AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 15ರಿಂದ ಜೂನ್ 15ರ ನಡುವೆ 20 ಲಕ್ಷ ಭಾರತೀಯರ ವಾಟ್ಸ್ಯಾಪ್ ಅಕೌಂಟ್ ನಿರ್ಬಂಧ

ಆನ್​ಲೈನ್​ ಕಿರುಕುಳ ತಪ್ಪಿಸಲು, ಬಳಕೆದಾರರ ಸುರಕ್ಷೆ ಕಾಪಾಡಲು ಇಂಥ ಕಠಿಣ ಕ್ರಮ ಅನಿವಾರ್ಯವಾಗಿತ್ತು ಎಂದು ಫೇಸ್​ಬುಕ್ ಮಾಲೀಕತ್ವದ ಮೆಸೆಂಜಿಂಗ್ ಆ್ಯಪ್ ವೇದಿಕೆಯು ಗುರುವಾರ ಸಲ್ಲಿಸಿದ ಮಾಸಿಕ ವರದಿಯಲ್ಲಿ ತಿಳಿಸಿದೆ.

ಮೇ 15ರಿಂದ ಜೂನ್ 15ರ ನಡುವೆ 20 ಲಕ್ಷ ಭಾರತೀಯರ ವಾಟ್ಸ್ಯಾಪ್ ಅಕೌಂಟ್ ನಿರ್ಬಂಧ
ಪ್ರಾತಿನಿಧಿಕ ಚಿತ್ರ
TV9 Web
| Updated By: Skanda|

Updated on:Jul 16, 2021 | 10:50 AM

Share

ದೆಹಲಿ: ಮೇ 15ರರಿಂದ ಜೂನ್ 15ರ ಅವಧಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಭಾರತೀಯರ ವಾಟ್ಸ್ಯಾಪ್ ಅಕೌಂಟ್​ಗಳನ್ನು ನಿರ್ಬಂಧಿಸಲಾಗಿದೆ. ಆನ್​ಲೈನ್​ ಕಿರುಕುಳ ತಪ್ಪಿಸಲು, ಬಳಕೆದಾರರ ಸುರಕ್ಷೆ ಕಾಪಾಡಲು ಇಂಥ ಕಠಿಣ ಕ್ರಮ ಅನಿವಾರ್ಯವಾಗಿತ್ತು ಎಂದು ಫೇಸ್​ಬುಕ್ ಮಾಲೀಕತ್ವದ ಮೆಸೆಂಜಿಂಗ್ ಆ್ಯಪ್ ವೇದಿಕೆಯು ಗುರುವಾರ ಸಲ್ಲಿಸಿದ ಮಾಸಿಕ ವರದಿಯಲ್ಲಿ ತಿಳಿಸಿದೆ.

ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಪ್ರಕಾರ ಪ್ರತಿ ತಿಂಗಳೂ ಸಾಮಾಜಿಕ ಮಾಧ್ಯಮ ಮತ್ತು ಮೆಸೆಂಜಿಂಗ್​ ಸೇವೆ ಒದಗಿಸುವ ಕಂಪನಿಗಳು ಇಂಥ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.

ನಾವು ತಂತ್ರಜ್ಞಾನ ಸುಧಾರಿಸಲು, ಜನರು ಮತ್ತು ಪ್ರಕ್ರಿಯೆಗಳನ್ನು ಸುರಕ್ಷಿತವಾಗಿರಿಸಲು ಸದಾ ಪ್ರಯತ್ನಿಸುತ್ತೇವೆ. ಹಾನಿಕಾರಕ ಅಥವಾ ಬೇಡದ ಮೆಸೇಜ್​ಗಳನ್ನು ದೊಡ್ಡಮಟ್ಟದಲ್ಲಿ ರವಾನಿಸದಂತೆ ತಡೆಯುವುದು ನಮ್ಮ ಉದ್ದೇಶ. ಅಸಹಜ ಚಟುವಟಿಕೆ ನಡೆಸುವ ಮತ್ತು ಅತಿಹೆಚ್ಚು ಜನರಿಗೆ ಮೆಸೇಜ್​ಗಳನ್ನು ಕಳಿಸುವ ಸಂಖ್ಯೆಗಳನ್ನು ಗುರುತಿಸಿ ನಿರ್ಬಂಧಿಸುವ ವ್ಯವಸ್ಥೆ ರೂಪಿಸಿದ್ದೇವೆ. ಇಂಥ ಚಟುವಟಿಕೆಗಳಲ್ಲಿ ನಿರತವಾದ ಸುಮಾರು 20 ಲಕ್ಷ ಅಕೌಂಟ್​ಗಳನ್ನು ಮೇ 15ರಿಂದ ಜೂನ್ 15ರ ಅವಧಿಯಲ್ಲಿ ನಿರ್ಬಂಧಿಸಿದ್ದೇವೆ. ಈ ಪೈಕಿ ಹಲವು ಅಕೌಂಟ್​ಗಳು ಕಿರುಕುಳ ನೀಡಲು ಬಳಕೆಯಾಗುತ್ತಿದ್ದ ಆರೋಪ ಎದುರಿಸುತ್ತಿದ್ದವು ಎಂದು ವಾಟ್ಸ್ಯಾಪ್​ ಕಂಪನಿ ಹೇಳಿದೆ.

ಹಾನಿಕಾರಕ ಕೃತ್ಯಗಳಿಗಾಗಿ ನಮ್ಮ ವೇದಿಕೆಗಳನ್ನು ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಇಂಥ ಚಟುವಟಿಕೆಗಳನ್ನು ತಡೆಯಲೆಂದೇ ಹಲವು ಸಾಧನಗಳು ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ಹಾನಿಕಾರಕ ಚಟುವಟಿಕೆಗಳನ್ನು ತಡೆಗಟ್ಟುವುದು ನಮ್ಮ ಮುಖ್ಯ ಉದ್ದೇಶ. ಅಂಥ ಕೃತ್ಯ ನಡೆಯುವ ಮೊದಲೇ ಗುರುತಿಸಿ ತಡೆಯುವುದರಲ್ಲಿ ನಾವು ಹೆಚ್ಚು ವಿಶ್ವಾಸವಿಟ್ಟಿದ್ದೇವೆ ಎಂದು ವಾಟ್ಸ್ಯಾಪ್ ವರದಿ ಹೇಳಿದೆ.

ಕಿರುಕುಳದ ಮೆಸೇಜ್​ಗಳನ್ನು ಗುರುತಿಸಲು ನಮ್ಮ ವೇದಿಕೆಯು ಮೂರು ಹಂತದ ಪರಿಶೀಲನಾ ವ್ಯವಸ್ಥೆಯನ್ನು ರೂಪಿಸಿದೆ. ಯಾವುದೇ ಅಕೌಂಟ್​ನ ನೋಂದಣಿ ಸಂದರ್ಭ, ಮೆಸೇಜ್​ಗಳನ್ನು ರವಾನಿಸುವ ಸಂದರ್ಭ ಮತ್ತು ಯಾವುದೇ ಮೆಸೇಜ್​ ಬಗ್ಗೆ ವರದಿಯಾಗುವ ನೆಗೆಟಿವ್ ಪ್ರತಿಕ್ರಿಯೆಯನ್ನು ಅನುಸರಿಸಿ ವಾಟ್ಸ್ಯಾಪ್​ ಕ್ರಮ ಕೈಗೊಳ್ಳುತ್ತದೆ. ವಿಶ್ಲೇಷಕರ ಒಂದು ವಿಶೇಷ ತಂಡವೇ ಈ ವ್ಯವಸ್ಥೆಯನ್ನು ನಿರ್ವಹಿಸಲು ಕೆಲಸ ಮಾಡುತ್ತಿದೆ. ಕಾಲಾನುಕ್ರಮದಲ್ಲಿ ಈ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸಲು ಸತತ ಪ್ರಯತ್ನ ನಡೆಯುತ್ತಿದೆ ಎಂದು ಸಂಸ್ಥೆಯು ಹೇಳಿದೆ.

(WhatsApp Accounts of Over 20 Lakh Indians Banned Between May 15 And June 15)

ಇದನ್ನೂ ಓದಿ: ವಾಟ್ಸ್ಯಾಪ್ ಗುಂಪಿನ ಸದಸ್ಯನ ಆಕ್ಷೇಪಾರ್ಹ ಪೋಸ್ಟ್​ಗಳಿಗೆ ಗ್ರೂಪ್ ಅಡ್ಮಿನ್ ಹೊಣೆಗಾರನಲ್ಲ: ಬಾಂಬೆ ಹೈಕೋರ್ಟ್

ಇದನ್ನೂ ಓದಿ: Explainer | Sandes: ವಾಟ್ಸ್ಯಾಪ್​ಗೆ ಸೆಡ್ಡು ಹೊಡೆಯಲು ಬರುತ್ತಿದೆ ಸರ್ಕಾರಿ ಆ್ಯಪ್  ಸಂದೇಸ್

Published On - 10:54 pm, Thu, 15 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ