Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಭಾರತದ ಪ್ರಧಾನಿಯಾದರೆ..? ಪ್ರಶ್ನೆಗೆ ರಾಹುಲ್ ಗಾಂಧಿ ಏನು ಉತ್ತರಿಸಿದರು..

‘ಒಂದುವೇಳೆ ನೀವು ಭಾರತದ ಪ್ರಧಾನಿಯಾದರೆ?’ ಎಂದು ವೆಬಿನಾರ್ ಒಂದರಲ್ಲಿ ರಾಹುಲ್ ಗಾಂಧಿ ಅವರನ್ನು ಅಮೆರಿಕದ ಮಾಜಿ ರಾಯಭಾರಿ, ಪ್ರಸ್ತುತ ಹಾರ್ವರ್ಡ್ ಕೆನಡಿ ಸ್ಕೂಲ್​ನಲ್ಲಿ ಪ್ರಾಧ್ಯಾಪಕರಾಗಿರುವ ನಿಕೋಲಾಸ್ ಬರ್ನ್ಸ್ ಪ್ರಶ್ನಿಸಿದರು.

ನಾನು ಭಾರತದ ಪ್ರಧಾನಿಯಾದರೆ..? ಪ್ರಶ್ನೆಗೆ ರಾಹುಲ್ ಗಾಂಧಿ ಏನು ಉತ್ತರಿಸಿದರು..
ಸಂಸದ ರಾಹುಲ್ ಗಾಂಧಿ
Follow us
guruganesh bhat
|

Updated on:Apr 03, 2021 | 5:58 PM

ದೆಹಲಿ: ನಾವೆಲ್ಲರೂ ಚಿಕ್ಕವರಿದ್ದಾಗ ಶಾಲೆಗಳಲ್ಲಿ ನಾನು ಪ್ರಧಾನಿಯಾದರೆ.. ನಾನು ಮುಖ್ಯಮಂತ್ರಿ ಆದರೆ ಎಂಬ ಪ್ರಬಂಧಗಳನ್ನು ಬರೆದಿರುತ್ತೇವೆ. ಇದೇ ಪ್ರಶ್ನೆ ಕಾಂಗ್ರೆಸ್​ನ ಯುವನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೂ ಎದುರಾಯಿತು. ‘ಒಂದುವೇಳೆ ನೀವು ಭಾರತದ ಪ್ರಧಾನಿಯಾದರೆ?’ ಎಂದು ವೆಬಿನಾರ್ ಒಂದರಲ್ಲಿ ರಾಹುಲ್ ಗಾಂಧಿ ಅವರನ್ನು ಅಮೆರಿಕದ ಮಾಜಿ ರಾಯಭಾರಿ, ಪ್ರಸ್ತುತ ಹಾರ್ವರ್ಡ್ ಕೆನಡಿ ಸ್ಕೂಲ್​ನಲ್ಲಿ ಪ್ರಾಧ್ಯಾಪಕರಾಗಿರುವ ನಿಕೋಲಾಸ್ ಬರ್ನ್ಸ್ ಪ್ರಶ್ನಿಸಿದರು. ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ, ‘ನಾನು  ಭಾರತದ ಪ್ರಧಾನಿ ಆದರೆ ಅಭಿವೃದ್ಧಿ ಕೇಂದ್ರಿತ ಯೋಜನೆಗಳಿಗಿಂತ ಉದ್ಯೋಗ ಕೇಂದ್ರಿತ ಯೋಜನೆಗಳತ್ತ ಹೆಚ್ಚು ಗಮನ ಹರಿಸುತ್ತೇನೆ’ ಎಂದು ಉತ್ತರಿಸಿದರು. ‘ನಾವು ಅಭಿವೃದ್ಧಿ ಹೊಂದಬೇಕು. ಆದರೆ ಎಲ್ಲ ವಲಯಗಳಲ್ಲೂ ಉದ್ಯೋಗ ಸೃಷ್ಟಿ ಉತ್ಪಾದನೆ ಮತ್ತು ಗುಣಮಟ್ಟದ ಹೆಚ್ಚಳಗಳತ್ತ ಗಮನಹರಿಸಬೇಕಿದೆ. ಹೀಗಾಗಿ ನಾನು ಭಾರತದ ಪ್ರಧಾನಿಯಾದರೆ ಮೊದಲು ಉದ್ಯೋಗ ಸೃಷ್ಟಿಯತ್ತ ಗಮನಹರಿಸುವೆ ಎಂದು ಅವರು ತಿಳಿಸಿದರು.

ರಷ್ಯಾ ಮತ್ತು ಚೀನಾಗಳು ಪ್ರಜಾಪ್ರಭುತ್ವ ಸಿದ್ಧಾಂತದ ಬಗ್ಗೆ ಕಠಿಣ ನಿಲುವು ತಳೆದಿರುವ ಬಗೆಗಿನ ವೆಬಿನಾರ್​ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು. ವಿಶ್ವದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಭವಿಷ್ಯದ ಕಲ್ಪನೆಗಳನ್ನು ವಿವರಿಸುವ ವೇಳೆ ಭಾರತದಲ್ಲಿ ನಡೆಯುತ್ತಿರುವ ವಿದ್ಯಮಾನಗಳ  ಬಗ್ಗೆ ಅಮೆರಿಕ ಮತ್ತು ಅಮೆರಿಕದಲ್ಲಿನ ಸಂಸ್ಥೆಗಳು ಮೌನ ತಾಳಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಅಮೆರಿಕದ ಸಂವಿಧಾನವು ಸ್ವಾತಂತ್ರ್ಯದ ಗಾಢ ಪರಿಕಲ್ಪನೆಯನ್ನು ಸಾರುತ್ತದೆ. ಆದರೆ ಎಷ್ಟೇ ಉದಾತ್ತ ಕಲ್ಪನೆಯನ್ನು ಹೇಳಿದರೂ ಸಹ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಮತ್ತು ಸಮರ್ಥಿಸಿಕೊಳ್ಳಬೇಕು. ಹೀಗೆ ತನ್ನ ಸಂವಿಧಾನದಲ್ಲಿ ಹೇಳಲಾದ ಕಲ್ಪನೆಗಳನ್ನು ಸಮರ್ಥಿಸಿಕೊಳ್ಳುವುದು ಅಮೆರಿಕದ ಎದುರಿನ ಬಹುದೊಡ್ಡ ಪ್ರಶ್ನೆ ಎಂದು ರಾಹುಲ್ ಗಾಂಧಿ ವೆಬಿನಾರ್ ಸಂವಾದದಲ್ಲಿ ವಿವರಿಸಿದರು.

ಚುನಾವಣೆಗಳಲ್ಲಿ ಸ್ಪರ್ಧಿಸಲು ಸಮಾಜದ ವಿವಿಧ ಸಂಸ್ಥೆಗಳ ಬೆಂಬಲ ಅಗತ್ಯವಿದೆ. ನನ್ನನ್ನು ಅಥವಾ ಯಾವುದೇ ಅಭ್ಯರ್ಥಿಯನ್ನು ರಕ್ಷಿಸುವ ಕಾನೂನು, ಆರ್ಥಿಕ ಬೆಂಬಲ, ಮುಕ್ತ ವ್ಯವಸ್ಥೆಯ ಮಾಧ್ಯಮಗಳ ಬೆಂಬಲ ಚುನಾವಣೆಗಳು ನಡೆಯಲು ಅಗತ್ಯವಿದೆ. ಆದರೆ 2014ರ ನಂತರ ಸಾರ್ವಜನಿಕ ಸಂಸ್ಥೆಗಳನ್ನು ಆಡಳಿತಾರೂಢ ಸರ್ಕಾರ ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿದೆ. ದೇಶದಲ್ಲಿ ಆಡಳಿತಾರೂಢ ಬಿಜೆಪಿಯ ನಡೆಗಳು ಕುರಿತು ಸಾರ್ವಜನಿಕರಲ್ಲಿ ಅಸಮಧಾನ ಹುಟ್ಟುಹಾಕುತ್ತಿವೆ. ಇಂತಹ ಎಲ್ಲ ಜನರನ್ನೂ ಒಗ್ಗೂಡಿಸುವುದು ಮುಖ್ಯ ಎಂದು ರಾಹುಲ್ ಗಾಂಧಿ ವ್ಯಾಖ್ಯಾನಿಸಿದರು.

ಇದನ್ನೂ ಓದಿ: Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

ಆರ್​ಎಸ್ಎಸ್​ನ್ನು ಸಂಘ ಪರಿವಾರ್ ಎಂದು ಹೇಳಬಾರದು, ಅವರಿಗೆ ಕುಟುಂಬದ ಮೌಲ್ಯಗಳು ಗೊತ್ತಿಲ್ಲ: ರಾಹುಲ್ ಗಾಂಧಿ

(What Congress leader Rahul Gandhi replies a question What would you do as Indian Prime Minister)

Published On - 1:12 pm, Sat, 3 April 21

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ