AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್​ ವಿರೋಧಿ ಮಸೂದೆ ಮಂಡಿಸಿದ ತಮಿಳುನಾಡು ಸರ್ಕಾರ; ಗೃಹ ಸಚಿವಾಲಯಕ್ಕೆ ಕಳಿಸಿಕೊಟ್ಟ ರಾಜ್ಯಪಾಲರು

ನೀಟ್​ ವಿರೋಧಿ ಮಸೂದೆಯನ್ನು ಮೊದಲಬಾರಿ ತಮಿಳುನಾಡು ಸರ್ಕಾರ  ರಾಜ್ಯಪಾಲರಿಗೆ ಕಳಿಸಿದಾಗ, ತಮಿಳುನಾಡು ರಾಜ್ಯಪಾಲ ಆರ್​.ಎನ್​.ರವಿ ಅದನ್ನು ವಾಪಸ್ ಕಳಿಸಿದ್ದರು.  ಆದರೆ ಸರ್ಕಾರ ಮತ್ತೊಮ್ಮೆ ಜಾರಿ ಮಾಡಿದೆ.

ನೀಟ್​ ವಿರೋಧಿ ಮಸೂದೆ ಮಂಡಿಸಿದ ತಮಿಳುನಾಡು ಸರ್ಕಾರ; ಗೃಹ ಸಚಿವಾಲಯಕ್ಕೆ ಕಳಿಸಿಕೊಟ್ಟ ರಾಜ್ಯಪಾಲರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:May 05, 2022 | 5:07 PM

Share

ತಮಿಳುನಾಡು ಸರ್ಕಾರ  ತಮ್ಮ ರಾಜ್ಯದ ವಿದ್ಯಾರ್ಥಿಗಳಿಗಾಗಿ ಆ್ಯಂಟಿ ನೀಟ್​ ಬಿಲ್​​ (ನೀಟ್​ ವಿರೋಧಿ ಮಸೂದೆ)ನ್ನು ಪರಿಚಯಿಸಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾದರೆ ಕಡ್ಡಾಯವಾಗಿ ಬರೆಯಬೇಕಾದ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆ ನೀಟ್​​ನಿಂದ (ರಾಷ್ಟ್ರೀಯ ಪ್ರವೇಶ-ಅರ್ಹತಾ ಪರೀಕ್ಷೆ-NEET) ವಿನಾಯಿತಿ ನೀಡುವ ಮಸೂದೆ ಇದಾಗಿದೆ. ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗಾಗಿ ನೀಟ್​ ಬದಲು, ಬೇರೆ ಯಾವುದಾದರೂ  ಮಾರ್ಗವನ್ನು ಕಂಡುಕೊಳ್ಳಲು ತಮಿಳುನಾಡು ಸರ್ಕಾರ ಮುಂದಾಗಿದೆ. ಹಾಗೇ, ವೈದ್ಯಕೀಯ ಸೀಟು ಆಕಾಂಕ್ಷಿ ವಿದ್ಯಾರ್ಥಿಗಳನ್ನು ಅವರ 12ನೇ ತರಗತಿ ಅಂಕದ ಆಧಾರದ ಮೇಲೆ ಕೂಡ ಪರಿಗಣಿಸಬಹುದು ಎಂಬ ಪ್ರಸ್ತಾಪವನ್ನೂ ಇಟ್ಟಿದೆ. ತಮ್ಮ ಈ ಕ್ರಮದಿಂದ ಸಾಮಾಜಿಕ ನ್ಯಾಯ ಸಲ್ಲಿಸದಂತಾಗುತ್ತದೆ ಮತ್ತು ಎಲ್ಲ ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೂ ಸಹಾಯವಾಗಲಿದೆ ಎಂದು ಹೇಳಿದೆ. 

ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನೀಟ್ ಸರಿಯಾದ ಕ್ರಮವಲ್ಲ. ಕೋಚಿಂಗ್ ಪಡೆಯಲು ಸಮರ್ಥವಾಗಿರುವ ವಿದ್ಯಾರ್ಥಿಗಳು ಅಂದರೆ ಹಣಕಾಸಿನ ವಿಚಾರದಲ್ಲಿ ಸದೃಢರಾಗಿರುವ ಕುಟುಂಬಗಳ ವಿದ್ಯಾರ್ಥಿಗಳು ಮಾತ್ರ ಈ ನೀಟ್ ಪರೀಕ್ಷೆ ಬರೆಯಬಹುದು.  ಪಠ್ಯಕ್ರಮವು ರಾಜ್ಯದಿಂದ ರಾಜ್ಯಕ್ಕೆ ಬೇರೆ ಇರುತ್ತದೆ. ಆಯಾ ರಾಜ್ಯಗಳ ಪಠ್ಯಕ್ರಮಗಳ ಅಭ್ಯಾಸ ಮಾಡಿದವರು, ಒಮ್ಮೆಲೆ ರಾಷ್ಟ್ರೀಯ ಮಟ್ಟದ ಪಠ್ಯಕ್ರಮ ಅಭ್ಯಸಿಸಿ ಪರೀಕ್ಷೆ ಬರೆಯಯುವುದು ಸರಿಯಾದ ಕ್ರಮವಲ್ಲ. ಇದು ವಿದ್ಯಾರ್ಥಿಗಳಲ್ಲಿ ಒತ್ತಡಕ್ಕೆ ಕಾರಣವಾಗುತ್ತದೆ ಎಂದೂ ತಮಿಳುನಾಡು ಸರ್ಕಾರ ಹೇಳಿದೆ.

ಈ ನೀಟ್​ ಬಗ್ಗೆ ರಾಜ್ಯಾದ್ಯಂತ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಎ.ಕೆ.ರಾಜನ್​ ಸಮಿತಿಯನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈ ಸಮಿತಿ ‘ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶಾತಿ ಮೇಲೆ ನೀಟ್​ ಪರಿಣಾಮ’ ಎಂಬ ತಲೆಬರಹವುಳ್ಳ ವರದಿಯನ್ನು ಸಲ್ಲಿಸಿದೆ. ಹಾಗೇ, ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶಕ್ಕೆ ನೀಟ್​ ಸೂಕ್ತವಾದ ಮಾರ್ಗವಲ್ಲ ಎಂಬ ರಾಜ್ಯ ಸರ್ಕಾರದ ನಿಲುವನ್ನೇ ಈ ಸಮಿತಿಯೂ ಪ್ರತಿಪಾದಿಸಿದೆ.  ಒಟ್ಟು 165 ಪೇಜ್​ಗಳ ವರದಿ ಸಲ್ಲಿಸಿರುವ ಸಮಿತಿ, ನೀಟ್​ ಪರೀಕ್ಷೆ ಬರೆದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡ ವಿದ್ಯಾರ್ಥಿಗಳಲ್ಲಿ ಕೆಲವರು ಮಾತ್ರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ನೀಟ್ ಪರೀಕ್ಷೆ ಪದ್ಧತಿ ಬರುವುದಕ್ಕೂ ಮೊದಲು ತಮಿಳುನಾಡಿನಲ್ಲಿ ಈ ವಿಭಾಗದ ಸರಾಸರಿ ಶೇ.61.45ರಷ್ಟು ವಿದ್ಯಾರ್ಥಿಗಳು ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುತ್ತಿದ್ದರು. ಆದರೆ ನೀಟ್​ ಪರೀಕ್ಷೆ ಶುರುವಾದ ಮೇಲೆ ಆ ಪ್ರಮಾಣ ಇಳಿಕೆಯಾಗಿದೆ. 2020-21ರಲ್ಲಿ ಗ್ರಾಮೀಣ ಪ್ರದೇಶದ ಶೇ.49.91 ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ ಎಂದು ವಿವರಿಸಲಾಗಿದೆ.  ನೀಟ್​ ಬರೆದು ಪ್ರವೇಶ ಗಿಟ್ಟಿಸಿಕೊಂಡ ಅದೆಷ್ಟೋ ವಿದ್ಯಾರ್ಥಿಗಳು, 12ನೇ ತರಗತಿ ಅಂಕದ ಆಧಾರದ ಮೇಲೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಿಂತಲೂ ಅತ್ಯಂತ ಕಳಪೆ ಸಾಧನೆ ಮಾಡಿದ್ದು ನಮ್ಮ ಸಮೀಕ್ಷೆಯಲ್ಲಿ ಗೊತ್ತಾಗಿದೆ ಎಂದೂ ಸಮಿತಿ ತಿಳಿಸಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿದ ರಾಜ್ಯಪಾಲ

ನೀಟ್​ ವಿರೋಧಿ ಮಸೂದೆಯನ್ನು ಮೊದಲಬಾರಿ ತಮಿಳುನಾಡು ಸರ್ಕಾರ  ರಾಜ್ಯಪಾಲರಿಗೆ ಕಳಿಸಿದಾಗ, ತಮಿಳುನಾಡು ರಾಜ್ಯಪಾಲ ಆರ್​.ಎನ್​.ರವಿ ಅದನ್ನು ವಾಪಸ್ ಕಳಿಸಿದ್ದರು.  ಆದರೆ ಸರ್ಕಾರ ಮತ್ತೊಮ್ಮೆ ಜಾರಿ ಮಾಡಿದೆ. ಹೀಗಾಗಿ ಅದನ್ನೀಗ ರಾಜ್ಯಪಾಲರು ಕೇಂದ್ರ ಗೃಹಸಚಿವಾಲಯಕ್ಕೆ ಕಳಿಸಿಕೊಟ್ಟಿದ್ದಾರೆ. ಅಲ್ಲಿಂದ ಈ ಮಸೂದೆ ರಾಷ್ಟ್ರಪತಿಯವರ ಬಳಿ ಹೋಗಲಿದೆ. ಈ ಮಸೂದಗೆ ಖಂಡಿತ ತಿರಸ್ಕೃತಗೊಳ್ಳುತ್ತದೆ ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ; ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

Published On - 4:50 pm, Thu, 5 May 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್