AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

What India Thinks Today:ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು

What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?
Rajnath Singh
TV9 Web
| Edited By: |

Updated on: Jun 18, 2022 | 12:38 PM

Share

ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು. ದೇಶದ ನಾಗರಿಕರು ದೇಶಕ್ಕಾಗಿ ಬದ್ಧತೆಯನ್ನು ಹೊಂದಿರಬೇಕೆಂದು ನಾವು ಬಯಸುತ್ತೇವೆ. ಇದು ನಾಲ್ಕು ವರ್ಷಗಳ ಸೇವೆಯಾಗಿದೆ. ನಾಲ್ಕು ವರ್ಷ ಮುಗಿದ ನಂತರ ಅವರ ಕೈಯಲ್ಲಿ 11 ಲಕ್ಷದ 71 ಸಾವಿರ ರೂ ಇರಲಿದೆ.

ಅಗ್ನಿಪಥ್ ಯೋಜನೆಯು ರಕ್ಷಣಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ ಎಂದು ದೇಶದ ರಕ್ಷಣಾ ಸಚಿವರು ಹೇಳಿದ್ದಾರೆ. ಕೆಲವರು ಅಗ್ನಿಪಥ್ ವಿರುದ್ಧ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ ಅಗ್ನಿವೀರರಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ಅನೇಕ ರಾಜ್ಯ ಸರ್ಕಾರಗಳು ಅಗ್ನಿವೀರರಿಗೆ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದೆ ಎಂದರು.

ಅಗ್ನಿವೀರರಿಗೆ ಸರ್ಕಾರ ಅಗ್ಗದ ಸಾಲವನ್ನೂ ನೀಡಲಿದೆ, ಅಗ್ನಿವೀರರ ಭವಿಷ್ಯದ ಬಗ್ಗೆ ಎದ್ದಿರುವ ಪ್ರಶ್ನೆಗಳು ಆಧಾರರಹಿತವಾಗಿವೆ ಎಂದು ಹೇಳಿದರು. ಅಗ್ನಿವೀರರ ತರಬೇತಿ, ಮಿಲಿಟರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಇರುವುದಿಲ್ಲ. ಯುದ್ಧದ ಹೊಸ ಸವಾಲುಗಳಿಗೂ ನಾವು ಸಿದ್ಧರಿದ್ದೇವೆ. ಸೇನೆಯಂತೆ ತರಬೇತಿಯನ್ನು ಪಡೆಯಲಿದ್ದಾರೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ರರಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.

ಗೃಹ ಸಚಿವರ ಕಚೇರಿ ಟ್ವೀಟ್ ಮಾಡಿದ್ದು, “ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ.”

ಗೃಹ ವ್ಯವಹಾರಗಳ ಸಚಿವಾಲಯವು CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಗೃಹ ಸಚಿವಾಲಯದ ಕಚೇರಿಯು, ‘ಗೃಹ ವ್ಯವಹಾರಗಳ ಸಚಿವಾಲಯವು ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರರಿಗೆ ಮೂರು ವರ್ಷಗಳ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಸಲು ನಿರ್ಧರಿಸಿದೆ. ಜೊತೆಗೆ, ಮೊದಲ ಬ್ಯಾಚ್ ಅಗ್ನಿವೀರರಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ