AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರು ಸಾಮಾಜಿಕ ಜಾಲತಾಣದ ಹೊಸ ಪ್ರೈವೆಸಿ ಪಾಲಿಸಿ ವಿಚಾರದಲ್ಲಿ, ಏಕಪಕ್ಷೀಯವಾಗಿ ಬದಲಾವಣೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ,

ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್ ಹಾಕಿರುವ ಸ್ಟೇಟಸ್
TV9 Web
| Edited By: |

Updated on:Apr 06, 2022 | 8:42 PM

Share

ದೆಹಲಿ: ವಾಟ್ಸ್​ಆ್ಯಪ್ ತನ್ನ ಹೊಸ ಗೌಪ್ಯತಾ ನೀತಿ (ಪ್ರೈವೆಸಿ ಪಾಲಿಸಿ) ವಿಚಾರವಾಗಿ, ಭಾರತೀಯ ಬಳಕೆದಾರರನ್ನು ಯುರೋಪಿಯನ್ ಬಳಕೆದಾರರಿಗಿಂತ ಭಿನ್ನವಾಗಿ ಕಾಣುತ್ತಿದೆ. ಈ ವಿಚಾರ ಸರ್ಕಾರದ ಗಮನಕ್ಕೂ ಬಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರು ಸಾಮಾಜಿಕ ಜಾಲತಾಣದ ಹೊಸ ಪ್ರೈವೆಸಿ ಪಾಲಿಸಿ ವಿಚಾರದಲ್ಲಿ, ಏಕಪಕ್ಷೀಯವಾಗಿ ಬದಲಾವಣೆಗೆ ಒಳಗಾಗಿದ್ದಾರೆ. ಕೇವಲ ಭಾರತೀಯ ಬಳಕೆದಾರರನ್ನು ಕೇಂದ್ರೀಕರಿಸಿ, ಫೇಸ್​ಬುಕ್ ಈ ರೀತಿ ವರ್ತಿಸಿರುವುದು ನಮ್ಮ ಕಾಳಜಿಗೆ ಕಾರಣ ಎಂದು ಸರ್ಕಾರ ಹೈಕೋರ್ಟ್​ಗೆ ಹೇಳಿಕೆ ನೀಡಿದೆ.

ಈ ಕುರಿತಾಗಿ, ನ್ಯಾಯಮೂರ್ತಿ ಸಂಜೀವ್ ಸಚ್​ದೇವ ಮುಂದೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಹೇಳಿಕೆ ನೀಡಿದ್ದಾರೆ. ಫೇಸ್​ಬುಕ್ ಒಡೆತನದ, ವಾಟ್ಸ್​ಆ್ಯಪ್​ನ  ಹೊಸ ಗೌಪ್ಯತಾ ನೀತಿಗಳ ಬಗ್ಗೆ ವಿಚಾರಣೆ ನಡೆಸುವ ವೇಳೆ ಈ ಮಾಹಿತಿ ನೀಡಲಾಗಿದೆ.

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರಿಗೆ, ತಮ್ಮ ಮಾಹಿತಿಯನ್ನು (ಡಾಟಾ) ಫೇಸ್​ಬುಕ್​ನ ಇತರ ಕಂಪೆನಿಗಳೊಂದಿಗೆ ಹಂಚಿಕೊಳ್ಳುವ ವಿಚಾರದಲ್ಲಿ ಆಯ್ಕೆ ನೀಡಿಲ್ಲ. ವಾಟ್ಸ್​ಆ್ಯಪ್ ನೀತಿಯನ್ನು ಒಪ್ಪಿಕೊಳ್ಳಬೇಕು ಅಥವಾ ಬಳಕೆ ನಿಲ್ಲಿಸಬೇಕು ಎಂಬ ಎರಡೇ ಆಯ್ಕೆಗಳು ಬಳಕೆದಾರರ ಎದುರು ಇದೆ. ಇದು ಸರಿಯಲ್ಲ ಎಂದು ವಿಚಾರಣೆಯ ವೇಳೆ ಚೇತನ್ ಶರ್ಮಾ ಹೇಳಿದ್ದಾರೆ. ಈ ನೀತಿಯು, ಬಳಕೆದಾರರ ಮಾಹಿತಿ ಗೌಪ್ಯತೆ ಹಾಗೂ ಮಾಹಿತಿ ಸುರಕ್ಷತೆಯನ್ನು ಉಲ್ಲಂಘಿಸಿದಂತೆ ಎಂದು ಶರ್ಮಾ ಕೋರ್ಟ್​ಗೆ ತಿಳಿಸಿದ್ದಾರೆ.

ಈ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ ಹಾಗೂ ಈ ವಿಚಾರವನ್ನು ಈಗಾಗಲೇ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಮತ್ತು ಸೂಕ್ತ ಮಾಹಿತಿಗಳಿಗಾಗಿ ಸರ್ಕಾರ, ಫೇಸ್​ಬುಕ್ ಜೊತೆ ಸಂವಹನ ನಡೆಸಿರುವುದಾಗಿ ಶರ್ಮಾ ಮಾಹಿತಿ ನೀಡಿದ್ದಾರೆ. ಫೇಸ್​ಬುಕ್ ಪರ ವಾದಿಸುತ್ತಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ಸಂವಹನ ಸಂದೇಶವನ್ನು ಸ್ವೀಕರಿಸಿದ್ದೇವೆ ಮತ್ತು ಪ್ರತಿಕ್ರಿಯಿಸುತ್ತೇವೆ ಎಂದು ಕೋರ್ಟ್​ನಲ್ಲಿ ಹೇಳಿಕೆ ನೀಡಿದ್ದಾರೆ. ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 1ಕ್ಕೆ ಮುಂದೂಡಿದೆ.

ವಾಟ್ಸ್​ಆ್ಯಪ್ ಹೊಸ ನೀತಿಯಿಂದ ಸಂವಿಧಾನದ ಆಶಯ ಉಲ್ಲಂಘನೆ: ದೆಹಲಿ ಹೈಕೋರ್ಟ್​ಗೆ ಅರ್ಜಿ

ವಾಟ್ಸಾಪ್​​-ಟೆಲಿಗ್ರಾಂ-ಸಿಗ್ನಲ್​: ಯಾವ ಆ್ಯಪ್​ ಹೆಚ್ಚು ಸೇಫ್​? ಇಲ್ಲಿದೆ ವಿವರ

Published On - 4:03 pm, Mon, 25 January 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ