What India Thinks Today: ಖೇಲೋ ಇಂಡಿಯಾ ದೇಶವನ್ನು ಬಲಿಷ್ಠಗೊಳಿಸುತ್ತಿದೆ: ಅನುರಾಗ್ ಠಾಕೂರ್

| Updated By: ಅಕ್ಷಯ್​ ಪಲ್ಲಮಜಲು​​

Updated on: Feb 24, 2024 | 11:51 AM

ಟಿವಿ9 ನೆಟ್​​ವರ್ಕ್​​​ ಪ್ರಸ್ತುತ ಪಡಿಸುತ್ತಿರುವ What India Thinks Today ಕಾರ್ಯಕ್ರಮ ಮೂರು ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ (ಫೆ.25ರಿಂದ 27ರವರೆಗೆ) ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿಸಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್​​ ಠಾಗೂರ್​​​ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಭಾಗವಹಿಸುತ್ತಿದ್ದಾರೆ.

What India Thinks Today: ಖೇಲೋ ಇಂಡಿಯಾ ದೇಶವನ್ನು  ಬಲಿಷ್ಠಗೊಳಿಸುತ್ತಿದೆ: ಅನುರಾಗ್ ಠಾಕೂರ್
Follow us on

ಟವಿ9 ನೆಟ್​​​ವರ್ಕ್​​ ಆಯೋಜಿಸಿರುವ What India Thinks Today ಕಾರ್ಯಕ್ರಮ ಫೆ.25ರಿಂದ 27ರವರಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಜಗತ್ತಿನ ನಾಯಕರು ಭಾಗವಹಿಸಲಿದ್ದಾರೆ. ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕ್ರೀಡಾ ಸಚಿವ ಅನುರಾಗ್ ಠಾಕೂರ್, ಭಾರತದ ಖ್ಯಾತ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಖ್ಯಾತ ಆಟಗಾರರು ಇದರಲ್ಲಿ ಭಾಗವಹಿಸುತ್ತಿದ್ದಾರೆ.

ಖೇಲೋ ಇಂಡಿಯಾ ಭಾರತವನ್ನು ಬಲಿಷ್ಠಗೊಳಿಸುತ್ತಿದೆ: ಅನುರಾಗ್ ಠಾಕೂರ್

ಅನುರಾಗ್ ಠಾಕೂರ್ ಅವರು ಒಬ್ಬ ಕ್ರಿಕೆಟಿಗ ಹಾಗೂ ನಂತರದಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಇದೀಗ ಮೋದಿ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಮತ್ತು ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಸಚಿವಾಲಯವು ವಿಶೇಷವಾಗಿ ಖೇಲೋ ಇಂಡಿಯಾ ಗೇಮ್ಸ್ ಮೂಲಕ ದೇಶದ ವಿವಿಧ ಭಾಗಗಳಿಂದ ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಒಂದು ಉತ್ತಮ ವೇದಿಕೆಯನ್ನು ಸೃಷ್ಟಿಸಿದೆ.

ಪ್ರಧಾನಿ ಮೋದಿ ಅವರು ಕ್ರೀಡಾ ಸೂಪರ್ ಪವರ್ ಮಾಡಲು ಕೆಲವು ವರ್ಷಗಳ ಹಿಂದೆ ‘ಖೇಲೋ ಇಂಡಿಯಾ’ ಆರಂಭಿಸಿತ್ತು. ಭಾರತ ಸರ್ಕಾರ ಖೇಲೋ ಇಂಡಿಯಾ ಮೂಲಕ ದೇಶದ ಯುವಕರನ್ನು ಹೇಗೆ ಉತ್ತೇಜಿಸುತ್ತಿದೆ. ಹಾಗಾಗಿ ಟಿವಿ9 ಕಾರ್ಯಕ್ರಮದ ಮೂಲಕ ಕ್ರೀಡಾ ಕ್ಷೇತ್ರ ಸಾಧನೆ ಹಾಗೂ ಮುಂದಿನ ಯೋಜನೆಗಳ ಬಗ್ಗೆ ತಿಳಿಸಲಿದ್ದಾರೆ.

ಖ್ಯಾತ ಆಟಗಾರರೂ ಪಾಲ್ಗೊಳ್ಳಲಿದ್ದಾರೆ

ಸೂರ್ಯಕುಮಾರ್ ಯಾದವ್: ಭಾರತ ಕ್ರಿಕೆಟ್ ತಂಡದ ಸ್ಟಾರ್ ಸೂರ್ಯಕುಮಾರ್ ಯಾದವ್ ಅವರು ಸ್ಫೋಟಕ ಬ್ಯಾಟಿಂಗ್‌ನಿಂದ ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಛಾಪು ಮೂಡಿಸಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್​​​​ನಲ್ಲಿ ತಮ್ಮನ್ನು ತೋಡಗಿಸಿಕೊಂಡು, ಎಲ್ಲರಿಗೂ ಮಾರಿಯಾಗಿದ್ದಾರೆ. ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿರುವ ಅವರು ಟೀಮ್ ಇಂಡಿಯಾದ ನಾಯಕತ್ವವನ್ನೂ ಕೂಡ ವಹಿಸಿದ್ದರು.

ಹರ್ಮಿಲನ್ ಬೇನ್ಸ್: ಭಾರತದ ಯುವ ಅಥ್ಲೀಟ್ ಹರ್ಮಿಲನ್ ಬೈನ್ಸ್, ಕಳೆದ ವರ್ಷ ಏಷ್ಯನ್ ಗೇಮ್ಸ್ ನಲ್ಲಿ 800 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಇದಲ್ಲದೇ 1500 ಮೀಟರ್ ಓಟದಲ್ಲಿ ರಾಷ್ಟ್ರೀಯ ದಾಖಲೆಯನ್ನು ಮಾಡಿದ್ದಾರೆ.

ಇದನ್ನೂ ಓದಿ: ಫೆ.27ರ ಟಿವಿ9 ಕಾರ್ಯಕ್ರಮದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಮುಖಾಮುಖಿ

ಪುಲ್ಲೇಲ ಗೋಪಿಚಂದ್: ಭಾರತದ ಮಾಜಿ ಬ್ಯಾಡ್ಮಿಂಟನ್ ತಾರೆ ಮತ್ತು ಖ್ಯಾತ ಕೋಚ್ ಪುಲ್ಲೇಲ ಗೋಪಿಚಂದ್ ಅವರು ಭಾರತಕ್ಕೆ ಅನೇಕ ಬ್ಯಾಡ್ಮಿಂಟನ್ ಆಟಗಾರರನ್ನು ನೀಡಿದ್ದಾರೆ. ಅವರ ಶಿಷ್ಯರಾದ ಸೈನಾ ನೆಹ್ವಾಲ್, ಪಿವಿ ಸಿಂಧು ಅವರು ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕಗಳನ್ನು ತಂದುಕೊಟ್ಟಿದ್ದಾರೆ. ಈಗಲೂ ಅದೇ ಉತ್ಸಾಹದಿಂದ ದೇಶಕ್ಕೆ ಹೊಸ ಬ್ಯಾಡ್ಮಿಂಟನ್ ತಾರೆಯರನ್ನು ನೀಡುತ್ತಿದ್ದಾರೆ.

ಅಮೀರ್ ಹುಸೇನ್: ಜಮ್ಮು ಮತ್ತು ಕಾಶ್ಮೀರ ಪ್ಯಾರಾ ಕ್ರಿಕೆಟ್ ತಂಡದ ನಾಯಕ ಅಮೀರ್ ಹುಸೇನ್ ಲೋನ್ ತಮ್ಮ ವಿಭಿನ್ನ ಶೈಲಿಯ ಬ್ಯಾಟಿಂಗ್‌ನಿಂದ ಚರ್ಚೆಗೆ ಕಾರಣವಾಗಿದ್ದಾರೆ. ಇದು ಮಾತ್ರವಲ್ಲದೆ ಆಟಗಾರರಿಗೆ ಸ್ಫೂರ್ತಿ ನೀಡುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Fri, 23 February 24