ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತೆ ? ಸುಪ್ರೀಂಕೋರ್ಟ್​ ಪ್ರಶ್ನೆ

Bihar Caste Survey: ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತದೆ ಎಂದು ಸುಪ್ರೀಂಕೋರ್ಟ್​ ಪ್ರಶ್ನೆ ಮಾಡಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ, ಯೂತ್ ಫಾರ್ ಈಕ್ವಾಲಿಟಿ ಎಂಬ ಎನ್‌ಜಿಒ ಪರವಾಗಿ ಹಾಜರಾದ ವಕೀಲ ಸಿಎಸ್ ವೈದ್ಯನಾಥನ್ ಅವರನ್ನು ಪ್ರಶ್ನೆ ಮಾಡಿತು.

ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತೆ ? ಸುಪ್ರೀಂಕೋರ್ಟ್​ ಪ್ರಶ್ನೆ
ಸುಪ್ರೀಂಕೋರ್ಟ್​
Follow us
|

Updated on: Aug 19, 2023 | 10:20 AM

ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತದೆ ಎಂದು ಸುಪ್ರೀಂಕೋರ್ಟ್​ ಪ್ರಶ್ನೆ ಮಾಡಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ, ಯೂತ್ ಫಾರ್ ಈಕ್ವಾಲಿಟಿ ಎಂಬ ಎನ್‌ಜಿಒ ಪರವಾಗಿ ಹಾಜರಾದ ವಕೀಲ ಸಿಎಸ್ ವೈದ್ಯನಾಥನ್ ಅವರನ್ನು ಪ್ರಶ್ನೆ ಮಾಡಿತು. ನಿಮ್ಮ ಪ್ರಕಾರ (ಸಮೀಕ್ಷೆಗಾಗಿ ಸಿದ್ಧಪಡಿಸಲಾದ ಪ್ರಶ್ನಾವಳಿಯಲ್ಲಿ) ಯಾವ ಪ್ರಶ್ನೆಗಳು ಸಂವಿಧಾನದ 21 ನೇ ವಿಧಿಗೆ ವಿರುದ್ಧವಾಗಿವೆ ಎಂದು ಕೇಳಿದ್ದು, ಇದೀಗ ಈ ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಮಾತನಾಡಿ, ಸಮೀಕ್ಷೆಯನ್ನು ಪ್ರಾರಂಭಿಸಲು ರಾಜ್ಯ ವಿಧಾನಸಭೆಯಿಂದ ಯಾವುದೇ ಕಾನೂನು ಜಾರಿಗೆ ಬಂದಿಲ್ಲ. ರಾಜ್ಯ ಸರ್ಕಾರದ ಕಾರ್ಯಕಾರಿ ಅಧಿಸೂಚನೆಯ ಆಧಾರದ ಮೇಲೆ ಈ ಪ್ರಕ್ರಿಯೆಯು ಪ್ರಾರಂಭವಾಯಿತು. ಹೀಗಾಗಿ ಗೌಪ್ಯತೆಯ ಉಲ್ಲಂಘನೆಯಾಗಿದೆ ಎಂದರು.

ಇದಕ್ಕೂ ಮುನ್ನ ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು ಮತ್ತು ಇದೇ ರೀತಿಯ ಎಲ್ಲಾ ವಿಶೇಷ ರಜೆ ಅರ್ಜಿಗಳನ್ನು ಆಗಸ್ಟ್ 18 ರಂದು ಮತ್ತೆ ಪಟ್ಟಿ ಮಾಡುವಂತೆ ಸೂಚಿಸಿತ್ತು.

ಮತ್ತಷ್ಟು ಓದಿ: ಜಾತಿವಾರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ: ಸಿಎಂ ಸಿದ್ಧರಾಮಯ್ಯ ಭರವಸೆ

ಜಾತಿ ಸಮೀಕ್ಷೆ ಸಹಾಯದಿಂದ ಸಮಗ್ರ ಸಾಮಾಜಿಕ, ಆರ್ಥಿಕ ದತ್ತಾಂಶವನ್ನು ಸಂಗ್ರಹಿಸಬಹುದು ಎಂಬ ಉದ್ದೇಶದಿಂದ ಬಿಹಾರ ಸರ್ಕಾರವು ಜಾತಿ ಗಣತಿ ಶುರು ಮಾಡಿದೆ, ಜಾತಿ ಹಾಗೂ ಸಮುದಾಯಗಳಿಗೆ ಅನುಗುಣವಾಗಿ ನೀತಿಗಳನ್ನು ರೂಪಿಸಲು ಅನುಕೂಲವಾಗುತ್ತದೆ. ಆದರೆ, ವಿಶೇಷವಾಗಿ ಒಬಿಸಿಗಳು ಮತ್ತು ಇತರ ಜಾತಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಿಲ್ಲ. ಈ ಕಾರಣದಿಂದಾಗಿ, ಅವರಿಗೆ ನಿರ್ದಿಷ್ಟ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸುವುದು ಕಷ್ಟಕರವಾಗಿದೆ. ಜಾತಿ ಸಮೀಕ್ಷೆಯು ವಿವಿಧ ಜಾತಿಗಳ ಸಮಾನ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂಬ ವಾದವೂ ಇದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ