AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

What India Thinks Today:ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು

What India Thinks Today: ಅಗ್ನಿಪಥ್ ಯೋಜನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?
Rajnath Singh
TV9 Web
| Edited By: |

Updated on: Jun 18, 2022 | 12:38 PM

Share

ಅಗ್ನಿಪಥ ಯೋಜನೆ ನೂತನ ಯೋಜನೆಯಾಗಿರುವುದರಿಂದ ಗೊಂದಲಗಳಿರುವುದು ಸಹಜ ಆದರೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಜಾಗತಿಕ ಸಮಾವೇಶದಲ್ಲಿ ಮಾತನಾಡಿರುವ ಅವರು, ಈ ಯೋಜನೆಯನ್ನು ಜಾರಿಗೊಳಿಸುವ ಮೊದಲು ನಾವು ಸಾಕಷ್ಟು ಚರ್ಚೆ ನಡೆಸಿದ್ದೇವೆ, ಒಂದೂವರೆ ವರ್ಷದಿಂದ ತಯಾರಿ ನಡೆದಿತ್ತು. ದೇಶದ ನಾಗರಿಕರು ದೇಶಕ್ಕಾಗಿ ಬದ್ಧತೆಯನ್ನು ಹೊಂದಿರಬೇಕೆಂದು ನಾವು ಬಯಸುತ್ತೇವೆ. ಇದು ನಾಲ್ಕು ವರ್ಷಗಳ ಸೇವೆಯಾಗಿದೆ. ನಾಲ್ಕು ವರ್ಷ ಮುಗಿದ ನಂತರ ಅವರ ಕೈಯಲ್ಲಿ 11 ಲಕ್ಷದ 71 ಸಾವಿರ ರೂ ಇರಲಿದೆ.

ಅಗ್ನಿಪಥ್ ಯೋಜನೆಯು ರಕ್ಷಣಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲಿದೆ ಎಂದು ದೇಶದ ರಕ್ಷಣಾ ಸಚಿವರು ಹೇಳಿದ್ದಾರೆ. ಕೆಲವರು ಅಗ್ನಿಪಥ್ ವಿರುದ್ಧ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ ಅಗ್ನಿವೀರರಿಗೆ ಹೊಸ ಉದ್ಯೋಗಾವಕಾಶಗಳು ಸಿಗಲಿವೆ. ಅನೇಕ ರಾಜ್ಯ ಸರ್ಕಾರಗಳು ಅಗ್ನಿವೀರರಿಗೆ ಉದ್ಯೋಗವನ್ನು ನೀಡುವುದಾಗಿ ಭರವಸೆ ನೀಡಿದೆ ಎಂದರು.

ಅಗ್ನಿವೀರರಿಗೆ ಸರ್ಕಾರ ಅಗ್ಗದ ಸಾಲವನ್ನೂ ನೀಡಲಿದೆ, ಅಗ್ನಿವೀರರ ಭವಿಷ್ಯದ ಬಗ್ಗೆ ಎದ್ದಿರುವ ಪ್ರಶ್ನೆಗಳು ಆಧಾರರಹಿತವಾಗಿವೆ ಎಂದು ಹೇಳಿದರು. ಅಗ್ನಿವೀರರ ತರಬೇತಿ, ಮಿಲಿಟರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಇರುವುದಿಲ್ಲ. ಯುದ್ಧದ ಹೊಸ ಸವಾಲುಗಳಿಗೂ ನಾವು ಸಿದ್ಧರಿದ್ದೇವೆ. ಸೇನೆಯಂತೆ ತರಬೇತಿಯನ್ನು ಪಡೆಯಲಿದ್ದಾರೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ರರಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.

ಗೃಹ ಸಚಿವರ ಕಚೇರಿ ಟ್ವೀಟ್ ಮಾಡಿದ್ದು, “ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಶೇಕಡಾ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ.”

ಗೃಹ ವ್ಯವಹಾರಗಳ ಸಚಿವಾಲಯವು CAPF ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಘೋಷಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಗೃಹ ಸಚಿವಾಲಯದ ಕಚೇರಿಯು, ‘ಗೃಹ ವ್ಯವಹಾರಗಳ ಸಚಿವಾಲಯವು ಸಿಎಪಿಎಫ್‌ಗಳು ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನೇಮಕಾತಿಗಾಗಿ ಅಗ್ನಿವೀರರಿಗೆ ಮೂರು ವರ್ಷಗಳ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಸಲು ನಿರ್ಧರಿಸಿದೆ. ಜೊತೆಗೆ, ಮೊದಲ ಬ್ಯಾಚ್ ಅಗ್ನಿವೀರರಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ