AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಪ್ ಧನ್ಖರ್ ಅನುಕರಣೆ ವಿವಾದ; ರಾಹುಲ್ ಗಾಂಧಿ ಮಾಡಿದ್ದರಲ್ಲಿ ತಪ್ಪೇನಿದೆ?: ಕಪಿಲ್ ಸಿಬಲ್

ಕಪಿಲ್ ಸಿಬಲ್ ಅವರು ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡಿದ್ದು, ನಾನು ಅಲ್ಲಿರುತ್ತಿದ್ದರೆ ಅಂಥದ್ದೇನೂ ಮಾಡುತ್ತಿರಲಿಲ್ಲ. "ಆದರೆ ಅನುಕರಿಸುವವರು ಅದರ ಬಗ್ಗೆ ಯೋಚಿಸಬೇಕಿತ್ತು" ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿಯನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.

ಜಗದೀಪ್ ಧನ್ಖರ್ ಅನುಕರಣೆ ವಿವಾದ; ರಾಹುಲ್ ಗಾಂಧಿ ಮಾಡಿದ್ದರಲ್ಲಿ ತಪ್ಪೇನಿದೆ?: ಕಪಿಲ್ ಸಿಬಲ್
ಕಪಿಲ್ ಸಿಬಲ್
Follow us
ರಶ್ಮಿ ಕಲ್ಲಕಟ್ಟ
|

Updated on: Dec 25, 2023 | 4:32 PM

ದೆಹಲಿ ಡಿಸೆಂಬರ್ 25: ಚಳಿಗಾಲದ ಅಧಿವೇಶನ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee), ಉಪರಾಷ್ಟ್ರಪತಿ ಜಗದೀಪ್ ಧನ್ಖರ್ (Jagdeep Dhankhar) ಅವರನ್ನು ಅನುಕರಣೆ ಮಾಡಿದ್ದು, ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಮ್ಮ ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಮಾಡಿದ್ದರು. ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ರಾಹುಲ್ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಕೇಳಿದ್ದಾರೆ

ರಾಜ್ಯಸಭಾ ಅಧ್ಯಕ್ಷರೂ ಆಗಿರುವ ಜಗದೀಪ್ ಧನ್ಖರ್ ಅವರನ್ನು ಕಲ್ಯಾಣ್ ಬ್ಯಾನರ್ಜಿ ಅನುಕರಣೆ ಮಾಡಿದ್ದನ್ನು ರೆಕಾರ್ಡ್ ಮಾಡಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ಬಿಜೆಪಿ ನಾಯಕರು ಟೀಕಿಸಿದ್ದು, ಇದು ಉಪರಾಷ್ಟ್ರಪತಿಗೆ ಮಾಡಿದ ಅವಮಾನ ಎಂದಿದ್ದಾರೆ. ಆದರೆ ವಿಡಿಯೊ ಮಾಡುವುದರಲ್ಲಿ ತಪ್ಪೇನು? ಅವರು (ರಾಹುಲ್ ಗಾಂಧಿ) ವಿಡಿಯೊವನ್ನು ಎಲ್ಲಿಯೂ ಬಳಸಿಲ್ಲ ಎಂದು ಕಪಿಲ್ ಸಿಬಲ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಸಿಬಲ್ ತಮ್ಮ ನಾಯಕನನ್ನು ಸಮರ್ಥಿಸಿಕೊಂಡಿದ್ದು, ನಾನು ಅಲ್ಲಿರುತ್ತಿದ್ದರೆ ಅಂಥದ್ದೇನೂ ಮಾಡುತ್ತಿರಲಿಲ್ಲ. “ಆದರೆ ಅನುಕರಿಸುವವರು ಅದರ ಬಗ್ಗೆ ಯೋಚಿಸಬೇಕಿತ್ತು” ಎಂದು ಬ್ಯಾನರ್ಜಿಯನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ. “ಇದು ರಾಜಕೀಯ ವಿಷಯವಲ್ಲ ಏಕೆಂದರೆ ಸಾಂವಿಧಾನಿಕ ಹುದ್ದೆಗಳನ್ನು ಎಷ್ಟು ಮಟ್ಟಿಗೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾಗಿದೆ” ಎಂದು ರಾಜ್ಯಸಭಾ ಸಂಸದ ಹೇಳಿದ್ದಾರೆ.

ಜಗದೀಪ್ ಧನ್ಖರ್ ನ್ನು ಮತ್ತೆ ಅಣಕಿಸಿದ ಕಲ್ಯಾಣ್ ಬ್ಯಾನರ್ಜಿ

ಶನಿವಾರದಂದು ಟಿಎಂಸಿ ನಾಯಕ ಮತ್ತೊಮ್ಮೆ ಧನ್ಖರ್ ಅವರನ್ನು ಅನುಕರಿಸಿದ್ದು ಈ ನಡುವೆಯೇ ಸಿಬಲ್ ಅವರ ಪ್ರತಿಕ್ರಿಯೆ ಬಂದಿದೆ. ಕಳೆದ ವಾರ ಕಲ್ಯಾಣ್ ಬ್ಯಾನರ್ಜಿ ಅವರು ಸಂಸತ್ತಿನ ಮಕರ ದ್ವಾರದಲ್ಲಿ ಇತರ ಅಮಾನತುಗೊಂಡ ಸಂಸದರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾಗ ಧನ್ಖರ್ ಅವರನ್ನು ಅನುಕರಿಸಿ ವಿವಾದಕ್ಕೀಡಾಗಿದ್ದರು.

ಘಟನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಧನ್ಖರ್ ಭಾರತದ ಉಪರಾಷ್ಟ್ರಪತಿಯಾಗಿ ತಮ್ಮ ಸ್ಥಾನವನ್ನು ವಿರೋಧ ಪಕ್ಷದ ಸದಸ್ಯರು ಅವಮಾನಿಸಿದ್ದಾರೆ. ಇದು ಜಾಟ್, ಅವರ ಜಾತಿ ಮತ್ತು ರೈತರ ಕುಟುಂಬದಿಂದ ಬಂದಿರುವ ಅವರ ಹಿನ್ನೆಲೆಗೆ ಅವಮಾನವಾಗಿದೆ ಎಂದಿದ್ದಾರೆ ಶನಿವಾರ ಪಶ್ಚಿಮ ಬಂಗಾಳದ ಸೆರಾಂಪೋರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಬ್ಯಾನರ್ಜಿ ಅವರು ಧರ್ಖರ್ ಅನ್ನು ಅನುಕರಣೆ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಅನುಕರಣೆ ಒಂದು ಕಲೆ,ನಾನು ಇದನ್ನು ಸಾವಿರ ಬಾರಿ ಮಾಡುತ್ತೇನೆ. ಹಾಗೆ ಮಾಡಲು ನನಗೆ ಮೂಲಭೂತ ಹಕ್ಕಿದೆ ಎಂದು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಮತ್ತೊಮ್ಮೆ ಉಪರಾಷ್ಟ್ರಪತಿಯನ್ನು ಅನುಕರಣೆ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ

“ನಾನು ಮಿಮಿಕ್ರಿ ಮಾಡುತ್ತಲೇ ಇರುತ್ತೇನೆ. ಅದೊಂದು ಕಲಾ ಪ್ರಕಾರ. ಬೇಕಾದರೆ ಸಾವಿರ ಬಾರಿ ಮಾಡುತ್ತೇನೆ. ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನನಗೆ ಎಲ್ಲಾ ಮೂಲಭೂತ ಹಕ್ಕುಗಳಿವೆ. ನೀವು ನನ್ನನ್ನು ಜೈಲಿಗೆ ಹಾಕಬಹುದು. ನಾನು ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ ಕಲ್ಯಾಣ್ ಬ್ಯಾನರ್ಜಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ