ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತೆ ? ಸುಪ್ರೀಂಕೋರ್ಟ್​ ಪ್ರಶ್ನೆ

Bihar Caste Survey: ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತದೆ ಎಂದು ಸುಪ್ರೀಂಕೋರ್ಟ್​ ಪ್ರಶ್ನೆ ಮಾಡಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ, ಯೂತ್ ಫಾರ್ ಈಕ್ವಾಲಿಟಿ ಎಂಬ ಎನ್‌ಜಿಒ ಪರವಾಗಿ ಹಾಜರಾದ ವಕೀಲ ಸಿಎಸ್ ವೈದ್ಯನಾಥನ್ ಅವರನ್ನು ಪ್ರಶ್ನೆ ಮಾಡಿತು.

ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತೆ ? ಸುಪ್ರೀಂಕೋರ್ಟ್​ ಪ್ರಶ್ನೆ
ಸುಪ್ರೀಂಕೋರ್ಟ್​

Updated on: Aug 19, 2023 | 10:20 AM

ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತದೆ ಎಂದು ಸುಪ್ರೀಂಕೋರ್ಟ್​ ಪ್ರಶ್ನೆ ಮಾಡಿದೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ, ಯೂತ್ ಫಾರ್ ಈಕ್ವಾಲಿಟಿ ಎಂಬ ಎನ್‌ಜಿಒ ಪರವಾಗಿ ಹಾಜರಾದ ವಕೀಲ ಸಿಎಸ್ ವೈದ್ಯನಾಥನ್ ಅವರನ್ನು ಪ್ರಶ್ನೆ ಮಾಡಿತು. ನಿಮ್ಮ ಪ್ರಕಾರ (ಸಮೀಕ್ಷೆಗಾಗಿ ಸಿದ್ಧಪಡಿಸಲಾದ ಪ್ರಶ್ನಾವಳಿಯಲ್ಲಿ) ಯಾವ ಪ್ರಶ್ನೆಗಳು ಸಂವಿಧಾನದ 21 ನೇ ವಿಧಿಗೆ ವಿರುದ್ಧವಾಗಿವೆ ಎಂದು ಕೇಳಿದ್ದು, ಇದೀಗ ಈ ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಮಾತನಾಡಿ, ಸಮೀಕ್ಷೆಯನ್ನು ಪ್ರಾರಂಭಿಸಲು ರಾಜ್ಯ ವಿಧಾನಸಭೆಯಿಂದ ಯಾವುದೇ ಕಾನೂನು ಜಾರಿಗೆ ಬಂದಿಲ್ಲ. ರಾಜ್ಯ ಸರ್ಕಾರದ ಕಾರ್ಯಕಾರಿ ಅಧಿಸೂಚನೆಯ ಆಧಾರದ ಮೇಲೆ ಈ ಪ್ರಕ್ರಿಯೆಯು ಪ್ರಾರಂಭವಾಯಿತು. ಹೀಗಾಗಿ ಗೌಪ್ಯತೆಯ ಉಲ್ಲಂಘನೆಯಾಗಿದೆ ಎಂದರು.

ಇದಕ್ಕೂ ಮುನ್ನ ಆಗಸ್ಟ್ 14 ರಂದು ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು ಮತ್ತು ಇದೇ ರೀತಿಯ ಎಲ್ಲಾ ವಿಶೇಷ ರಜೆ ಅರ್ಜಿಗಳನ್ನು ಆಗಸ್ಟ್ 18 ರಂದು ಮತ್ತೆ ಪಟ್ಟಿ ಮಾಡುವಂತೆ ಸೂಚಿಸಿತ್ತು.

ಮತ್ತಷ್ಟು ಓದಿ: ಜಾತಿವಾರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಆಧರಿಸಿ ವಿವಿಧ ಸಮುದಾಯಗಳಿಗೆ ಅವಕಾಶ: ಸಿಎಂ ಸಿದ್ಧರಾಮಯ್ಯ ಭರವಸೆ

ಜಾತಿ ಸಮೀಕ್ಷೆ ಸಹಾಯದಿಂದ ಸಮಗ್ರ ಸಾಮಾಜಿಕ, ಆರ್ಥಿಕ ದತ್ತಾಂಶವನ್ನು ಸಂಗ್ರಹಿಸಬಹುದು ಎಂಬ ಉದ್ದೇಶದಿಂದ ಬಿಹಾರ ಸರ್ಕಾರವು ಜಾತಿ ಗಣತಿ ಶುರು ಮಾಡಿದೆ, ಜಾತಿ ಹಾಗೂ ಸಮುದಾಯಗಳಿಗೆ ಅನುಗುಣವಾಗಿ ನೀತಿಗಳನ್ನು ರೂಪಿಸಲು ಅನುಕೂಲವಾಗುತ್ತದೆ. ಆದರೆ, ವಿಶೇಷವಾಗಿ ಒಬಿಸಿಗಳು ಮತ್ತು ಇತರ ಜಾತಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಿಲ್ಲ. ಈ ಕಾರಣದಿಂದಾಗಿ, ಅವರಿಗೆ ನಿರ್ದಿಷ್ಟ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸುವುದು ಕಷ್ಟಕರವಾಗಿದೆ. ಜಾತಿ ಸಮೀಕ್ಷೆಯು ವಿವಿಧ ಜಾತಿಗಳ ಸಮಾನ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂಬ ವಾದವೂ ಇದೆ.

 

Follow Us