AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮ ದಾಳಿಗೆ ಯೋಧರು ಪ್ರತಿಭಟಿಸಿ ಗಡಿ ತೊರೆದರೆ ಏನಾಗುತ್ತದೆ?: ಮುಷ್ಕರ ನಿರತ ವೈದ್ಯರಿಗೆ ಟಿಎಂಸಿ ನಾಯಕನ ಪ್ರಶ್ನೆ

"ನನಗೊಂದು ಪ್ರಶ್ನೆಯಿದೆ" ಎಂದು ಎಕ್ಸ್ ನಲ್ಲಿ ಬೆಂಗಾಲಿಯಲ್ಲಿ ಪೋಸ್ಟ್ ಮಾಡಿದ ಘೋಷ್, "ಪುಲ್ವಾಮಾ ಪ್ರಕರಣದಲ್ಲಿ ಯಾವುದೇ ನ್ಯಾಯ ಸಿಕ್ಕಿಲ್ಲ, ಯೋಧರು ಗಡಿಯನ್ನು ತೊರೆದು 'ನಮಗೆ ನ್ಯಾಯ ಬೇಕು' ಪ್ರತಿಭಟನೆಯನ್ನು ಪ್ರಾರಂಭಿಸಿದರೆ, ನೀವು ಅದನ್ನು ಯಾವ ರೀತಿ ನೋಡುತ್ತೀರಿ?" ಎಂದು ಕೇಳಿದ್ದಾರೆ.ಮಂಗಳವಾರ, ಸುಪ್ರೀಂಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಅವರ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದ್ದು, ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ.

ಪುಲ್ವಾಮ ದಾಳಿಗೆ ಯೋಧರು ಪ್ರತಿಭಟಿಸಿ ಗಡಿ ತೊರೆದರೆ ಏನಾಗುತ್ತದೆ?: ಮುಷ್ಕರ ನಿರತ ವೈದ್ಯರಿಗೆ ಟಿಎಂಸಿ ನಾಯಕನ ಪ್ರಶ್ನೆ
ಕುನಾವ್ ಘೋಷ್
ರಶ್ಮಿ ಕಲ್ಲಕಟ್ಟ
|

Updated on: Aug 21, 2024 | 7:10 PM

Share

ಕೋಲ್ಕತ್ತಾ ಆಗಸ್ಟ್ 21: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವೈದ್ಯರನ್ನು ಬುಧವಾರ ಪ್ರಶ್ನಿಸಿರುವ ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ (Kunal Ghosh), ಗಡಿಯಲ್ಲಿನ ಸೈನಿಕರು ಪುಲ್ವಾಮಾ ದಾಳಿಯ ವಿರುದ್ಧ ಪ್ರತಿಭಟನೆ ಆರಂಭಿಸಿದರೆ ಏನಾಗುತ್ತದೆ ಎಂದು ಕೇಳಿದ್ದಾರೆ.  ವೈದ್ಯರು ತಮ್ಮ ಮುಷ್ಕರವನ್ನು ಕೊನೆಗೊಳಿಸುವಂತೆ ಕುನಾಲ್ ಘೋಷ್ ಮನವಿ ಮಾಡಿದ್ದು, 2019 ರಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಪುಲ್ವಾಮಾ ದಾಳಿಯಲ್ಲಿ ಸೈನಿಕರಿಗೆ ನ್ಯಾಯ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

“ನನಗೊಂದು ಪ್ರಶ್ನೆಯಿದೆ” ಎಂದು ಎಕ್ಸ್ ನಲ್ಲಿ ಬೆಂಗಾಲಿಯಲ್ಲಿ ಪೋಸ್ಟ್ ಮಾಡಿದ ಘೋಷ್, “ಪುಲ್ವಾಮಾ ಪ್ರಕರಣದಲ್ಲಿ ಯಾವುದೇ ನ್ಯಾಯ ಸಿಕ್ಕಿಲ್ಲ, ಯೋಧರು ಗಡಿಯನ್ನು ತೊರೆದು ‘ನಮಗೆ ನ್ಯಾಯ ಬೇಕು’ ಪ್ರತಿಭಟನೆಯನ್ನು ಪ್ರಾರಂಭಿಸಿದರೆ, ನೀವು ಅದನ್ನು ಯಾವ ರೀತಿ ನೋಡುತ್ತೀರಿ?” ಎಂದು ಕೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಸರ್ಕಾರವು ಭೀಕರ ಅತ್ಯಾಚಾರ ಮತ್ತು ಕೊಲೆಯ ಬಗ್ಗೆ ಪ್ರತಿಪಕ್ಷಗಳಿಂದ ಟೀಕೆಗೆ ಒಳಗಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅಪರಾಧದ ವಿರುದ್ಧ ದೇಶಾದ್ಯಂತ ಸಾವಿರಾರು ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳವಾರ, ಸುಪ್ರೀಂಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಅವರ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದ್ದು, ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪ್ರಯೋಗ ಮಾಡದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.

ಮೃತದೇಹವನ್ನು ಸಂತ್ರಸ್ತೆಯ ಕುಟುಂಬಕ್ಕೆ ಹಸ್ತಾಂತರಿಸಿದ ಮೂರು ಗಂಟೆಗಳ ನಂತರ ಕೊಲೆ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ನ್ಯಾಯಾಲಯ ಬಂಗಾಳ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: Kolkata doctor murder: ಒಂದೇ ರಾತ್ರಿಯಲ್ಲಿ ಎಲ್ಲ ಕನಸುಗಳು ಛಿದ್ರವಾಗಿಬಿಟ್ಟಿತು; ಸಂದರ್ಶನದಲ್ಲಿ ಕಣ್ಣೀರು ಹಾಕಿದ ವೈದ್ಯೆಯ ಅಪ್ಪ

ಮಹಿಳೆ ತನ್ನ 36 ಗಂಟೆಗಳ ಸುದೀರ್ಘ ಶಿಫ್ಟ್ ನಡುವೆ ವಿಶ್ರಾಂತಿ ಪಡೆಯಲು ಆಸ್ಪತ್ರೆಯ ಸೆಮಿನಾರ್ ಹಾಲ್‌ಗೆ ಹೋಗಿದ್ದರು. ಮರುದಿನ ಬೆಳಗ್ಗೆ ಆಕೆ ಶವವಾಗಿ ಪತ್ತೆಯಾಗಿದ್ದಳು. ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆ ನಡೆದಾಗ ಆರ್‌ಜಿ ಕರ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ.ಸಂದೀಪ್ ಘೋಷ್ ಅವರನ್ನೂ ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಸಂಚಿನ ಭಾಗವಾಗಿ ಮಹಿಳೆಯನ್ನು ಕೊಲೆ ಮಾಡಲಾಗಿದೆಯೇ ಎಂದು ಕಂಡುಹಿಡಿಯಲು ಸಂಸ್ಥೆ ಪ್ರಯತ್ನಿಸುತ್ತಿದೆ.  ಪ್ರಮುಖ ಆರೋಪಿ ಮತ್ತು ಮಾಜಿ ಪ್ರಾಂಶುಪಾಲರನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ಸಂಸ್ಥೆ ಚಿಂತನೆ ನಡೆಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್