AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ರೈತರ ಚಳವಳಿಗೆ ಪರಿಹಾರವೇನು? ಟಿವಿ9 ವೇದಿಕೆಯಲ್ಲಿ ಕೃಷಿ ಸಚಿವ ಅರ್ಜುನ್ ಮುಂಡಾ ಉತ್ತರ ಏನು?

ವಾಟ್ ಇಂಡಿಯಾ ಟುಡೇ' ಟಿವಿ9 ನೆಟ್​​​​ವರ್ಕ್​​​ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವರು 'ಜೈ ಕಿಸಾನ್, ಕ್ಯಾ ಸಮಾಧಾನ್' ಎಂಬ ವಿಚಾರದ ಬಗ್ಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರೈತರ ಬೇಡಿಕೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಪರಿಹಾರಗಳನ್ನು ಪ್ರಸ್ತಾಪಿಸಬಹುದು. What India Thinks Today ಕಾರ್ಯಕ್ರಮ ದೆಹಲಿಯಲ್ಲಿ ಫೆ.25ರಿಂದ 27ರವರೆಗೆ ನಡೆಯಲಿದೆ.

What India Thinks Today: ರೈತರ ಚಳವಳಿಗೆ ಪರಿಹಾರವೇನು? ಟಿವಿ9 ವೇದಿಕೆಯಲ್ಲಿ ಕೃಷಿ ಸಚಿವ ಅರ್ಜುನ್ ಮುಂಡಾ ಉತ್ತರ ಏನು?
TV9 Web
| Edited By: |

Updated on: Feb 24, 2024 | 2:36 PM

Share

ಟಿವಿ9 ನೆಟ್​​​ವರ್ಕ್​​​ ಬಹುದೊಡ್ಡ ವೇದಿಕೆಯನ್ನು ನಿರ್ಮಾಣ ಮಾಡಿದ ‘ವಾಟ್ ಇಂಡಿಯಾ ಟುಡೇ ಥಿಂಕ್ಸ್’ ಎಂಬ ಕಾರ್ಯಕ್ರಮದ ಮೂಲಕ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದೆ.ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಫೆ.25ರಿಂದ ಫೆ.27ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಈ ವೇದಿಕೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರು ಅರ್ಜುನ್ ಮುಂಡಾ ಭಾಗವಹಿಸಲಿದ್ದಾರೆ. ದೇಶದ ರೈತರ ಅಸಮಾಧಾನ ಮತ್ತು ಅವರ ಚಳವಳಿಯ ಅಂತ್ಯಕ್ಕೆ ಸಂಬಂಧಿಸಿದಂತೆ ಮುಂಡಾ ಅವರು ಕೆಲವು ಪರಿಣಾಮಕಾರಿ ವಿಚಾರಗಳನ್ನು ಉಲ್ಲೇಖಿಸಬಹುದು. ಈಗಾಗಲೇ ಚಳವಳಿ ಅಂತ್ಯಗೊಳಿಸುವ ಕುರಿತು 3 ಕೇಂದ್ರ ಸಚಿವರ ತಂಡವು ಮುಂಡಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದೆ.

ಅರ್ಜುನ್ ಮುಂಡಾ ‘ಜೈ ಕಿಸಾನ್, ಕ್ಯಾ ಸಮಾಧಾನ್’ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರೈತರ ಬೇಡಿಕೆಗಳು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ನೀಡುವ ಬಗ್ಗೆ ಮಾತನಾಡಬಹುದು. ಆದರೆ ಈಗಾಗಲೇ ಸರಕಾರ ಮತ್ತು ರೈತ ಸಂಘಟನೆಗಳ ನಡುವೆ ಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಎಲ್ಲವೂ ವಿಫಲವಾಗಿವೆ. ಇದೀಗ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ.

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ರೈತರ ಆಂದೋಲನದ ಬಗ್ಗೆ ಕೃಷಿ ಸಚಿವ ಅರ್ಜುನ್ ಮುಂಡಾ ಈಗಾಗಲೇ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಹಲವು ಸುತ್ತಿನ ಮಾತುಕತೆಗಳಲ್ಲಿ ಕೆಲವು ವಿಷಯಗಳನ್ನು ಒಪ್ಪಿಕೊಳ್ಳಬೇಕು ಅದಕ್ಕೆ ಕೆಲವೊಂದು ಪ್ರಯತ್ನಗಳು ನಡೆಯುತ್ತದೆ. ರೈತರ ಹಿತದೃಷ್ಟಿಯಿಂದ ಕೆಲಸ ಮಾಡಲು ಮೋದಿ ಸರ್ಕಾರ ಬದ್ಧವಾಗಿದೆ. ಇದುವರೆಗೆ ನಡೆದ 4ನೇ ಸುತ್ತಿನ ಮಾತುಕತೆಯಲ್ಲಿ ಸಾಕಷ್ಟು ಅರ್ಥಪೂರ್ಣ ಮಾತುಕತೆ ನಡೆದಿದೆ. ಪ್ರತಿಯೊಬ್ಬರ ಹಿತಾಸಕ್ತಿ ಹೊಂದಿರುವ ಇಂತಹ ಪರಿಹಾರವನ್ನು ನಾವು ಬಯಸುತ್ತೇವೆ. ಮಾತುಕತೆಯಿಂದ ಮಾತ್ರ ಈ ಪರಿಹಾರ ಸಾಧ್ಯ. ನಾವು ಮತ್ತೆ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ರೈತರ ಚಳವಳಿ ದೆಹಲಿಗೆ ಬರದಂತೆ ತಡೆಯಲು ಹರಿಯಾಣ ಮತ್ತು ಪಂಜಾಬ್ ಗಡಿಯಲ್ಲಿ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪಂಜಾಬ್ ಮತ್ತು ಹರಿಯಾಣದ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಕೂಡ ನಿಷೇಧಿಸಲಾಗಿದೆ. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಜೊತೆಗೆ ಪಿಂಚಣಿ, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು, 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ, ವಿದ್ಯುತ್ ದರ ಹೆಚ್ಚಳ ಮತ್ತು 2020-21 ಆಂದೋಲನದಲ್ಲಿ ಸಾವನ್ನಪ್ಪಿದವರಿಗೆ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರಕ್ಕೆ ಒತ್ತಡ ತರಲಾಗಿದೆ.

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ