AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರಾಜಧಾನಿ ಎಕ್ಸ್​ಪ್ರೆಸ್​ ರೈಲಲ್ಲಿ ತೇಜಸ್ ಮಾದರಿ ಸ್ಮಾರ್ಟ್​ ಸ್ಲೀಪರ್​ ಬೋಗಿಗಳು; ರೈಲ್ವೆ ಇಲಾಖೆಯ ಹೊಸ ಪ್ರಯೋಗ

Indian Railways Smart Coaches: ಪಶ್ಚಿಮ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಸುಮಿತ್​ ಠಾಕೂರ್​ ಮಾಹಿತಿ ನೀಡಿದ್ದು, ತೇಜಸ್​ ಸ್ಮಾರ್ಟ್ ಕೋಚ್​ಗಳ ಬಳಕೆಯ ಮೂಲಕ ಭಾರತೀಯ ರೈಲ್ವೆ, ತಡೆಗಟ್ಟುವಿಕೆ ನಿರ್ವಹಣೆ ಬದಲು ಮುನ್ಸೂಚಕ ನಿರ್ವಹಣೆಯ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ ಎಂದಿದ್ದಾರೆ.

Indian Railways: ರಾಜಧಾನಿ ಎಕ್ಸ್​ಪ್ರೆಸ್​ ರೈಲಲ್ಲಿ ತೇಜಸ್ ಮಾದರಿ ಸ್ಮಾರ್ಟ್​ ಸ್ಲೀಪರ್​ ಬೋಗಿಗಳು; ರೈಲ್ವೆ ಇಲಾಖೆಯ ಹೊಸ ಪ್ರಯೋಗ
ರಾಜಧಾನಿ ಎಕ್ಸ್​​ಪ್ರೆಸ್​ನಲ್ಲಿ ತೇಜಸ್ ಮಾದರಿ ಸ್ಲೀಪಿಂಗ್ ಕೋಚ್​ಗಳು
TV9 Web
| Edited By: |

Updated on:Jul 20, 2021 | 5:05 PM

Share

ರೈಲು ಪ್ರಯಾಣವನ್ನು ಇನ್ನಷ್ಟು ಆರಾಮದಾಯಕಗೊಳಿಸುವ ಪ್ರಯತ್ನವಾಗಿ ಪಶ್ಚಿಮ ವಲಯ ರೈಲ್ವೆ (Western Railway) ಹೊಸದಾಗಿ ನವೀಕರಿಸಿದ ತೇಜಸ್ ಮಾದರಿಯ ಸ್ಲೀಪರ್ ಕೋಚ್ ರೇಕ್ಸ್​ನ್ನು ಪರಿಚಯಿಸಿದೆ. ಈ ತೇಜಸ್​ ಮಾದರಿಯ ಸ್ಮಾರ್ಟ್​ ಸ್ಲೀಪರ್​ ಕೋಚ್​​​ನ್ನು ಸದ್ಯ ಮುಂಬೈ-ದೆಹಲಿ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪರಿಚಯಿಸಲಾಗಿದ್ದು, ಸೋಮವಾರ (ಜು.19) ಇದು ತನ್ನ ಮೊದಲ ಸಂಚಾರ ಮಾಡಿದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

ಈ ಬಗ್ಗೆ ಪಶ್ಚಿಮ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಸುಮಿತ್​ ಠಾಕೂರ್​ ಮಾಹಿತಿ ನೀಡಿದ್ದು, ತೇಜಸ್​ ಸ್ಮಾರ್ಟ್ ಕೋಚ್​ಗಳ ಬಳಕೆಯ ಮೂಲಕ ಭಾರತೀಯ ರೈಲ್ವೆ, ತಡೆಗಟ್ಟುವಿಕೆ ನಿರ್ವಹಣೆ ಬದಲು ಮುನ್ಸೂಚಕ ನಿರ್ವಹಣೆಯ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಈ ಆಧುನಿಕ ತೇಜಸ್​ ಮಾದರಿ ಸ್ಲೀಪರ್​ ಕೋಚ್​ಗಳು ದೂರದ ಪ್ರಯಾಣಕ್ಕೆ ತುಂಬ ಅನುಕೂಲ ಆಗಲಿವೆ. ಪ್ರಯಾಣಿಕರು ಇನ್ನಷ್ಟು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು ಎಂದು ಹೇಳಿದ್ದಾರೆ. ಹಾಗೇ ಈ ತೇಜಸ್ ಮಾದರಿ ಸ್ಲೀಪರ್​ ಬೋಗಿಗಳನ್ನು ಆಧುನಿಕ ಕೋಚ್​ ಫ್ಯಾಕ್ಟರಿ (MCF)ಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಇನ್ನು ರಾಜಧಾನಿ ಎಕ್ಸ್​ಪ್ರೆಸ್​ನ ಎರಡು ರೇಕ್ಸ್​ಗಳಲ್ಲಿ ತೇಜಸ್​ ಮಾದರಿ ಸ್ಲೀಪರ್​ ಬೋಗಿಗಳನ್ನು ಅಳವಡಿಸಲಾಗಿದೆ. ಪ್ರಯಾಣಿಕರಿಗೆ ಇಂಟಲಿಜೆಂಟ್​ ಸೆನ್ಸಾರ್​ ಆಧರಿತ, ವಿಶ್ವ ದರ್ಜೆಯ ವ್ಯವಸ್ಥೆ ನೀಡುವ ಉದ್ದೇಶದಿಂದ ಈ ಹೆಜ್ಜೆ ಇಡಲಾಗಿದೆ. ಇನ್ನು ಪ್ರಯಾಣಿಕರ ಸುರಕ್ಷತೆ, ಆರಾಮವನ್ನೂ ಗಮನದಲ್ಲಿಟ್ಟುಕೊಂಡು ತೇಜಸ್​ ಮಾದರಿ ಸ್ಲೀಪರ್ ಬೋಗಿಗಳನ್ನು ಪರಿಚಯಿಸಿದ್ದಾರೆ ರೈಲ್ವೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

Published On - 5:03 pm, Tue, 20 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ