AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ

ಕೇಂದ್ರ ಸರ್ಕಾರ 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಜನರ ಅಭಿಪ್ರಾಯ ಏನು? ಎಂಬುದನ್ನು ತಿಳಿದುಕೊಳ್ಳಲು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನ್​​ ಮ್ಯಾನ್​​​​ ಸಮೀಕ್ಷೆಯನ್ನು ಆರಂಭಿಸಿದೆ. ಜನರಲ್ಲಿ ನಮ್ಮ ಸರ್ಕಾರದ ಬಗ್ಗೆ ಯಾವ ಅಭಿಪ್ರಾಯವಿದೆ. ಹಾಗೂ ಸಂಸದರು, ಸಚಿವರ ಬಗ್ಗೆ ಇರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿದುಕೊಳ್ಳಲು ಪ್ರಯತ್ನವನ್ನು ಮಾಡುತ್ತಿದೆ.

10 ವರ್ಷದಲ್ಲಿ ಕೇಂದ್ರ ಸರ್ಕಾರ ಮಾಡಿದ ಕೆಲಸಗಳ ಬಗ್ಗೆ ನಿಮ್ಮ ಅಭಿಪ್ರಾಯವೇನು?, ಜನ್​​ ಮ್ಯಾನ್​​​​​​ ಸಮೀಕ್ಷೆ ಆರಂಭಿಸಿದ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jan 01, 2024 | 6:04 PM

Share

ದೆಹಲಿ, ಜ.1: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ 10 ವರ್ಷದ ಆಡಳಿತ ಬಗ್ಗೆ ಹಾಗೂ ಭಾರತದ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಅಭಿವೃದ್ಧಿ ಕೆಲಸದ ಬಗ್ಗೆ ಜನರ ಅಭಿಪ್ರಾಯವನ್ನು ಕೇಳಿದ್ದಾರೆ. ಈ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ‘ನಮೋ’ ಅಪ್ಲಿಕೇಶನ್ ಮೂಲಕ ಜನ್​​ ಮ್ಯಾನ್​​​​​​ ಸಮೀಕ್ಷೆ (Jan Man Survey) ಅಭಿಮಾನದ ಮೂಲಕ ತಿಳಿಸಬಹುದು. ಪ್ರಧಾನಿ ಮೋದಿ ಅವರು 10 ವರ್ಷದಲ್ಲಿ ಮಾಡಿದ ಕೆಲಸದ ಬಗ್ಗೆ ಹಾಗೂ ಸಂಸದರು ತಮ್ಮ ಕ್ಷೇತ್ರದಲ್ಲಿ ಮಾಡಿದ ಕೆಲಸದ ಬಗ್ಗೆ ಜನರು ತಮ್ಮ ಅಭಿಪ್ರಾಯವನ್ನು ಈ ಅಭಿಯಾನದ ಮೂಲಕ ತಿಳಿಸಬಹುದು.

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ, ಬಿಜೆಪಿ ಸರ್ಕಾರ ಈ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ತಮ್ಮ ಸರ್ಕಾರದ ಮತ್ತು ಸಂಸದರು, ಸಚಿವರ ಕಾರ್ಯಕ್ಷಮತೆಯ ಬಗ್ಗೆ ಜನರಲ್ಲಿರುವ ಅಭಿಪ್ರಾಯ ಏನು? ಎಂಬುದನ್ನು ಈ ಮೂಲಕ ತಿಳಿಯುತ್ತಿದ್ದಾರೆ. ಇನ್ನು ಈ ಅಭಿಮಾನದ ಬಗ್ಗೆ ಪ್ರಧಾನಿ ಮೋದಿ ಅವರೇ ತಮ್ಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು? NaMo ಅಪ್ಲಿಕೇಶನ್‌ನಲ್ಲಿ ಜನ್ ಮ್ಯಾನ್ ಸಮೀಕ್ಷೆಯ ಮೂಲಕ ನಿಮ್ಮ ಪ್ರತಿಕ್ರಿಯೆಯನ್ನು ನೇರವಾಗಿ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮೋದಿ ಅವರು ಲಿಂಕ್​​ನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಿರಿ: ಹೇಗೆ ನೋಡಿ

ಮೋದಿ ಎಕ್ಸ್​​​ ಪೋಸ್ಟ್​​​ ಇಲ್ಲಿದೆ

ಜನ್ ಮ್ಯಾನ್ ಸಮೀಕ್ಷೆ’ಯು ಆಡಳಿತ ಮತ್ತು ನಾಯಕತ್ವದ ವಿವಿಧ ಅಂಶಗಳ ಕುರಿತು ಜನರ ಪ್ರತಿಕ್ರಿಯೆಗಳನ್ನು ಪಡೆದುಕೊಂಡು ಮತ್ತು ಅವರ ಪ್ರಶ್ನೆಗಳು ಹಾಗೂ ಸರ್ಕಾರದ ಮೇಲೆ ಇರುವ ಜನ ಅಭಿಪ್ರಾಯವನ್ನು ಸಂಗ್ರಹ ಮಾಡಿ ಮುಂದಿನ ದಿನಗಳಲ್ಲಿ ಜನರಿಗೆ ಬೇಕಾದ ಅಭಿವೃದ್ಧಿ ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 2018ರಲ್ಲೂ ಈ ರೀತಿಯ ಸಮೀಕ್ಷೆಯನ್ನು ನಡೆಸಿದರು. NaMo ಅಪ್ಲಿಕೇಶನ್‌ 2 ಕೋಟಿಗೂ ಅಧಿಕ ಜನರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್