AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways: ರಾಜಧಾನಿ ಎಕ್ಸ್​ಪ್ರೆಸ್​ ರೈಲಲ್ಲಿ ತೇಜಸ್ ಮಾದರಿ ಸ್ಮಾರ್ಟ್​ ಸ್ಲೀಪರ್​ ಬೋಗಿಗಳು; ರೈಲ್ವೆ ಇಲಾಖೆಯ ಹೊಸ ಪ್ರಯೋಗ

Indian Railways Smart Coaches: ಪಶ್ಚಿಮ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಸುಮಿತ್​ ಠಾಕೂರ್​ ಮಾಹಿತಿ ನೀಡಿದ್ದು, ತೇಜಸ್​ ಸ್ಮಾರ್ಟ್ ಕೋಚ್​ಗಳ ಬಳಕೆಯ ಮೂಲಕ ಭಾರತೀಯ ರೈಲ್ವೆ, ತಡೆಗಟ್ಟುವಿಕೆ ನಿರ್ವಹಣೆ ಬದಲು ಮುನ್ಸೂಚಕ ನಿರ್ವಹಣೆಯ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ ಎಂದಿದ್ದಾರೆ.

Indian Railways: ರಾಜಧಾನಿ ಎಕ್ಸ್​ಪ್ರೆಸ್​ ರೈಲಲ್ಲಿ ತೇಜಸ್ ಮಾದರಿ ಸ್ಮಾರ್ಟ್​ ಸ್ಲೀಪರ್​ ಬೋಗಿಗಳು; ರೈಲ್ವೆ ಇಲಾಖೆಯ ಹೊಸ ಪ್ರಯೋಗ
ರಾಜಧಾನಿ ಎಕ್ಸ್​​ಪ್ರೆಸ್​ನಲ್ಲಿ ತೇಜಸ್ ಮಾದರಿ ಸ್ಲೀಪಿಂಗ್ ಕೋಚ್​ಗಳು
TV9 Web
| Edited By: |

Updated on:Jul 20, 2021 | 5:05 PM

Share

ರೈಲು ಪ್ರಯಾಣವನ್ನು ಇನ್ನಷ್ಟು ಆರಾಮದಾಯಕಗೊಳಿಸುವ ಪ್ರಯತ್ನವಾಗಿ ಪಶ್ಚಿಮ ವಲಯ ರೈಲ್ವೆ (Western Railway) ಹೊಸದಾಗಿ ನವೀಕರಿಸಿದ ತೇಜಸ್ ಮಾದರಿಯ ಸ್ಲೀಪರ್ ಕೋಚ್ ರೇಕ್ಸ್​ನ್ನು ಪರಿಚಯಿಸಿದೆ. ಈ ತೇಜಸ್​ ಮಾದರಿಯ ಸ್ಮಾರ್ಟ್​ ಸ್ಲೀಪರ್​ ಕೋಚ್​​​ನ್ನು ಸದ್ಯ ಮುಂಬೈ-ದೆಹಲಿ ರಾಜಧಾನಿ ಎಕ್ಸ್​ಪ್ರೆಸ್ ರೈಲಿನಲ್ಲಿ ಪರಿಚಯಿಸಲಾಗಿದ್ದು, ಸೋಮವಾರ (ಜು.19) ಇದು ತನ್ನ ಮೊದಲ ಸಂಚಾರ ಮಾಡಿದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

ಈ ಬಗ್ಗೆ ಪಶ್ಚಿಮ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಸುಮಿತ್​ ಠಾಕೂರ್​ ಮಾಹಿತಿ ನೀಡಿದ್ದು, ತೇಜಸ್​ ಸ್ಮಾರ್ಟ್ ಕೋಚ್​ಗಳ ಬಳಕೆಯ ಮೂಲಕ ಭಾರತೀಯ ರೈಲ್ವೆ, ತಡೆಗಟ್ಟುವಿಕೆ ನಿರ್ವಹಣೆ ಬದಲು ಮುನ್ಸೂಚಕ ನಿರ್ವಹಣೆಯ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಈ ಆಧುನಿಕ ತೇಜಸ್​ ಮಾದರಿ ಸ್ಲೀಪರ್​ ಕೋಚ್​ಗಳು ದೂರದ ಪ್ರಯಾಣಕ್ಕೆ ತುಂಬ ಅನುಕೂಲ ಆಗಲಿವೆ. ಪ್ರಯಾಣಿಕರು ಇನ್ನಷ್ಟು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು ಎಂದು ಹೇಳಿದ್ದಾರೆ. ಹಾಗೇ ಈ ತೇಜಸ್ ಮಾದರಿ ಸ್ಲೀಪರ್​ ಬೋಗಿಗಳನ್ನು ಆಧುನಿಕ ಕೋಚ್​ ಫ್ಯಾಕ್ಟರಿ (MCF)ಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಇನ್ನು ರಾಜಧಾನಿ ಎಕ್ಸ್​ಪ್ರೆಸ್​ನ ಎರಡು ರೇಕ್ಸ್​ಗಳಲ್ಲಿ ತೇಜಸ್​ ಮಾದರಿ ಸ್ಲೀಪರ್​ ಬೋಗಿಗಳನ್ನು ಅಳವಡಿಸಲಾಗಿದೆ. ಪ್ರಯಾಣಿಕರಿಗೆ ಇಂಟಲಿಜೆಂಟ್​ ಸೆನ್ಸಾರ್​ ಆಧರಿತ, ವಿಶ್ವ ದರ್ಜೆಯ ವ್ಯವಸ್ಥೆ ನೀಡುವ ಉದ್ದೇಶದಿಂದ ಈ ಹೆಜ್ಜೆ ಇಡಲಾಗಿದೆ. ಇನ್ನು ಪ್ರಯಾಣಿಕರ ಸುರಕ್ಷತೆ, ಆರಾಮವನ್ನೂ ಗಮನದಲ್ಲಿಟ್ಟುಕೊಂಡು ತೇಜಸ್​ ಮಾದರಿ ಸ್ಲೀಪರ್ ಬೋಗಿಗಳನ್ನು ಪರಿಚಯಿಸಿದ್ದಾರೆ ರೈಲ್ವೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದುಡ್ಡು ಕೊಟ್ಟರೆ ಎಸ್​ಎಸ್​ಎಲ್​ಸಿ ಪಾಸ್ ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಯನ್ನು ನಂಬಬೇಡಿ; ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

Published On - 5:03 pm, Tue, 20 July 21

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ