AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India ವಿಮಾನ ದುರಂತಕ್ಕೆ ಈಡಾಗಲು ಕಾರಣವೇನು?

ತಿರುವನಂತಪುರಂ: 2010ರಲ್ಲಿ ಮಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ಮೂರ್ನಾಲ್ಕು ಮಂದಿಯನ್ನ ಬಿಟ್ಟರೆ ಉಳಿದೆಲ್ಲಾ ಪ್ರಯಾಣಿಕರು ಸಾವಿಗೀಡಾಗಿದ್ರು. ಈಗ ಇಂಥದ್ದೇ ಘಟನೆ ಕೇರಳದ ಕೋಯಿಕ್ಕೋಡ್‌ನ ಕರಿಪುರ ಏರ್​ಪೋರ್ಟ್​ನಲ್ಲಿ ನಡೆದಿದೆ. ಮಂಗಳೂರಿನಂತೆಯೇ ಕರಿಪುರ ಏರ್​ಪೋರ್ಟ್ ಕೂಡ ಟೇಬಲ್ ಟಾಪ್ ಏರ್​ಪೋರ್ಟ್ ಆಗಿದೆ. ಹೀಗಾಗಿ, ರನ್​ವೇ ಬರೋಬ್ಬರಿ 130 ಅಡಿ ಎತ್ತರದಲ್ಲಿದೆ. ನಿನ್ನೆ ಜೋರು ಮಳೆಯಿದ್ದಿದ್ದಕ್ಕೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಇದ್ರಿಂದ ವಿಮಾನ ರನ್​ವೇಯಿಂದ ಸ್ಕಿಡ್ ಆಗಿದೆ. ಮೊದಲೇ ಟೇಬಲ್ ಟಾಪ್ ರನ್​ವೇ ಆಗಿರೋದ್ರಿಂದ ವಿಮಾನ ಏರ್​ಪೋರ್ಟ್​ನ ಕಾಂಪೌಂಡ್​ನಿಂದ 35 […]

Air India ವಿಮಾನ ದುರಂತಕ್ಕೆ ಈಡಾಗಲು ಕಾರಣವೇನು?
KUSHAL V
|

Updated on: Aug 08, 2020 | 7:40 AM

Share

ತಿರುವನಂತಪುರಂ: 2010ರಲ್ಲಿ ಮಂಗಳೂರಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ಮೂರ್ನಾಲ್ಕು ಮಂದಿಯನ್ನ ಬಿಟ್ಟರೆ ಉಳಿದೆಲ್ಲಾ ಪ್ರಯಾಣಿಕರು ಸಾವಿಗೀಡಾಗಿದ್ರು. ಈಗ ಇಂಥದ್ದೇ ಘಟನೆ ಕೇರಳದ ಕೋಯಿಕ್ಕೋಡ್‌ನ ಕರಿಪುರ ಏರ್​ಪೋರ್ಟ್​ನಲ್ಲಿ ನಡೆದಿದೆ. ಮಂಗಳೂರಿನಂತೆಯೇ ಕರಿಪುರ ಏರ್​ಪೋರ್ಟ್ ಕೂಡ ಟೇಬಲ್ ಟಾಪ್ ಏರ್​ಪೋರ್ಟ್ ಆಗಿದೆ. ಹೀಗಾಗಿ, ರನ್​ವೇ ಬರೋಬ್ಬರಿ 130 ಅಡಿ ಎತ್ತರದಲ್ಲಿದೆ. ನಿನ್ನೆ ಜೋರು ಮಳೆಯಿದ್ದಿದ್ದಕ್ಕೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಇದ್ರಿಂದ ವಿಮಾನ ರನ್​ವೇಯಿಂದ ಸ್ಕಿಡ್ ಆಗಿದೆ. ಮೊದಲೇ ಟೇಬಲ್ ಟಾಪ್ ರನ್​ವೇ ಆಗಿರೋದ್ರಿಂದ ವಿಮಾನ ಏರ್​ಪೋರ್ಟ್​ನ ಕಾಂಪೌಂಡ್​ನಿಂದ 35 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ರಭಸಕ್ಕೆ ಏರ್ ಇಂಡಿಯಾ ವಿಮಾನ ಎರಡು ತುಂಡಾಗಿದೆ. ಇನ್ನು ಟೇಬಲ್ ಟಾಪ್ ರನ್​ವೇಗಳಲ್ಲಿ ವಿಮಾನ ಲ್ಯಾಂಡಿಂಗ್ ಮಾಡೋದು ಸಾಹಸವೇ ಸರಿ. ಅದ್ರಲ್ಲೂ ಹವಾಮಾನ ವೈಪರೀತ್ಯ ಇರುವಾಗ ಜೀವ ಕೈಯಲ್ಲಿ ಹಿಡಿದು ಲ್ಯಾಂಡಿಂಗ್ ಮಾಡೋ ಪರಿಸ್ಥಿತಿ ಇರುತ್ತೆ. ಸ್ವಲ್ಪ ಹೆಚ್ಚು ಕಮ್ಮಿಯಾದ್ರೂ ವಿಮಾನ ಪ್ರಪಾತಕ್ಕೆ ಜಾರಿ ಬೀಳುತ್ತೆ. ಹೀಗಾಗಿ ಅತ್ಯಂತ ಅನುಭವಿ ಹಾಗೂ ರಾಷ್ಟ್ರಪತಿಯಿಂದ ಗೋಲ್ಡ್ ಮೆಡಲ್ ಪಡೆದ ಹಿರಿಯ ಪೈಲಟ್ ಆದ ದೀಪಕ್ ವಸಂತ್ ಸಾತೆಯನ್ನ ನೇಮಿಸಲಾಗಿತ್ತು. ಇವರಿಗೆ ಅಖಿಲೇಶ್ ಕುಮಾರ್ ಕೋ -ಪೈಲಟ್​ ಆಗಿ ಸಾಥ್ ನೀಡ್ತಿದ್ರು. ಆದರೂ ದುರಾದೃಷ್ಟ ಬೆನ್ನೇರಿ ಹಲವರನ್ನ ಸಾವಿನ ಮನೆಗೆ ತಳ್ಳಿದೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಿರುವುದೇ ಅದೃಷ್ಟ ಕರಿಪುರ ಏರ್​ಪೋರ್ಟ್​ ದೇಶದ7ನೇ ಅತ್ಯಂತ ಕಾರ್ಯನಿರತ ಏರ್​ಪೋರ್ಟ್ ಅನ್ನೋ ಖ್ಯಾತಿ ಪಡೆದಿದೆ. ಇಲ್ಲಿ ವಿಮಾನಗಳ ಹಾರಾಟ ಹೆಚ್ಚಿರುತ್ತೆ. ಆದರೆ ನಿನ್ನೆ ಅದೃಷ್ಟವಶಾತ್ ಪತನಗೊಂಡ ಬಳಿಕ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿಲ್ಲ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಅಧಿಕಾರಿಗಳು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಒಟ್ನಲ್ಲಿ, ವಿಮಾದ ದುರಂತ ಹವಾಮಾನ ವೈಪರೀತ್ಯದಿಂದಲೋ ಅಥವಾ ಟೇಬಲ್ ಟಾಪ್ ರನ್​ವೇದಿಂದ ಆಗಿರೋದೋ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ. ಇದೀಗ, ಘಟನಾ ಸ್ಥಳಕ್ಕೆ ಕೇಂದ್ರ ವಿಮಾನಯಾನ ತನಿಖಾ ತಂಡಗಳು ಭೇಟಿನೀಡಿದ್ದು ಪರಿಶೀಲನೆ ನಡೆಸುತ್ತಿದೆ.

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ