AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WFI ಚುನಾವಣೆ: ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಬ್ರಿಜ್ ಭೂಷಣ್, ಮಗ ಕರಣ್ ಔಟ್

ಮುಂಬರಲಿರುವ ಭಾರತೀಯ ಕುಸ್ತಿ ಫೆಡರೇಷನ್​ನ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಮಗ ಕರಣ್ ಹೆಸರನ್ನು ಕೈಬಿಡಲಾಗಿದೆ. ಆಗಸ್ಟ್ 12 ರಂದು ನಡೆಯಲಿರುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

WFI ಚುನಾವಣೆ: ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಬ್ರಿಜ್ ಭೂಷಣ್, ಮಗ ಕರಣ್ ಔಟ್
ಬ್ರಿಜ್ ಭೂಷಣ್Image Credit source: India Today
ನಯನಾ ರಾಜೀವ್
|

Updated on: Jul 26, 2023 | 11:34 AM

Share

ಮುಂಬರಲಿರುವ ಭಾರತೀಯ ಕುಸ್ತಿ ಫೆಡರೇಷನ್​ನ ಚುನಾವಣಾ ಕಣದಿಂದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan Sharan Singh) ಹಾಗೂ ಮಗ ಕರಣ್ ಹೆಸರನ್ನು ಕೈಬಿಡಲಾಗಿದೆ. ಆಗಸ್ಟ್ 12 ರಂದು ನಡೆಯಲಿರುವ ಕುಸ್ತಿ ಫೆಡರೇಷನ್ ಚುನಾವಣಾ ಕಣದಿಂದ ಕೈಬಿಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬ್ರಿಜ್ ಭೂಷಣ್ ಅವರ ಕಿರಿಯ ಪುತ್ರ ಉತ್ತರ ಪ್ರದೇಶ ಕುಸ್ತಿ ಸಂಘದ ಅಧ್ಯಕ್ಷರಾಗಿರುವ ಕರಣ್ ಹೆಸರನ್ನು ಅಂತಿಮ ಪಟ್ಟಿಯಿಂದ ಕೈ ಬಿಡಲಾಗಿದೆ.

ಚುನಾವಣಾ ಅಧಿಕಾರಿ ನಿವೃತ್ತ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಅರ್ಹ ಮತದಾರರ ಪಟ್ಟಿಯನ್ನು ಅಂತಿಮ ಪಡಿಸಿದ್ದಾರೆ. ಇವರಿಬ್ಬರ ಬಲದಾಗಿ ಪ್ರೇಮ್ ಕುಮಾರ್ ಮಿಶ್ರಾ ಮತ್ತು ಸಂಜಯ್ ಸಿಂಗ್ ಮತದಾನ ಮಾಡಲಿದ್ದಾರೆ.

ಆದರೆ ಬ್ರಿಜ್ ಭೂಷಣ್ ಅಳಿಯ ವಿಶಾಲ ಪ್ರತಾಪ್ ಸಿಂಗ್ ಹೆಸರು ಪಟ್ಟಿಯಲ್ಲಿದೆ. ರಾಜ್ಯದ ಪರವಾಗಿ ವಿನಯ್ ಕುಮಾರ್ ಸಿಂಗ್ ಜತೆ ವಿಶಾಲ್ ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.

ಮತ್ತಷ್ಟು ಓದಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು

2023ರಿಂದ 2026ರ ಅವಧಿಗೆ ಪದಾಧಿಕಾರಿ ಹುದ್ದೆಗಳಿಗೆ ಸ್ಪರ್ಧಿಸಲು ಅರ್ಹತೆ ಪಡೆದವರ ಪಟ್ಟಿಯಲ್ಲಿ , ರೈಲ್ವೆ ಕ್ರೀಡಾ ಉತ್ತೇಜನ ಮಂಡಳಿಯ ಕಾರ್ಯದರ್ಶಿ ಪ್ರೇಮ್ ಚಂದ್ ಲೊಚಾಬ್ ಅವರ ಹೆಸರು ಕೂಡ ಒಂದು.

ಹರ್ಯಾಣ ಹಾಗೂ ರಾಜಸ್ಥಾನದ ಜಾಟ್ ಸಮುದಾಯದ ಮೇಲೆ ಉತ್ತಮ ನಿಯಂತ್ರಣ ಹೊಂದಿರುವ ಇವರು ಗುಜರಾತ್​ನಿಂದ ಐಡಿ ನಾನಾವತಿ ಅವರೊಂದಿಗೆ ಮತ ಚಲಾಯಿಸುವ ಅಧಿಕಾರ ಪಡೆದಿದ್ದಾರೆ.

ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು, ಹಾಗೆಯೇ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಹಾಗೂ ಬಂಧಿಸುವಂತೆ ಒತ್ತಾಯಿಸಿ ತಿಂಗಳುಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ