AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಧ್ವಜ ಸಂಹಿತೆ ಏನು ಹೇಳುತ್ತದೆ? ಕೇಂದ್ರ ಸರ್ಕಾರ ಮಾಡಿದ ತಿದ್ದುಪಡಿಗಳೇನು?

ಯಂತ್ರ-ನಿರ್ಮಿತ ಮತ್ತು ಪಾಲಿಸ್ಟರ್ ಧ್ವಜಗಳ ಬಳಕೆಯನ್ನು ಅನುಮತಿಸಲು ಡಿಸೆಂಬರ್ 2021 ರಲ್ಲಿ ಮಾಡಿದ ತಿದ್ದುಪಡಿಯು ಕಾಂಗ್ರೆಸ್‌ನಿಂದ ಟೀಕೆಗೆ ಒಳಗಾಯಿತು. ಪಾಲಿಸ್ಟರ್ ಧ್ವಜಗಳ ಆಮದನ್ನು ಅನುಮತಿಸುವ ಮೂಲಕ ಕೇಂದ್ರವು ಚೀನಾ...

ಭಾರತದ ಧ್ವಜ ಸಂಹಿತೆ ಏನು ಹೇಳುತ್ತದೆ? ಕೇಂದ್ರ ಸರ್ಕಾರ ಮಾಡಿದ ತಿದ್ದುಪಡಿಗಳೇನು?
ತ್ರಿವರ್ಣ ಧ್ವಜ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 03, 2022 | 6:34 PM

Share

ಭಾರತವು ಆಗಸ್ಟ್ 15 ರಂದು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು(75th Independence Day) ಪ್ರಾರಂಭಿಸಲು ಸಿದ್ಧವಾಗುತ್ತಿರುವಾಗ, 2002 ರ ಭಾರತದ ಧ್ವಜ ಸಂಹಿತೆಗೆ (Flag code of India) ಕೇಂದ್ರವು ತಂದ ತಿದ್ದುಪಡಿಗಳ ಬಗ್ಗೆ ವಿವಾದವು ಹುಟ್ಟಿಕೊಂಡಿದೆ. ಜನವರಿ 26, 2002 ರಂದು ಜಾರಿಗೆ ಬಂದಿರುವ ಧ್ವಜ ಸಂಹಿತೆ ಭಾರತದ ರಾಷ್ಟ್ರಧ್ವಜದ ಬಳಕೆ, ಪ್ರದರ್ಶನ ಮತ್ತು ಆರೋಹಣಕ್ಕಾಗಿ ಎಲ್ಲಾ ಕಾನೂನುಗಳು, ಸಂಪ್ರದಾಯಗಳು, ಅಭ್ಯಾಸಗಳು ಮತ್ತು ಸೂಚನೆಗಳನ್ನು ನೀಡುತ್ತದೆ.

ಭಾರತದ ಧ್ವಜ ಸಂಹಿತೆ ಎಂದರೇನು?

ಮೂರು ಭಾಗಗಳಾಗಿ ವಿಂಗಡಿಸಿರುವ ಭಾರತದ ಧ್ವಜ ಸಂಹಿತೆ 2002 ರಾಷ್ಟ್ರೀಯ ಧ್ವಜದ ಬಗ್ಗೆ ಸಾಮಾನ್ಯ ವಿವರಣೆಯನ್ನು ಒಳಗೊಂಡಿದೆ. ಸಾರ್ವಜನಿಕರು, ಖಾಸಗಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳ ಸದಸ್ಯರು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದನ್ನುಹೇಗೆ ಪ್ರದರ್ಶಿಸಬೇಕು ಎಂಬುದನ್ನು ಇದು ಹೇಳುತ್ತದೆ. ತ್ರಿವರ್ಣ ಧ್ವಜದ ಘನತೆ ಮತ್ತು ಗೌರವಕ್ಕೆ ಅನುಗುಣವಾಗಿ ಎಲ್ಲಾ ದಿನಗಳು ಮತ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಲು ಸಾರ್ವಜನಿಕ, ಖಾಸಗಿ ಸಂಸ್ಥೆ ಅಥವಾ ಶಿಕ್ಷಣ ಸಂಸ್ಥೆಯ ಸದಸ್ಯರಿಗೆ ಅವಕಾಶವಿದೆ ಎಂದು ಭಾರತದ ಧ್ವಜ ಸಂಹಿತೆ ಹೇಳುತ್ತದೆ.

ಲಾಂಛನ ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ 1950 ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯಿದೆ 1971 ರಲ್ಲಿ ಒದಗಿಸಲಾದ ಮಟ್ಟಿಗೆ ಹೊರತುಪಡಿಸಿ ಸಾರ್ವಜನಿಕರು, ಖಾಸಗಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿ ಸದಸ್ಯರು ರಾಷ್ಟ್ರಧ್ವಜದ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಭಾರತದ ಧ್ವಜ ಸಂಹಿತೆ 2002ಯು ರಾಷ್ಟ್ರೀಯ ಧ್ವಜದ ಬಳಕೆ, ಪ್ರದರ್ಶನ ಮತ್ತು ಹಾರಾಟಕ್ಕಾಗಿ ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನೂ ಹೇಳಿದೆ.

ಕೇಂದ್ರ ಯಾವ ತಿದ್ದುಪಡಿಗಳನ್ನು ತಂದಿದೆ?

ಡಿಸೆಂಬರ್ 30 ರಂದು ಕೇಂದ್ರ ಸರ್ಕಾರ ಭಾರತದ ಧ್ವಜ ಸಂಹಿತೆ, 2002 ಅನ್ನು ತಿದ್ದುಪಡಿ ಮಾಡಿತು . ಇದು ಯಂತ್ರ-ನಿರ್ಮಿತ ಮತ್ತು ಪಾಲಿಸ್ಟರ್ ರಾಷ್ಟ್ರೀಯ ಧ್ವಜಗಳ ತಯಾರಿಕೆ ಮತ್ತು ಬಳಕೆಯನ್ನು ಅನುಮತಿಸುತ್ತದೆ. ಸಂಹಿತೆಯ ಅಡಿಯಲ್ಲಿ ಇವುಗಳಿಗೆ ಈ ಹಿಂದೆ ಅವಕಾಶವಿರಲಿಲ್ಲ. ತಿದ್ದುಪಡಿ ಮಾಡಲಾದ ಧ್ವಜ ಸಂಹಿತೆಯ ಪ್ರಕಾರ, ಕೈಯಿಂದ ನೂಲುವ, ಕೈಯಿಂದ ನೇಯ್ದ ಅಥವಾ ಯಂತ್ರದಿಂದ ಮಾಡಿದ ಹತ್ತಿ, ಪಾಲಿಯೆಸ್ಟರ್, ಉಣ್ಣೆ, ರೇಷ್ಮೆ, ಖಾದಿ ಬಂಟಿಂಗ್‌ನಿಂದ ಮಾಡಿದ ರಾಷ್ಟ್ರಧ್ವಜಗಳನ್ನು ಸಹ ಬಳಸಬಹುದು.

ಜುಲೈ 20, 2022 ರಂದು ತಂದ ಮತ್ತೊಂದು ತಿದ್ದುಪಡಿಯಲ್ಲಿ ರಾಷ್ಟ್ರೀಯ ಧ್ವಜವನ್ನು ತೆರೆದ ಅಥವಾ ಸಾರ್ವಜನಿಕ ಸದಸ್ಯರ ಮನೆಯಲ್ಲಿ ಅದನ್ನು ಹಗಲು, ರಾತ್ರಿ ಹಾರಿಸಲು ಕೇಂದ್ರವು ಅನುಮತಿಸಿದೆ. ಹಿಂದಿನ ನಿಯಮಗಳ ಪ್ರಕಾರ, ತ್ರಿವರ್ಣ ಧ್ವಜವನ್ನು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಮಾತ್ರ ಹಾರಿಸಬಹುದಾಗಿತ್ತು.

ಕೇಂದ್ರ ಸರ್ಕಾರ ಭಾರತದ ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡಿದ್ದೇಕೆ?

‘ಹರ್ ಘರ್ ತಿರಂಗ’ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಲಾಗಿದೆ. ಇದರ ಅಡಿಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಸರ್ಕಾರವು ಜನರನ್ನು ಪ್ರೋತ್ಸಾಹಿಸುತ್ತಿದೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಈ ಅಭಿಯಾನದ ಮೂಲಕ ಆಗಸ್ಟ್ 15 ರೊಳಗೆ ಭಾರತದಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳನ್ನು ತಲುಪಲು ಯೋಜಿಸಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡುವುದರಿಂದ ರಾಷ್ಟ್ರೀಯ ಧ್ವಜವು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುತ್ತದೆ ಮತ್ತು ಕೈಗೆಟುಕುವಂತೆ ಮಾಡುತ್ತದೆ ಎಂಬುದು ಸರ್ಕಾರದ ಅನಿಸಿಕೆ.

ಭಾರತದ ಧ್ವಜ ಸಂಹಿತೆಯ ತಿದ್ದುಪಡಿಗಳ ಬಗ್ಗೆ ವಿವಾದ ಏಕೆ?

ಯಂತ್ರ-ನಿರ್ಮಿತ ಮತ್ತು ಪಾಲಿಸ್ಟರ್ ಧ್ವಜಗಳ ಬಳಕೆಯನ್ನು ಅನುಮತಿಸಲು ಡಿಸೆಂಬರ್ 2021 ರಲ್ಲಿ ಮಾಡಿದ ತಿದ್ದುಪಡಿಯು ಕಾಂಗ್ರೆಸ್‌ನಿಂದ ಟೀಕೆಗೆ ಒಳಗಾಯಿತು. ಪಾಲಿಸ್ಟರ್ ಧ್ವಜಗಳ ಆಮದನ್ನು ಅನುಮತಿಸುವ ಮೂಲಕ ಕೇಂದ್ರವು ಚೀನಾ ನಿರ್ಮಿತ ಭಾರತೀಯ ಧ್ವಜಗಳ ಒಳಹರಿವನ್ನು ಅನುಮತಿಸಿದೆ ಎಂದು ಹೇಳಿದೆ. ಪ್ರತಿಪಕ್ಷಗಳಲ್ಲದೆ ಕೆಲವು ಖಾದಿ ನೇಕಾರರು ಮತ್ತು ಕಾರ್ಯಕರ್ತರು ಕೇಂದ್ರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಉದಾಹರಣೆಗೆ, ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಕೆಕೆಜಿಎಸ್ಎಸ್) ತಿದ್ದುಪಡಿಯ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಅದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

ಪ್ರತಿಪಕ್ಷಗಳಲ್ಲದೆ ಕೆಲವು ಖಾದಿ ನೇಕಾರರು ಮತ್ತು ಕಾರ್ಯಕರ್ತರು ಕೇಂದ್ರ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಉದಾಹರಣೆಗೆ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ (ಕೆಕೆಜಿಎಸ್ಎಸ್), ತಿದ್ದುಪಡಿಯ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ ಮತ್ತು ಅದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ.

Published On - 6:30 pm, Wed, 3 August 22

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ