Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದಾಗ ವಂದೇ ಭಾರತ್ ರೈಲಿನ ಕಿಟಕಿಯಲ್ಲಿ ಬಿರುಕು; ತನಿಖೆ ಆರಂಭಿಸಿದ ರೈಲ್ವೆ

ಸೋಮವಾರ ಲಿಂಬಯಾತ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಘಟನೆಯ ಬಗ್ಗೆ ಪ್ರಸ್ತಾಪಿಸಿದ ವಕೀಲ ವಾರಿಸ್ ಪಠಾಣ್, ಓವೈಸಿ ಪ್ರಯಾಣಿಸುತ್ತಿದ್ದ ಕೋಚ್ ಮೇಲೆ ಯಾರೋ ಕಲ್ಲು ಎಸೆದಿದ್ದಾರೆ ಎಂದು ಹೇಳಿದರು.

ಅಸಾದುದ್ದೀನ್ ಓವೈಸಿ ಪ್ರಯಾಣಿಸುತ್ತಿದ್ದಾಗ ವಂದೇ ಭಾರತ್ ರೈಲಿನ ಕಿಟಕಿಯಲ್ಲಿ ಬಿರುಕು; ತನಿಖೆ ಆರಂಭಿಸಿದ ರೈಲ್ವೆ
ಓವೈಸಿ ಪ್ರಯಾಣಿಸುತ್ತಿದ್ದಾಗ ವಂದೇ ಭಾರತ್ ರೈಲು ಕಿಟಕಿಯಲ್ಲಿ ಬಿರುಕು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 08, 2022 | 9:58 PM

ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ(Asaduddin Owaisi) ಮತ್ತು ಅವರ ತಂಡ ಪ್ರಯಾಣಿಸುತ್ತಿದ್ದ ವಂದೇ ಭಾರತ್ (Vande Bharat) ರೈಲಿನ ಕಿಟಕಿ ಪ್ಯಾನೆಲ್​​ನಲ್ಲಿ ಬಿರುಕುಗಳು ಕಂಡುಬಂದಿರುವ ಘಟನೆಯ ಬಗ್ಗೆ ಪಶ್ಚಿಮ ರೈಲ್ವೆ (Western Railway) ಪೊಲೀಸರು ತನಿಖೆ ಆರಂಭಿಸಿದ್ದಾರೆ. ರೈಲ್ವೇ ಪೊಲೀಸರ ಪ್ರಕಾರ, ಸೋಮವಾರ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಮತ್ತು ಅವರ ತಂಡವು ಅಹಮದಾಬಾದ್‌ನಿಂದ ಸೂರತ್‌ಗೆ ಲಿಂಬಯತ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದಾಗ ಭರೂಚ್‌ನ ಅಂಕಲೇಶ್ವರ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರೈಲು ನರ್ಮದಾ ಸೇತುವೆಯನ್ನು ದಾಟಿದಾಗ, ಕೆಲವು ಕಾಂಕ್ರೀಟ್ ತುಂಡುಗಳು ಸೀಟ್ ಸಂಖ್ಯೆ 25 ರ ಬಳಿ ಕಿಟಕಿಗೆ ಬಡಿದವು. ಆದರೆ ಓವೈಸಿ ಸೀಟ್ ಸಂಖ್ಯೆ 18 ರಲ್ಲಿ ಇದ್ದರು ಎಂದು ಅವರು ಹೇಳಿದರು. ಸೂರತ್ ರೈಲು ನಿಲ್ದಾಣದಲ್ಲಿ ರೈಲು ನಿಂತ ನಂತರ ಪ್ರಯಾಣಿಕರೊಬ್ಬರು ಬಿರುಕು ಬಿಟ್ಟಿರುವುದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಯಾಣಿಕರು ಕೂಡಲೇ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೋಮವಾರ ಲಿಂಬಯಾತ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಘಟನೆಯ ಬಗ್ಗೆ ಪ್ರಸ್ತಾಪಿಸಿದ ವಕೀಲ ವಾರಿಸ್ ಪಠಾಣ್, ಓವೈಸಿ ಪ್ರಯಾಣಿಸುತ್ತಿದ್ದ ಕೋಚ್ ಮೇಲೆ ಯಾರೋ ಕಲ್ಲು ಎಸೆದಿದ್ದಾರೆ ಎಂದು ಹೇಳಿದರು.

ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪಶ್ಚಿಮ ರೈಲ್ವೆ ಪೊಲೀಸ್ ಅಧೀಕ್ಷಕ ರಾಜೇಶ್ ಪರ್ಮಾರ್, “ನಾವು ರೈಲ್ವೆ ತಾಂತ್ರಿಕ ತಂಡದಿಂದ ವರದಿಯನ್ನು ಕೇಳಿದ್ದೇವೆ. ನಮ್ಮ ತಂಡಗಳು ಪ್ರದೇಶವನ್ನು ಪರಿಶೀಲನೆ ಮಾಡಿದೆ. ಆದರೆ ಘಟನೆ ನಡೆದ ಸ್ಥಳದಿಂದ ಯಾವುದೇ ಸುಳಿವು ಸಿಕ್ಕಿಲ್ಲ.

ಪ್ರಾಥಮಿಕ ತನಿಖೆಯ ನಂತರ, ಅಂಕಲೇಶ್ವರ ರೈಲು ನಿಲ್ದಾಣದ ಬಳಿ ರೈಲ್ವೆ ಹಳಿಗಳ ದುರಸ್ತಿ ಪ್ರಗತಿಯಲ್ಲಿದೆ ಎಂದು ನಾವು ಕಂಡುಕೊಂಡಿದ್ದೇವೆ. ರೈಲುಗಳು ಕಡಿಮೆ ವೇಗದಲ್ಲಿ ಚಲಿಸುವಂತೆ ಎಚ್ಚರಿಕೆ ನೀಡಲಾಯಿತು. ವಂದೇ ಭಾರತ್ ರೈಲಿನ ವೇಗದಿಂದಾಗಿ ಕೆಲವು ಕಾಂಕ್ರೀಟ್ ತುಂಡುಗಳು ಕಿಟಕಿಗೆ ತಾಗಿರಬಹುದು ಎಂದಿದ್ದಾರೆ.

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ