವಚ ಇರಲಿದ್ದು, ಅವರ ತಲೆಯ ಮೇಲೆ ವಿಶೇಷ ರೀತಿಯ ಹೆಲ್ಮೆಟ್ ಇರಲಿದೆ

ಪಶ್ಚಿಮ ಬಂಗಾಳ: ಇಡಿ ದಾಳಿ ವೇಳೆ ರಕ್ಷಾಕವಚ ಧರಿಸಲಿದ್ದಾರೆ ಸಿಆರ್‌ಪಿಎಫ್ ಯೋಧರು
ಸಿಆರ್​​ಪಿಎಫ್
ರಶ್ಮಿ ಕಲ್ಲಕಟ್ಟ
|

Updated on: Jan 08, 2024 | 4:26 PM

Share

ಕೋಲ್ಕತ್ತಾ ಜನವರಿ 08: ಶೋಧ ಕಾರ್ಯದ ವೇಳೆ ಸ್ವತಃ ಕೇಂದ್ರೀಯ ಸಂಸ್ಥೆಯ ಅಧಿಕಾರಿಗಳ () ಮೇಲೆಯೇ ಹಲ್ಲೆ ನಡೆದಿದೆ. ಶಸ್ತ್ರಸಜ್ಜಿತ ಸಿಆರ್‌ಪಿಎಫ್ (CRPF) ಸಿಬ್ಬಂದಿ ಇದ್ದರೂ ಈ ದಾಳಿಯನ್ನು ತಡೆಯಲಾಗಲಿಲ್ಲ. ಮತ್ತೊಂದೆಡೆ ಕೇಂEDದ್ರ ಪಡೆಯ ಕಾರಿನ ಗಾಜು ಕೂಡ ಒಡೆದಿದೆ. ಶಹಜಹಾನ್ ಶೇಖ್ (Shahjahan sheikh) ಅವರ ನಿವಾಸದ ಆವರಣಕ್ಕೆ ಹೋದಾಗ ಎದುರಿಸಬೇಕಾದ ಪರಿಸ್ಥಿತಿಯಿಂದ ಸಿಆರ್ ಪಿಎಫ್ ಈಗ ಜಾಗೃತವಾಗಿದ್ದು ಯೋಧರಿಗೆ ಭದ್ರತೆ ಹೆಚ್ಚಿಸಲಾಗಿದೆ. ಕೈಯಲ್ಲಿ ಶಸ್ತ್ರಾಸ್ತ್ರಗಳಿದ್ದರೂ ತಾವು ಸುರಕ್ಷಿತವಾಗಿದ್ದೇವೆ ಎಂದು ಭದ್ರತಾಪಡೆ ಭಾವಿಸುವುದಿಲ್ಲ. ಇನ್ನು ಮುಂದೆ ಯೋಧರಿಗೆ ಶೀಲ್ಡ್ ಅಥವಾ ರಕ್ಷಾ ಕವಚ ಇರಲಿದ್ದು, ಅವರ ತಲೆಯ ಮೇಲೆ ವಿಶೇಷ ರೀತಿಯ ಹೆಲ್ಮೆಟ್ ಇರಲಿದೆ.

ಪಡಿತರ ಭ್ರಷ್ಟಾಚಾರದ ಆರೋಪ ಹೊತ್ತಿರುವ ಶಂಕರ್ ಆದಯ್ಯ ಅವರನ್ನು ಬುಧವಾರ ಬೆಳಗ್ಗೆ ಸಿಜಿಒ ಕಾಂಪ್ಲೆಕ್ಸ್‌ನಿಂದ ಹೊರಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು . ಇದಕ್ಕೂ ಮುನ್ನ ಇಡಿ ಕಚೇರಿಯ ಹೊರಗೆ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿತ್ತು. ಅಲ್ಲಿ ಕೇಂದ್ರಪಡೆಗಳು ಹೆಲ್ಮೆಟ್, ಬಾಡಿ ಪ್ರೊಟೆಕ್ಟರ್ ಜಾಕೆಟ್, ಕೋಲು, ಶೀಲ್ಡ್ ಧರಿಸಿ ನಿಂತಿದ್ದು ಕಂಡುಬಂತು. ಮೂಲಗಳ ಪ್ರಕಾರ, ಸಂದೇಶಖಾಲಿ ಘಟನೆಯ ನಂತರ, ಸಿಆರ್‌ಪಿಎಫ್ ಯೋಧರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಹಂತದಿಂದ ಈ ಆದೇಶವನ್ನು ನೀಡಲಾಗಿದೆ.

ಜಮ್ಮು ಕಾಶ್ಮೀರ ಮತ್ತು ಮಾವೋವಾದಿ ಪ್ರಾಬಲ್ಯದ ಛತ್ತೀಸ್‌ಗಢದಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಸಿಆರ್‌ಪಿಎಫ್ ಯೋಧರು ಸಾಮಾನ್ಯವಾಗಿ ಈ ರೀತಿದಲ್ಲಿ ಕಾಣಿಸಿಕೊಳ್ಳುತ್ತಾರೆ. ಶೋಧ ಕಾರ್ಯಾಚರಣೆ ನಡೆಸುವಾಗ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಈ ಭದ್ರತೆಯನ್ನು ವಿಸ್ತರಿಸಲಾಗಿದೆ. ಅದೇನೆಂದರೆ, ಮುಂದೆ ಯಾವುದೇ ಶೋಧ ಕಾರ್ಯಾಚರಣೆಗೆ ಮುಂದಾದರೆ ಯೋಧರು ಈ ರೀತಿ ಸಿದ್ಧತೆಯಲ್ಲಿರಬೇಕು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪಡಿತರ ವಿತರಣೆ ಹಗರಣ: ಟಿಎಂಸಿಯ ಶಹಜಹಾನ್ ಶೇಖ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

ಕಳೆದ ಶುಕ್ರವಾರ ಸಂದೇಶಖಾಲಿಯಲ್ಲಿ ಶೇಖ್ ಶಹಜಹಾನ್ ನಿವಾಸದಲ್ಲಿ ಇಡಿ ಅಧಿಕಾರಿಗಳ ಮೇಲೆ ಅವರ ಅನುಯಾಯಿಗಳು ದಾಳಿ ಮಾಡಿದ್ದರು. ಆ ಹೊತ್ತಲ್ಲಿ ಅಧಿಕಾರಿಗಳು ತಮ್ಮ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಪಲಾಯನ ಮಾಡಬೇಕಾಯಿತು. ಘಟನೆಯನ್ನು ಎಲ್ಲಾ ವಲಯಗಳು ಖಂಡಿಸಿವೆ. ಘಟನೆಯ ನಂತರ ಮೂರು ದಿನಗಳು ಕಳೆದವು, ಆದರೆ ಶಹಜಹಾನ್ ಅನ್ನು ಇನ್ನೂ ಬಂಧಿಸಲಾಗಿಲ್ಲ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​