AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India ವಿಮಾನ ದುರಂತಕ್ಕೆ ಈಡಾಗಲು ಕಾರಣವೇನು?

ತಿರುವನಂತಪುರಂ: 2010ರಲ್ಲಿ ಮಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ಮೂರ್ನಾಲ್ಕು ಮಂದಿಯನ್ನ ಬಿಟ್ಟರೆ ಉಳಿದೆಲ್ಲಾ ಪ್ರಯಾಣಿಕರು ಸಾವಿಗೀಡಾಗಿದ್ರು. ಈಗ ಇಂಥದ್ದೇ ಘಟನೆ ಕೇರಳದ ಕೋಯಿಕ್ಕೋಡ್‌ನ ಕರಿಪುರ ಏರ್​ಪೋರ್ಟ್​ನಲ್ಲಿ ನಡೆದಿದೆ. ಮಂಗಳೂರಿನಂತೆಯೇ ಕರಿಪುರ ಏರ್​ಪೋರ್ಟ್ ಕೂಡ ಟೇಬಲ್ ಟಾಪ್ ಏರ್​ಪೋರ್ಟ್ ಆಗಿದೆ. ಹೀಗಾಗಿ, ರನ್​ವೇ ಬರೋಬ್ಬರಿ 130 ಅಡಿ ಎತ್ತರದಲ್ಲಿದೆ. ನಿನ್ನೆ ಜೋರು ಮಳೆಯಿದ್ದಿದ್ದಕ್ಕೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಇದ್ರಿಂದ ವಿಮಾನ ರನ್​ವೇಯಿಂದ ಸ್ಕಿಡ್ ಆಗಿದೆ. ಮೊದಲೇ ಟೇಬಲ್ ಟಾಪ್ ರನ್​ವೇ ಆಗಿರೋದ್ರಿಂದ ವಿಮಾನ ಏರ್​ಪೋರ್ಟ್​ನ ಕಾಂಪೌಂಡ್​ನಿಂದ 35 […]

Air India ವಿಮಾನ ದುರಂತಕ್ಕೆ ಈಡಾಗಲು ಕಾರಣವೇನು?
KUSHAL V
|

Updated on: Aug 08, 2020 | 7:40 AM

Share

ತಿರುವನಂತಪುರಂ: 2010ರಲ್ಲಿ ಮಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ಮೂರ್ನಾಲ್ಕು ಮಂದಿಯನ್ನ ಬಿಟ್ಟರೆ ಉಳಿದೆಲ್ಲಾ ಪ್ರಯಾಣಿಕರು ಸಾವಿಗೀಡಾಗಿದ್ರು. ಈಗ ಇಂಥದ್ದೇ ಘಟನೆ ಕೇರಳದ ಕೋಯಿಕ್ಕೋಡ್‌ನ ಕರಿಪುರ ಏರ್​ಪೋರ್ಟ್​ನಲ್ಲಿ ನಡೆದಿದೆ. ಮಂಗಳೂರಿನಂತೆಯೇ ಕರಿಪುರ ಏರ್​ಪೋರ್ಟ್ ಕೂಡ ಟೇಬಲ್ ಟಾಪ್ ಏರ್​ಪೋರ್ಟ್ ಆಗಿದೆ. ಹೀಗಾಗಿ, ರನ್​ವೇ ಬರೋಬ್ಬರಿ 130 ಅಡಿ ಎತ್ತರದಲ್ಲಿದೆ. ನಿನ್ನೆ ಜೋರು ಮಳೆಯಿದ್ದಿದ್ದಕ್ಕೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಇದ್ರಿಂದ ವಿಮಾನ ರನ್​ವೇಯಿಂದ ಸ್ಕಿಡ್ ಆಗಿದೆ. ಮೊದಲೇ ಟೇಬಲ್ ಟಾಪ್ ರನ್​ವೇ ಆಗಿರೋದ್ರಿಂದ ವಿಮಾನ ಏರ್​ಪೋರ್ಟ್​ನ ಕಾಂಪೌಂಡ್​ನಿಂದ 35 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ರಭಸಕ್ಕೆ ಏರ್ ಇಂಡಿಯಾ ವಿಮಾನ ಎರಡು ತುಂಡಾಗಿದೆ. ಇನ್ನು ಟೇಬಲ್ ಟಾಪ್ ರನ್​ವೇಗಳಲ್ಲಿ ವಿಮಾನ ಲ್ಯಾಂಡಿಂಗ್ ಮಾಡೋದು ಸಾಹಸವೇ ಸರಿ. ಅದ್ರಲ್ಲೂ ಹವಾಮಾನ ವೈಪರೀತ್ಯ ಇರುವಾಗ ಜೀವ ಕೈಯಲ್ಲಿ ಹಿಡಿದು ಲ್ಯಾಂಡಿಂಗ್ ಮಾಡೋ ಪರಿಸ್ಥಿತಿ ಇರುತ್ತೆ. ಸ್ವಲ್ಪ ಹೆಚ್ಚು ಕಮ್ಮಿಯಾದ್ರೂ ವಿಮಾನ ಪ್ರಪಾತಕ್ಕೆ ಜಾರಿ ಬೀಳುತ್ತೆ. ಹೀಗಾಗಿ ಅತ್ಯಂತ ಅನುಭವಿ ಹಾಗೂ ರಾಷ್ಟ್ರಪತಿಯಿಂದ ಗೋಲ್ಡ್ ಮೆಡಲ್ ಪಡೆದ ಹಿರಿಯ ಪೈಲಟ್ ಆದ ದೀಪಕ್ ವಸಂತ್ ಸಾತೆಯನ್ನ ನೇಮಿಸಲಾಗಿತ್ತು. ಇವರಿಗೆ ಅಖಿಲೇಶ್ ಕುಮಾರ್ ಕೋ -ಪೈಲಟ್​ ಆಗಿ ಸಾಥ್ ನೀಡ್ತಿದ್ರು. ಆದರೂ ದುರಾದೃಷ್ಟ ಬೆನ್ನೇರಿ ಹಲವರನ್ನ ಸಾವಿನ ಮನೆಗೆ ತಳ್ಳಿದೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಿರುವುದೇ ಅದೃಷ್ಟ ಕರಿಪುರ ಏರ್​ಪೋರ್ಟ್​ ದೇಶದ7ನೇ ಅತ್ಯಂತ ಕಾರ್ಯನಿರತ ಏರ್​ಪೋರ್ಟ್ ಅನ್ನೋ ಖ್ಯಾತಿ ಪಡೆದಿದೆ. ಇಲ್ಲಿ ವಿಮಾನಗಳ ಹಾರಾಟ ಹೆಚ್ಚಿರುತ್ತೆ. ಆದರೆ ನಿನ್ನೆ ಅದೃಷ್ಟವಶಾತ್ ಪತನಗೊಂಡ ಬಳಿಕ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿಲ್ಲ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಅಧಿಕಾರಿಗಳು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಒಟ್ನಲ್ಲಿ, ವಿಮಾದ ದುರಂತ ಹವಾಮಾನ ವೈಪರೀತ್ಯದಿಂದಲೋ ಅಥವಾ ಟೇಬಲ್ ಟಾಪ್ ರನ್​ವೇದಿಂದ ಆಗಿರೋದೋ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಇದೀಗ, ಘಟನಾ ಸ್ಥಳಕ್ಕೆ ಕೇಂದ್ರ ವಿಮಾನಯಾನ ತನಿಖಾ ತಂಡಗಳು ಭೇಟಿನೀಡಿದ್ದು ಪರಿಶೀಲನೆ ನಡೆಸುತ್ತಿದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ