AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ

ಕೇಂದ್ರ ಸರ್ಕಾರ 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಜನರ ಅಭಿಪ್ರಾಯ ಏನು? ಎಂಬುದನ್ನು ತಿಳಿದುಕೊಳ್ಳಲು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನ್​​ ಮ್ಯಾನ್​​​​ ಸಮೀಕ್ಷೆಯನ್ನು ಆರಂಭಿಸಿದೆ. ಜನರಲ್ಲಿ ನಮ್ಮ ಸರ್ಕಾರದ ಬಗ್ಗೆ ಯಾವ ಅಭಿಪ್ರಾಯವಿದೆ. ಹಾಗೂ ಸಂಸದರು, ಸಚಿವರ ಬಗ್ಗೆ ಇರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿದುಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ.

10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 6:04 PM

Share

ದೆಹಲಿ, ಜ.1: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ 10 ವರ್ಷದ ಆಡಳಿತ ಬಗ್ಗೆ ಹಾಗೂ ಭಾರತದ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸದ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ‘ನಮೋ’ ಅಪ್ಲಿಕೇಶನ್ ಮೂಲಕ ಜನ್​​ ಮ್ಯಾನ್​​​​​​ ಸಮೀಕ್ಷೆ (Jan Man Survey) ಅಭಿಮಾನದ ಮೂಲಕ ತಿಳಿಸಬಹುದು. ಪ್ರಧಾನಿ ಮೋದಿ ಅವರು 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಹಾಗೂ ಸಂಸದರು ತಮ್ಮ ಕ್ಷೇತ್ರದಲ್ಲಿ ಮಾಡಿದ ಕೆಲಸದ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ಈ ಅಭಿಯಾನದ ಮೂಲಕ ತಿಳಿಸಬಹುದು.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ, ಬಿಜೆಪಿ ಸರ್ಕಾರ ಈ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ತಮ್ಮ ಸರ್ಕಾರದ ಮತ್ತು ಸಂಸದರು, ಸಚಿವರ ಕಾರ್ಯಕ್ಷಮತೆಯ ಬಗ್ಗೆ ಜನರಲ್ಲಿರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿಯುತ್ತಿದ್ದಾರೆ. ಇನ್ನು ಈ ಅಭಿಮಾನದ ಬಗ್ಗೆ ಪ್ರಧಾನಿ ಮೋದಿ ಅವರೇ ತಮ್ಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು? NaMo ಅಪ್ಲಿಕೇಶನ್‌ನಲ್ಲಿ ಜನ್ ಮ್ಯಾನ್ ಸಮೀಕ್ಷೆಯ ಮೂಲಕ ನಿಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮೋದಿ ಅವರು ಲಿಂಕ್​​ನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಿರಿ: ಹೇಗೆ ನೋಡಿ

ಮೋದಿ ಎಕ್ಸ್​​​ ಪೋಸ್ಟ್​​​ ಇಲ್ಲಿದೆ

ಜನ್ ಮ್ಯಾನ್ ಸಮೀಕ್ಷೆ’ಯು ಆಡಳಿತ ಮತ್ತು ನಾಯಕತ್ವದ ವಿವಿಧ ಅಂಶಗಳ ಕುರಿತು ಜನರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಮತ್ತು ಅವರ ಪ್ರಶ್ನೆಗಳು ಹಾಗೂ ಸರ್ಕಾರದ ಮೇಲೆ ಇರುವ ಜನ ಅಭಿಪ್ರಾಯವನ್ನು ಸಂಗ್ರಹ ಮಾಡಿ ಮುಂದಿನ ದಿನಗಳಲ್ಲಿ ಜನರಿಗೆ ಬೇಕಾದ ಅಭಿವೃದ್ಧಿ ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 2018ರಲ್ಲೂ ಈ ರೀತಿಯ ಸಮೀಕ್ಷೆಯನ್ನು ನಡೆಸಿದರು. NaMo ಅಪ್ಲಿಕೇಶನ್‌ 2 ಕೋಟಿಗೂ ಅಧಿಕ ಜನರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!