AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT TV9 Global Summit 2024: ರಾಮನ ಹೆಸರಿನಲ್ಲಿ ಮತ ಕೇಳಬಾರದು: ಕೇಜ್ರಿವಾಲ್

ನಾನು ಪಕ್ಷವನ್ನು ಸ್ಥಾಪಿಸಿದ ನಂತರ ದೆಹಲಿಯ ಜನರ ಪ್ರೀತಿಯನ್ನು ಪಡೆದಿದ್ದು, ಸಾರ್ವಜನಿಕ ಸೇವೆಗಾಗಿ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದು ಹೇಳಿದರು. ಮೂರು ಕ್ಷೇತ್ರಗಳ ಪೈಕಿ ದೆಹಲಿಯ ಶಿಕ್ಷಣ ವ್ಯವಸ್ಥೆಗೆ ಮೊದಲು ಗಮನ ಹರಿಸಿದೆ ಎಂದರು. ದೆಹಲಿಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸುಧಾರಿಸಲಾಗಿದೆ. ಅವುಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

WITT TV9 Global Summit 2024: ರಾಮನ ಹೆಸರಿನಲ್ಲಿ ಮತ ಕೇಳಬಾರದು: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 8:45 PM

Share

ದೆಹಲಿ ಫೆಬ್ರವರಿ  27: ವಾಟ್ ಇಂಡಿಯಾ ಥಿಂಕ್ಸ್ ಟುಡೇ (TV9 WITT Summit 2024) ಸತ್ತಾ ಸಮ್ಮೇಳನದಲ್ಲಿ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂಡಿಯಾ  (INDIA) ಮೈತ್ರಿ ಕುರಿತು ಅವರು ಮಾತನಾಡಿದರು. ಕೆಲವು ಚಟುವಟಿಕೆಗಳು ನಡೆದಿವೆ ಆದರೆ ನನಗೆ ತೃಪ್ತಿ ಇಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನಾವು ಸಮಯಕ್ಕೆ ವೇಗವಾಗಿ ಕೆಲಸ ಮಾಡಿದ್ದರೆ, ಫಲಿತಾಂಶವು ಉತ್ತಮವಾಗಿರುತ್ತಿತ್ತು. ಕಾಂಗ್ರೆಸ್ ಇಂಡಿಯಾವನ್ನು ಮುನ್ನಡೆಸುತ್ತಿತ್ತು, ಅದನ್ನು ಮುಂದುವರಿಸಬೇಕಿದೆ. ಸೀಟು ಹಂಚಿಕೆ ಚೆನ್ನಾಗಿತ್ತು ಎಂದಿದ್ದಾರೆ.

400 ಸೀಟುಗಳ ಮಾತು ಮೂರ್ಖತನ, ಬಿಜೆಪಿ 270 ದಾಟಿದರೆ ಅದೇ ದೊಡ್ಡ ವಿಷಯ ಎಂದ ಕೇಜ್ರಿವಾಲ್, ಒಂದೊಮ್ಮೆ ಇಂಡಿಯಾ ಶೈನಿಂಗ್ ಕೂಡ ಆಯಿತು. ಇಂದಿಗೂ ಅವರು ವಿಶ್ವಗುರುಗಳು ಎಂಬ ವಾತಾವರಣವನ್ನೇ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ., ಅವರು ತಪ್ಪು ಗ್ರಹಿಕೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ರಾಮನ ಹೆಸರಿನಲ್ಲಿ ಮತ ಕೇಳಬಾರದು

ರಾಮಮಂದಿರ ಇರಬೇಕು. ರಾಮಮಂದಿರದಲ್ಲಿ 140 ಕೋಟಿ ಜನರಿಗೆ ನಂಬಿಕೆ ಇದೆ. ಅದರ ಹೆಸರಿನಲ್ಲಿ ಮತ ಕೇಳಬಾರದು. ಇದು ತಪ್ಪು. ನೀವು ಮೃದು ಹಿಂದುತ್ವದ ಬಗ್ಗೆ ನನ್ನನ್ನು ಪ್ರಶ್ನಿಸುತ್ತಿದ್ದರೆ, ನಿಮಗೆ ನನ್ನ ಬಗ್ಗೆ ತಿಳಿದಿಲ್ಲ. ನಾನು ಯಾರನ್ನು ಆರಾಧಿಸುತ್ತೇನೆಂದು ನಿಮಗೆ ತಿಳಿದಿಲ್ಲ. ರಾಮಮಂದಿರಕ್ಕೆ ನಾನು ಹೋಗುವುದಾದರೆ ಅದನ್ನು ಘೋಷಿಸಿಕೊಂಡು ಹೋಗಿಲ್ಲ . ಹಾಗೆ ಮಾಡಿದರೆ ಅದರಲ್ಲಿ ತಪ್ಪೇನಿದೆ? ಇಲ್ಲಿ ನೀವು ಮತಗಳನ್ನು ಪಡೆಯಲು ಪ್ರಯತ್ನಿಸಿದಾಗ ಮೃದು ಮತ್ತು ಕಠಿಣ ಹಿಂದುತ್ವದ ವಿಷಯವು ಕಾರ್ಯರೂಪಕ್ಕೆ ಬರುತ್ತದೆ. ಇಂದು ದೇಶದ ಸ್ಥಿತಿಗತಿ, ಆಡಳಿತದ ರೀತಿ ಎಲ್ಲರ ಬದುಕನ್ನು ಹಾಳು ಮಾಡಿದೆ. 140 ಕೋಟಿ ಜನರು ಒಗ್ಗೂಡಿ ಈ ಸರಕಾರವನ್ನು ಕೇಂದ್ರದಿಂದ ಕಿತ್ತೊಗೆಯಬೇಕಾಗಿದೆ ಎಂದಿದ್ದಾರೆ ಕೇಜ್ರಿವಾಲ್.

ವಿರೋಧ ಪಕ್ಷಗಳ ಬಗ್ಗೆ ಚರ್ಚಿಸುವ ಬದಲು ಅವರು ಮೊದಲು ತಮ್ಮ ದೂರದೃಷ್ಟಿ ಮತ್ತು ಸರ್ಕಾರ ನಡೆಸುವ ವಿಧಾನದ ಬಗ್ಗೆ ಕೇಜ್ರಿವಾಲ್ ಮಾತನಾಡಿದ್ದಾರೆ . ಶಿಕ್ಷಣ, ಆರೋಗ್ಯ ಮತ್ತು ವಿದ್ಯುತ್ ಇಲಾಖೆಗಳನ್ನು ಇಟ್ಟುಕೊಂಡು ಮೂರು ಪ್ರಮುಖ ಕ್ಷೇತ್ರಗಳ ಅಭಿವೃದ್ಧಿ ಕುರಿತು ಮಾತನಾಡಿದ ಅವರು ಈ ಮೂರು ಕ್ಷೇತ್ರಗಳ ಅಭಿವೃದ್ಧಿಯಿಂದ ಮಾತ್ರ ಭಾರತದ ನಿಜವಾದ ಅಭಿವೃದ್ಧಿಯಾಗಲಿದ್ದು, ಪ್ರತಿ ಗ್ರಾಮಕ್ಕೂ ಸೌಲಭ್ಯಗಳು ತಲುಪಲಿವೆ ಎಂದರು.

ನಾನು ಪಕ್ಷವನ್ನು ಸ್ಥಾಪಿಸಿದ ನಂತರ ದೆಹಲಿಯ ಜನರ ಪ್ರೀತಿಯನ್ನು ಪಡೆದಿದ್ದು, ಸಾರ್ವಜನಿಕ ಸೇವೆಗಾಗಿ ಕೆಲಸ ಮಾಡಿದ್ದು ನನ್ನ ಅದೃಷ್ಟ ಎಂದು ಹೇಳಿದರು. ಮೂರು ಕ್ಷೇತ್ರಗಳ ಪೈಕಿ ದೆಹಲಿಯ ಶಿಕ್ಷಣ ವ್ಯವಸ್ಥೆಗೆ ಮೊದಲು ಗಮನ ಹರಿಸಿದೆ ಎಂದರು. ದೆಹಲಿಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸುಧಾರಿಸಲಾಗಿದೆ. ಅವುಗಳಲ್ಲಿ ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಮಕ್ಕಳಿಗೆ ಓದಲು ವ್ಯವಸ್ಥೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಕೆಲಸದಿಂದಾಗಿ ದೆಹಲಿಯ ಸರ್ಕಾರಿ ಶಾಲೆಗಳ ಫಲಿತಾಂಶವು ಶೇಕಡಾ 99 ಕ್ಕೆ ತಲುಪಿದೆ. ಸುಮಾರು 4 ಲಕ್ಷ ಮಕ್ಕಳು ಖಾಸಗಿ ಶಾಲೆಗಳಿಂದ ತಮ್ಮ ಹೆಸರನ್ನು ತೆಗೆದು ಸರ್ಕಾರಿ ಶಾಲೆಗೆ ದಾಖಲು ಮಾಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅವರ ಕೆಲಸಗಳನ್ನು ಪಟ್ಟಿ ಮಾಡಿದ ಅವರು, ಕೆಲವು ರಾಜ್ಯಗಳಲ್ಲಿ 4,500 ಸರ್ಕಾರಿ ಶಾಲೆಗಳನ್ನು ಮತ್ತು ಕೆಲವು ರಾಜ್ಯಗಳಲ್ಲಿ 6,000 ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಬಿಜೆಪಿ ಸರ್ಕಾರವಾಗಿದೆ. ದೇಶಾದ್ಯಂತ ಎಲ್ಲ ಶಾಲೆಗಳ ದುರಸ್ತಿಗೆ 5 ಲಕ್ಷ ಕೋಟಿ ರೂಪಾಯಿ ಅಗತ್ಯವಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಕುಟುಂಬದಿಂದ ನಡೆಸುವ ಪಕ್ಷಗಳು ಹೊಸ ಊಳಿಗಮಾನ್ಯ ಪದ್ಧತಿ ಹುಟ್ಟುಹಾಕುತ್ತಿವೆ, ಅವರನ್ನು ಸೋಲಿಸುವುದು ಅಗತ್ಯ: ಭೂಪೇಂದ್ರ ಯಾದವ್

ಮೊಹಲ್ಲಾ ಕ್ಲಿನಿಕ್ ಮತ್ತು ಆಯುಷ್ಮಾನ್ ಕಾರ್ಡ್

ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಅವರು ಆರೋಗ್ಯ ಕ್ಷೇತ್ರದಲ್ಲಿನ ಅನೇಕ ಪ್ರಯೋಜನಗಳನ್ನು ವಿವರಿಸಿದರು. ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ಮೊಹಲ್ಲಾ ಕ್ಲಿನಿಕ್‌ಗಳನ್ನು ಪ್ರಾರಂಭಿಸಿದೆ ಮತ್ತು ಎಲ್ಲಾ ರೀತಿಯ ಸೌಲಭ್ಯಗಳನ್ನು ಉಚಿತವಾಗಿ ನೀಡಿದೆ ಎಂದು ಹೇಳಿದರು. ಮೊಹಲ್ಲಾ ಚಿಕಿತ್ಸಾಲಯದಲ್ಲಿ ರಕ್ತ ಪರೀಕ್ಷೆಯಿಂದ ಹಿಡಿದು ಆಪರೇಷನ್‌ಗಳವರೆಗೆ ಎಲ್ಲಾ ರೀತಿಯ ಔಷಧಿಗಳನ್ನು ಅವರು ಉಚಿತವಾಗಿ ಒದಗಿಸಿದ್ದಾರೆ. ದೆಹಲಿಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಕೇಜ್ರಿವಾಲ್ ಅವರು ಮಾಡಿದ ಕೆಲಸವನ್ನು ಪಟ್ಟಿ ಮಾಡಿದ ನಂತರ, ಕೇಜ್ರಿವಾಲ್ ಮತ್ತೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿದರು ಮತ್ತು ಆಯುಷ್ಮಾನ್ ಕಾರ್ಡ್ ಬಿಜೆಪಿ ಸರ್ಕಾರದ ಆರೋಗ್ಯ ಮಾದರಿಯಾಗಿದೆ ಎಂದು ಹೇಳಿದರು. ಆಯುಷ್ಮಾನ್ ಕಾರ್ಡ್ ಎಂದರೇನು?ಇದು ವಿಮಾ ಮಾದರಿಯಾಗಿದೆ. ಕೇಂದ್ರವು ಜನರಿಗೆ ಆಯುಷ್ಮಾನ್ ಕಾರ್ಡ್‌ಗಳನ್ನು ನೀಡಿದ್ದು, ಇದರಲ್ಲಿ 5 ಲಕ್ಷ ರೂ.ವರೆಗೆ ಚಿಕಿತ್ಸೆಯಲ್ಲಿ ರಿಯಾಯಿತಿ ಇದೆ ಎಂದಿದ್ದಾರೆ.

ವಿದ್ಯುತ್ ಮಾದರಿಯ ಕುರಿತು ಚರ್ಚೆ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ರಚನೆಯಾದಾಗ ದೆಹಲಿಯಲ್ಲಿ 6-6 ಗಂಟೆಗಳ ಕಾಲ ವಿದ್ಯುತ್ ಕಡಿತವಾಗುತ್ತಿತ್ತು. ಪಂಜಾಬ್‌ನಲ್ಲಿ 10-10 ಗಂಟೆಗಳ ಕಾಲ ವಿದ್ಯುತ್ ಕಡಿತವಾಗುತ್ತಿತ್ತು. ಆದರೆ ನಾವು ಅದರ ಬಗ್ಗೆ ಕೆಲಸ ಮಾಡಿದ್ದೇವೆ ಮತ್ತು ಈಗ ನಾವು ದೆಹಲಿಯಲ್ಲಿ 24 ಗಂಟೆಗಳ ವಿದ್ಯುತ್ ಪಡೆಯುತ್ತಿದ್ದೇವೆ. ಪೀಕ್ ಅವರ್ ನಲ್ಲಿ ಇಡೀ ದೇಶದಲ್ಲಿ 2 ಲಕ್ಷ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ. ನಮ್ಮ ದೇಶವು 4 ಲಕ್ಷ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ದೆಹಲಿ ಸಿಎಂ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?