AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆಯ ಉಡುಗೆ ಬಗ್ಗೆ ಕಾಮೆಂಟ್, ಆರೋಪಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದ ನ್ಯಾಯಾಧೀಶರ ವರ್ಗಾವಣೆ

ತಮ್ಮ ವರ್ಗಾವಣೆಯನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ನ ಏಕಸದಸ್ಯ ನ್ಯಾಯಾಧೀಶರ ಆದೇಶದ ವಿರುದ್ಧ ಸೆಷನ್ಸ್ ನ್ಯಾಯಾಧೀಶರು ಸಲ್ಲಿಸಿದ ಮೇಲ್ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ.

ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆಯ ಉಡುಗೆ ಬಗ್ಗೆ ಕಾಮೆಂಟ್, ಆರೋಪಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದ ನ್ಯಾಯಾಧೀಶರ ವರ್ಗಾವಣೆ
ಕೇರಳ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 02, 2022 | 3:12 PM

Share

ಕೊಚ್ಚಿ: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಎರಡು ಲೈಂಗಿಕ ಕಿರುಕುಳ ಪ್ರಕರಣಗಳ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ತಮ್ಮ ಆದೇಶದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಸೆಷನ್ಸ್ ನ್ಯಾಯಾಧೀಶರು (sessions judge), ಆರೋಪಿಗಳಿಗೆ ವಿಚಾರಣೆ ದಿನಾಂಕದ ಬಗ್ಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿ ನಂತರ ಪ್ರಕರಣವನ್ನು ವಿಲೇವಾರಿ ಮಾಡಿದ್ದಾರೆ ಎಂದು ಕೇರಳ ಹೈಕೋರ್ಟ್‌ಗೆ (Kerala High Court) ಅದರ ರಿಜಿಸ್ಟ್ರಾರ್ ಜನರಲ್ (RG) ಮಾಹಿತಿ ನೀಡಿದ್ದಾರೆ. ಲೈಂಗಿಕ ಕಿರುಕುಳ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸೆಷನ್ಸ್ ನ್ಯಾಯಾಧೀಶರು ಅನುಚಿತ ವಿಧಾನ ಕೈಗೊಂಡಿದ್ದು ಇದು ಅವರನ್ನು ಕೊಲ್ಲಂ ಜಿಲ್ಲೆಯ ಕಾರ್ಮಿಕ ನ್ಯಾಯಾಲಯಕ್ಕೆ ವರ್ಗಾಯಿಸಲು ಕಾರಣವಾಯಿತು ಎಂದು ಆರ್‌ಜಿ  ಪಿ ಕೃಷ್ಣ ಕುಮಾರ್ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ತಮ್ಮ ವರ್ಗಾವಣೆಯನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌ನ ಏಕಸದಸ್ಯ ನ್ಯಾಯಾಧೀಶರ ಆದೇಶದ ವಿರುದ್ಧ ಸೆಷನ್ಸ್ ನ್ಯಾಯಾಧೀಶರು ಸಲ್ಲಿಸಿದ ಮೇಲ್ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ಲೈಂಗಿಕ ಕಿರುಕುಳ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್‌ಗೆ ಜಾಮೀನು ಮಂಜೂರು ಮಾಡಿದ ಸೆಷನ್ಸ್ ನ್ಯಾಯಾಧೀಶ ಎಸ್ ಕೃಷ್ಣಕುಮಾರ್ ಅವರ ಎರಡು ವಿವಾದಾತ್ಮಕ ಆದೇಶಗಳನ್ನು ಉಲ್ಲೇಖಿಸಿದ ಆರ್‌ಜಿ,  ಇದು ಅಧಿಕಾರಿಯ ಅಸಂಬದ್ಧ ವಿಧಾನವನ್ನು ಸೂಚಿಸುತ್ತದೆ ಎಂದಿದ್ದಾರೆ.

ಈ ಆದೇಶಗಳು ಇಡೀ ನ್ಯಾಯಾಂಗವನ್ನು ಸಾಮಾನ್ಯ ಜನರ ಮುಂದೆ ಕೆಟ್ಟ ರೀತಿಯಲ್ಲಿ ನೋಡುವಂತೆ ಮಾಡುವ ಅಧಿಕಾರಿಯ ಧೋರಣೆಯನ್ನು ಸೂಚಿಸುತ್ತವೆ, ಇದು ಸಂಸ್ಥೆಯ ಮೇಲಿನ ಸಾರ್ವಜನಿಕ ವಿಶ್ವಾಸದ ಕಡಿಮೆಯಾಗಲು ಕಾರಣವಾಗುತ್ತದೆ” ಎಂದು ಆರ್‌ಜಿ ಅಕ್ಟೋಬರ್ 10 ರಂದು ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ನ್ಯಾಯಾಂಗ ಅಧಿಕಾರಿಯು ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವಾಗ ಪ್ರಕರಣದ ಕುರಿತು ಆರೋಪಿಗಳಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ ನಂತರ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣವನ್ನು ವಿಲೇವಾರಿ ಮಾಡಿದ್ದಾರೆ ಎಂದು ಅಫಿಡವಿಟ್ ನಲ್ಲಿ ಹೇಳಿದೆ.

ನ್ಯಾಯಾಂಗ ಅಧಿಕಾರಿಯ ಈ ನಿರ್ಧಾರವನ್ನು ಹೈಕೋರ್ಟ್ ತಳ್ಳಿಹಾಕಿದೆ. ಆರ್ ಜಿ ಅವರ ಅಫಿಡವಿಟ್ ಪ್ರಕಾರ, ಸಾಧ್ಯವಾದಷ್ಟು ಪ್ರಕರಣಗಳನ್ನು ವಿಲೇವಾರಿ ಮಾಡುವ ನ್ಯಾಯಾಧೀಶರ ಗುಣ ಶ್ಲಾಘನೀಯ. ಆದರೆ ಪ್ರಕರಣಗಳನ್ನು ವಿಲೇವಾರಿ ಮಾಡುವ ಆತುರದಲ್ಲಿ ಕಾನೂನು ಹಕ್ಕುಗಳ ಉಲ್ಲಂಘನೆಯಾಗಬಾರದು ಎಂದಿದೆ ನ್ಯಾಯಾಧೀಶರ ಆದೇಶ ಬಗ್ಗೆ ಸಾರ್ವಜನಿಕರು ಮತ್ತು ಶಿಕ್ಷಣತಜ್ಞರು ಕಟುವಾದ ಮತ್ತು ತೀವ್ರ ಟೀಕೆ ಮಾಡಿದ್ದಾರೆ ಎಂದು ಕೋಝಿಕ್ಕೋಡ್ ನ್ಯಾಯಾಂಗ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶರು ಗಮನಿಸಿದ್ದಾರೆ ಎಂದು ಅದು ಹೇಳಿದೆ. “ಮೇಲಿನ ಸಂದರ್ಭಗಳಲ್ಲಿ, ಕೋಝಿಕ್ಕೋಡ್ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶರು ರಿಜಿಸ್ಟ್ರಿಯಿಂದವರದಿಯನ್ನು ಕೇಳಿದ್ದು ಮೇಲ್ಮನವಿದಾರ (ಎಸ್ ಕೃಷ್ಣಕುಮಾರ್) ನೀಡಿದ ಹಲವು ಆದೇಶಗಳು ಮತ್ತು ತೀರ್ಪುಗಳನ್ನು ಪರಿಗಣಿಸಿದ್ದಾರೆಎಂದು ಆರ್ ಜಿ ಅವರ ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
Image
ಮಹಿಳೆಯರ ಪ್ರಚೋದನಕಾರಿ ಉಡುಗೆ ಪುರುಷನಿಗೆ ಆಕೆ ಮೇಲೆ ದೌರ್ಜನ್ಯವೆಸಗಲಿರುವ ಪರವಾನಗಿ ಅಲ್ಲ: ಕೇರಳ ಹೈಕೋರ್ಟ್
Image
ಲೈಂಗಿಕ ಪ್ರಕರಣದ ಆರೋಪಿ ದಲಿತ ಮಹಿಳೆಯನ್ನು ಮುಟ್ಟಿದ್ದಾನೆ ಎಂಬುದು ನಂಬಲಸಾಧ್ಯ: ಕೇರಳದ ನ್ಯಾಯಾಧೀಶ

ಮಹಿಳೆಯ ಉಡುಗೆಗೆ ಸಂಬಂಧಿಸಿದಂತೆ ನ್ಯಾಯಾಧೀಶರ ಅನಗತ್ಯ ಅಭಿಪ್ರಾಯ ಪರಿಗಣಿಸಿದ ನಂತರ ಮೇಲ್ಕಂಡ ಸ್ವಭಾವದ ವಿಷಯಗಳಲ್ಲಿ ವ್ಯವಹರಿಸುವಾಗ ನ್ಯಾಯಾಧೀಶರು ಅನುಸರಿಸಿದ ಅನುಚಿತ ವಿಧಾನಗಳನ್ನು ಪರಿಗಣಿಸಿ, ನ್ಯಾಯದ ಆಡಳಿತದ ಸಾಮಾನ್ಯ ಹಿತಾಸಕ್ತಿಗಳಿಗಾಗಿ ಅವರನ್ನು ಕೊಲ್ಲಂನ ಲೇಬರ್ ಕೋರ್ಟ್ ಗೆ  ನಿಯೋಜಿಸಲು ಹೈಕೋರ್ಟ್ ನಿರ್ಧರಿಸಿತು.

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು