AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಹ್​​ನಲ್ಲಿ ಮೆರವಣಿಗೆಗೆ ಮುನ್ನ ಎರಡು ಸಮುದಾಯದವರ ಸಭೆ ಕರೆಯಲಾಗಿತ್ತು, ಆದರೆ ಯಾತ್ರೆ ವೇಳೆ ಹಿಂಸಾಚಾರ ನಡೆಯಲು ಕಾರಣವೇನು?

ಜುಲೈ 27 ರಂದು ನುಹ್ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಜಮೀಯತ್ ಉಲೇಮಾ-ಇ-ಹಿಂದ್ ಪ್ರತಿನಿಧಿಗಳು ಮತ್ತು ಪ್ರದೇಶದ ನಿವಾಸಿಗಳ ನಡುವೆ ಸಭೆ ನಡೆದಿತ್ತು.

ನುಹ್​​ನಲ್ಲಿ ಮೆರವಣಿಗೆಗೆ ಮುನ್ನ ಎರಡು ಸಮುದಾಯದವರ ಸಭೆ ಕರೆಯಲಾಗಿತ್ತು, ಆದರೆ ಯಾತ್ರೆ ವೇಳೆ ಹಿಂಸಾಚಾರ ನಡೆಯಲು ಕಾರಣವೇನು?
ಮೋನು ಮನೇಸರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 02, 2023 | 1:23 PM

Share

ದೆಹಲಿ ಜುಲೈ 02: ಫೆಬ್ರವರಿಯಲ್ಲಿ ಭಿವಾನಿಯಲ್ಲಿ (Bhiwani) ಇಬ್ಬರು ವ್ಯಕ್ತಿಗಳ ಹತ್ಯೆ ನಂತರದ ಉದ್ವಿಗ್ನತೆಯ ನಡುವೆಯೂ, ಹರ್ಯಾಣದ (Haryana) ನುಹ್‌ನಲ್ಲಿ (Nuh) ಸೋಮವಾರದ ಬ್ರಿಜ್ಮಂಡಲ್ ಜಲಾಭಿಷೇಕ ಯಾತ್ರೆಗೆ ಹರ್ಯಾಣ ಪೊಲೀಸರು ಅನುಮತಿ ನೀಡಿದ್ದರು. ಮೆರವಣಿಗೆಯಲ್ಲಿ ಆಯುಧ ಪ್ರದರ್ಶಿಸುವಂತಿಲ್ಲ ಎಂಬ ಭರವಸೆ ಮೇರೆಗೆ ಈ ಅನುಮತಿ ನೀಡಲಾಗಿತ್ತು.ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳು ಮತ್ತು ವಿಡಿಯೊ ಹರಿದಾಡಲು ಶುರುವಾದಾಗ ಅಲ್ಲಿನ ವಾತಾವರಣವೇ ಬದಲಾಯಿತು. ಮೋನು ಮಾನೇಸರ್ (Monu Manesar)  ಎಂದು ಕರೆಯಲ್ಪಡುವ ಸ್ವಯಂಘೋಷಿತ ಗೋರಕ್ಷಕ ಮೋಹಿತ್ ಯಾದವ್ ಯಾತ್ರೆಯಲ್ಲಿ ಭಾಗವಹಿಸುವುದಾಗಿ ವಿಡಿಯೊವೊಂದರಲ್ಲಿ ಹೇಳಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು.

ಭಿವಾನಿಯಲ್ಲಿ ಜುನೈದ್ ಮತ್ತು ನಾಸಿರ್ ಹತ್ಯೆಯ ಆರೋಪಿ ಮೋನು ಜುಲೈ 29 ರಂದು ತನ್ನ ವಾಟ್ಸಾಪ್ ಸ್ಟೇಟಸ್ ಆಗಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ನಾನು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ನನ್ನ ಇಡೀ ತಂಡವೂ ಹಾಜರಿರುತ್ತದೆ ಎಂದಿದ್ದ.  ಜುಲೈ 27 ರಂದು ನುಹ್ ಪೊಲೀಸರು ಮತ್ತು ಜಿಲ್ಲಾ ಅಧಿಕಾರಿಗಳು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಜಮೀಯತ್ ಉಲೇಮಾ-ಇ-ಹಿಂದ್ ಪ್ರತಿನಿಧಿಗಳು ಮತ್ತು ಪ್ರದೇಶದ ನಿವಾಸಿಗಳ ನಡುವೆ ಸಭೆ ನಡೆದಿತ್ತು. ಯಾತ್ರೆಯ ಸಮಯದಲ್ಲಿ ಯಾವುದೇ ಶಸ್ತ್ರಾಸ್ತ್ರಗಳನ್ನು ಬಳಸುವುದಾಗಲೀ ಪ್ರದರ್ಶಿಸುವುದಾಗಲೀ ಮಾಡಬಾರದು ಎಂದು ನಾವು ಹೇಳಿದ್ದೆವು ಎಂದು ಉಪ ಆಯುಕ್ತ ಪ್ರಶಾಂತ್ ಪನ್ವಾರ್ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಈ ಯಾತ್ರೆಯನ್ನು ಮೂರು ವರ್ಷಗಳಿಂದ ನಡೆಸಲಾಗುತ್ತಿದೆ. ನಾವು ಶಸ್ತ್ರಾಸ್ತ್ರಗಳ ಬಳಕೆಯನ್ನು ವಿರೋಧಿಸುತ್ತೇವೆ ಎಂದು ಜಮಿಯತ್ ಉಲೇಮಾ-ಐ-ಹಿಂದ್ ಸದಸ್ಯ ಮೌಲಾನಾ ಯಾಹಿಯಾ ಕರೀಮಿ ಹೇಳಿದ್ದರು. ಆದರೆ ಮೋನು ಅವರ ವಿಡಿಯೊವನ್ನು ಪೋಸ್ಟ್ ಮಾಡಿದಾಗ ಪ್ರದೇಶ ಜನರ ಮನಸ್ಥಿತಿ ಬದಲಾಯಿತು. ಜುನೈದ್ ಮತ್ತು ನಾಸಿರ್ ಅವರನ್ನು ಕೊಂದ ಆರೋಪ ಮೋನು ಮೇಲಿದೆ. ಆತ ಮೇವಾತ್‌ಗೆ ಬರುತ್ತಿದ್ದಾನೆ ಎಂದು ಹೇಳಿದ್ದ. ಇದು ನಿವಾಸಿಗಳನ್ನು ಕೆರಳಿಸಿತು ಎಂದು ಜಮಿಯಾತ್ ಸದಸ್ಯ ಮುಫ್ತಿ ಸಲೀಂ ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಮೋನುವನ್ನು ಸಮರ್ಥಿಸಿಕೊಂಡರು. “ಮೋನು ಈಗಷ್ಟೇ ವಿಡಿಯೊ ಪೋಸ್ಟ್ ಮಾಡಿದ್ದಾರೆ, ಅದು ಜನರನ್ನು ಯಾಕೆ ಕೆರಳಿಸಬೇಕು? ಯಾತ್ರೆಯು ವಿಎಚ್‌ಪಿ ಅಥವಾ ಬಜರಂಗದಳದ ಬಗ್ಗೆ ಅಲ್ಲ, ಅದು ಹಿಂದೂ ಸಮುದಾಯಕ್ಕೆ ಸಂಬಂಧಿಸಿದ್ದು ಎಂದು ಗುರಗಾಂವ್ ಬಜರಂಗದಳದ ಸದಸ್ಯ ಅಮಿತ್ ಹಿಂದೂ ಹೇಳಿದ್ದಾರೆ.

ವಿಡಿಯೊ ಪೋಸ್ಟ್ ಮಾಡಿ ಬರುತ್ತೇನೆ ಎಂದು ಹೇಳಿದ್ದರೂ ಮೋನು ಬರಲಿಲ್ಲ. ವಿಎಚ್‌ಪಿ ಮತ್ತು ಬಜರಂಗದಳದ ನಾಯಕರು ಯಾತ್ರೆಯಲ್ಲಿ ಆತ ಪಾಲ್ಗೊಳ್ಳದಿರುವಂತೆ ಹೇಳಿರುವುದಾಗಿ ಅಮಿತ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹರ್ಯಾಣ ಹಿಂಸಾಚಾರ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 116 ಜನರ ಬಂಧನ, ದೆಹಲಿಯಿಂದ ಯುಪಿವರೆಗೆ ಕಟ್ಟೆಚ್ಚರ

17 ಎಫ್‌ಐಆರ್‌ಗಳು ದಾಖಲಾಗಿವೆ. 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ, ನುಹ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರ ಬಳಿ ಬಂದೂಕುಗಳು, ಕೋಲುಗಳು ಮತ್ತು ಕತ್ತಿಗಳು ಸಹ ಇದ್ದವು. ನಾವು ಈ ಪ್ರದೇಶದಲ್ಲಿ ಬಂದೂಕು ಪರವಾನಗಿಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಭಿವಾನಿ ನರೇಂದ್ರ ಬಿಜರ್ನಿಯಾ ಹೇಳಿದರು.

ವಿಡಿಯೊ ಮತ್ತು ಎರಡೂ ಸಮುದಾಯಗಳ ಸಂದೇಶಗಳಿಗೆ ಸಂಬಂಧಿಸಿದಂತೆ ಯಾರೂ ಎಚ್ಚರಿಕೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ