AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ceasefire: ಕದನ ವಿರಾಮ ಎಂದರೇನು? ಭಾರತ- ಪಾಕಿಸ್ತಾನದ ನಡುವೆ ಮುಂದೆ ಏನಾಗುತ್ತೆ?

ಮೂರ್ನಾಲ್ಕು ದಿನಗಳಿಂದ ಭಾರತ-ಪಾಕಿಸ್ತಾನದ ನಡುವೆ ಗಡಿಯಲ್ಲಿ ವೈಮಾನಿಕ ದಾಳಿ, ಗುಂಡಿನ ದಾಳಿ ನಡೆಯುತ್ತಿತ್ತು. ಎರಡೂ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಅಮೆರಿಕ ಮಧ್ಯಸ್ಥಿಕೆ ವಹಿಸಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಮನವೊಲಿಸಿದೆ. ಹಾಗಾದರೆ, ಕದನವಿರಾಮ ಅಥವಾ ಯುದ್ಧವಿರಾಮ ಎಂದರೇನು? ಈ ಒಪ್ಪಂದ ಮಾಡಿಕೊಂಡರೆ ಎರಡೂ ದೇಶಗಳ ನಡುವೆ ದಾಳಿ ನಡೆಯುವುದಿಲ್ಲವೇ? ಈ 2 ಶತ್ರು ರಾಷ್ಟ್ರಗಳ ನಡುವೆ ಮುಂದೆ ಏನಾಗುತ್ತದೆ? ಎಂಬಿತ್ಯಾದಿ ನಿಮ್ಮ ಅನುಮಾನಗಳಿಗೆ ಉತ್ತರ ಇಲ್ಲಿದೆ.

Ceasefire: ಕದನ ವಿರಾಮ ಎಂದರೇನು? ಭಾರತ- ಪಾಕಿಸ್ತಾನದ ನಡುವೆ ಮುಂದೆ ಏನಾಗುತ್ತೆ?
India Pakistan
Follow us
ಸುಷ್ಮಾ ಚಕ್ರೆ
|

Updated on: May 10, 2025 | 7:53 PM

ನವದೆಹಲಿ, ಮೇ 10: ಕಾಶ್ಮೀರದ ಪಹಲ್ಗಾಮ್​ನಲ್ಲಿ (Pahalgam Terror Attack) ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿತ್ತು. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಪಾಕಿಸ್ತಾನದೊಳಗೆ ನುಗ್ಗಿ 9 ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೆ, ಅದನ್ನು ವೈಯಕ್ತಿಕವಾಗಿ ಸ್ವೀಕರಿಸಿದ ಪಾಕಿಸ್ತಾನ ಭಾರತದ ಗಡಿಯಲ್ಲಿ ಅಮಾಯಕ ನಾಗರಿಕರ ಮೇಲೆ ಗುಂಡು ಹಾರಿಸಿ ಜೀವಗಳನ್ನು ಬಲಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಳೆದ 2 ದಿನಗಳಿಂದ ಹಗಲೂ ರಾತ್ರಿ ಭಾರತ ಮತ್ತು ಪಾಕಿಸ್ತಾನದ ನಡುವೆ ವೈಮಾನಿಕ ದಾಳಿ, ಶೆಲ್ ದಾಳಿ, ಗುಂಡಿನ ದಾಳಿ ನಡೆದಿತ್ತು. ಇದೀಗ ಇವೆರಡೂ ದೇಶಗಳ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಕದನ ವಿರಾಮಕ್ಕೆ ಒಪ್ಪಿಸಿದ್ದಾರೆ. ಹಾಗಾದರೆ, ಈ ಕದನ ವಿರಾಮ (Ceasefire) ಎಂದರೇನು? ಇಲ್ಲಿದೆ ಮಾಹಿತಿ.

ಕದನ ವಿರಾಮ ಎಂದರೆ ಹಿಂಸಾಚಾರವನ್ನು ನಿಲ್ಲಿಸುವುದು ಮತ್ತು ಶಾಂತಿಗೆ ಅವಕಾಶ ನೀಡುವುದು. ಇದು ಸಾಮಾನ್ಯವಾಗಿ ಸಂಘರ್ಷದಲ್ಲಿರುವ ದೇಶಗಳು ಅಥವಾ ಗುಂಪುಗಳ ನಡುವಿನ ಪರಸ್ಪರ ಒಪ್ಪಂದವಾಗಿದ್ದು, ನಿರ್ದಿಷ್ಟ ಪ್ರದೇಶದಲ್ಲಿ ನಿರ್ದಿಷ್ಟ ಅವಧಿಗೆ ಮಿಲಿಟರಿ ಕ್ರಮಗಳನ್ನು ವಿರಾಮಗೊಳಿಸುವುದು ಅಥವಾ ಕೊನೆಗೊಳಿಸುವುದಾಗಿದೆ. ಕೆಲವು ಸಂದರ್ಭಗಳಲ್ಲಿ, ಇದನ್ನು ಒಂದು ಕಡೆ ಮಾತ್ರ ಘೋಷಿಸಲಾಗುತ್ತದೆ. ಕದನ ವಿರಾಮವು ಶಾಂತಿ ಒಪ್ಪಂದವಲ್ಲ, ಆದರೆ ಅದು ಶಾಂತಿ ಸ್ಥಾಪನೆಯ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ. ಪರಿಸ್ಥಿತಿಯನ್ನು ಅವಲಂಬಿಸಿ ಇದು ಕೆಲವು ಗಂಟೆಗಳು, ದಿನಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಉಳಿಯಬಹುದು. ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ನಾಗರಿಕರನ್ನು ರಕ್ಷಿಸುವುದು ಮತ್ತು ಸಂವಾದಕ್ಕೆ ಬಾಗಿಲು ತೆರೆಯುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

ಇದನ್ನೂ ಓದಿ
Image
ಸೂಕ್ಷ್ಮ ಸಂದರ್ಭದಲ್ಲಿ ಏನೋನೋ ಮಾತನಾಡಿದ್ರೆ ಏನೇನು ಅವಾಂತರವಾಗುತ್ತೆ ನೋಡಿ
Image
ಭಾರತ-ಪಾಕ್​ ಉದ್ವಿಗ್ನತೆ ಶಮನಕ್ಕೆ ಜೈಶಂಕರ್ ಜತೆ ಮಾತುಕತೆ
Image
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ
Image
ಪಾಕಿಸ್ತಾನದ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದ ಭಾರತ

ಕದನ ವಿರಾಮವಾದರೆ ಯುದ್ಧ ನಡೆಯುವುದಿಲ್ಲವೇ?:

ಕದನ ವಿರಾಮವು ಸಾಮಾನ್ಯವಾಗಿ ತಾತ್ಕಾಲಿಕವಾಗಿರುತ್ತದೆ. ಒಂದುವೇಳೆ ಎರಡೂ ಕಡೆಯವರು ಯುದ್ಧವನ್ನು ಪುನರಾರಂಭಿಸಿದರೆ ಈ ಒಪ್ಪಂದವನ್ನು ಮುರಿಯಬಹುದು. ಆದರೆ, ದೀರ್ಘಕಾಲದ ಕದನ ವಿರಾಮವು ವಿಶ್ವಾಸವನ್ನು ಬೆಳೆಸಲು ಮತ್ತು ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲು ಸಹಾಯ ಮಾಡುತ್ತದೆ. ಇದು ಆಯಾ ದೇಶಗಳ ಮೇಲೆ ಅವಲಂಬಿತವಾಗಿರುತ್ತದೆ. ರಷ್ಯಾ ಮತ್ತು ಉಕ್ರೇನ್​ ನಡುವೆ ಅನೇಕ ಬಾರಿ ಕದನವಿರಾಮ ಘೋಷಣೆಯಾಗಿದ್ದರೂ ಅಲ್ಲಿ ಯುದ್ಧವೇನೂ ನಿಂತಿಲ್ಲ, ಶಾಂತಿ ಸ್ಥಾಪನೆಯೂ ಆಗಿಲ್ಲ. ಎರಡೂ ದೇಶಗಳು ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇವೆ. ಹೀಗಾಗಿ, ಈ ಕದನವಿರಾಮವನ್ನು ಎಲ್ಲಿಯವರೆಗೆ ಮುಂದುವರೆಸಬಹುದು ಎಂಬುದು ಭಾರತ ಮತ್ತು ಪಾಕಿಸ್ತಾನದ ಮುಂದಿನ ಹೆಜ್ಜೆಯ ಮೇಲೆ ಅವಲಂಬಿತವಾಗಿರುತ್ತದೆ.

ಕದನವಿರಾಮ ಘೋಷಿಸುವುದು ಏಕೆ?:

– ಘರ್ಷಣಾ ವಲಯಗಳಿಂದ ಗಾಯಗೊಂಡ ಅಥವಾ ಅನಾರೋಗ್ಯ ಪೀಡಿತ ಜನರನ್ನು ಸ್ಥಳಾಂತರಿಸಲು.

– ಕೈದಿಗಳನ್ನು ವಿನಿಮಯ ಮಾಡಿಕೊಳ್ಳುವುದು ಅಥವಾ ಮಾನವೀಯ ನೆರವು ನೀಡಲು.

– ಶಾಂತಿ ಮಾತುಕತೆಗಳನ್ನು ಪ್ರಾರಂಭಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಕದನ ವಿರಾಮವನ್ನು ಘೋಷಿಸಲಾಗುತ್ತದೆ.

ಕೆಲವೊಮ್ಮೆ ಮೂರನೇ ದೇಶ ಅಥವಾ ಅಂತಾರಾಷ್ಟ್ರೀಯ ಸಂಸ್ಥೆಯು ಎರಡೂ ಕಡೆಯವರು ಕದನವಿರಾಮ ಒಪ್ಪಂದಕ್ಕೆ ಬರಲು ಸಹಾಯ ಮಾಡುತ್ತದೆ. ಈ ಬಾರಿ ಆ ರೀತಿ ಅಮೆರಿಕ ದೇಶ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿದೆ. ಕದನ ವಿರಾಮ ಮುಂದುವರಿದರೆ, ಅದು ದೀರ್ಘಾವಧಿಯ ಶಾಂತಿಗೆ ಕಾರಣವಾಗಬಹುದು. ಭಾರತ ಮತ್ತು ಪಾಕಿಸ್ತಾನದ ವಿಷಯದಲ್ಲಿ, ಇಂದಿನ ಕದನ ವಿರಾಮವು ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಎರಡೂ ಕಡೆಯವರು ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಶಾಂತಿಗಾಗಿ ಕೆಲಸ ಮಾಡಲು ಅವಕಾಶವನ್ನು ನೀಡುತ್ತದೆ.

ಇದನ್ನೂ ಓದಿ: ಪಾಕಿಸ್ತಾನ ಶಾಂತಿಯ ಪರ; ಕದನ ವಿರಾಮದ ಬಗ್ಗೆ ಪಾಕ್ ವಿದೇಶಾಂಗ ಸಚಿವ ಪ್ರತಿಕ್ರಿಯೆ

ಭಾರತ-ಪಾಕಿಸ್ತಾನದ ಮುಂದಿನ ನಡೆ:

ಕದನ ವಿರಾಮದ ಸಮಯದಲ್ಲಿ, ಯುದ್ಧ ನಿರತ ದೇಶಗಳು ಮಿಲಿಟರಿಯೇತರ ಕ್ರಮಗಳನ್ನು ಮುಂದುವರಿಸಬಹುದು. ಉದಾಹರಣೆಗೆ ಭಾರತೀಯ ನೆಲೆಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಹೇಳಿಕೊಳ್ಳುವ ನಕಲಿ ವೀಡಿಯೊಗಳೊಂದಿಗೆ ಪಾಕಿಸ್ತಾನದ ವಿರುದ್ಧ ತಪ್ಪು ಮಾಹಿತಿ ಅಭಿಯಾನ. ಇದಲ್ಲದೆ, ಕದನ ವಿರಾಮ ಒಪ್ಪಂದವು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಅಂತಹ ಪ್ರಚಾರವನ್ನು ನಿಗ್ರಹಿಸಲು ಷರತ್ತುಗಳನ್ನು ಒಳಗೊಂಡಿರಬಹುದು. ಭಾರತ ಮತ್ತು ಪಾಕಿಸ್ತಾನದ ನಡುವೆಯೂ ಮೇ 12ರಂದು ಮಾತುಕತೆ ನಡೆಯಲಿದೆ. ಈ ಮಾತುಕತೆಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಮತ್ತೆ ಹೆಚ್ಚಾದರೂ ಅಚ್ಚರಿಯೇನಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು