AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರು ಸಾಮಾಜಿಕ ಜಾಲತಾಣದ ಹೊಸ ಪ್ರೈವೆಸಿ ಪಾಲಿಸಿ ವಿಚಾರದಲ್ಲಿ, ಏಕಪಕ್ಷೀಯವಾಗಿ ಬದಲಾವಣೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ,

ವಾಟ್ಸ್​ಆ್ಯಪ್ ಹೊಸ ಪ್ರೈವೆಸಿ ಪಾಲಿಸಿಯಲ್ಲಿ ಭಾರತೀಯರಿಗೆ ತಾರತಮ್ಯ: ಕೇಂದ್ರ ಸರ್ಕಾರ
ವಾಟ್ಸ್​ಆ್ಯಪ್ ಹಾಕಿರುವ ಸ್ಟೇಟಸ್
TV9 Web
| Edited By: |

Updated on:Apr 06, 2022 | 8:42 PM

Share

ದೆಹಲಿ: ವಾಟ್ಸ್​ಆ್ಯಪ್ ತನ್ನ ಹೊಸ ಗೌಪ್ಯತಾ ನೀತಿ (ಪ್ರೈವೆಸಿ ಪಾಲಿಸಿ) ವಿಚಾರವಾಗಿ, ಭಾರತೀಯ ಬಳಕೆದಾರರನ್ನು ಯುರೋಪಿಯನ್ ಬಳಕೆದಾರರಿಗಿಂತ ಭಿನ್ನವಾಗಿ ಕಾಣುತ್ತಿದೆ. ಈ ವಿಚಾರ ಸರ್ಕಾರದ ಗಮನಕ್ಕೂ ಬಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರು ಸಾಮಾಜಿಕ ಜಾಲತಾಣದ ಹೊಸ ಪ್ರೈವೆಸಿ ಪಾಲಿಸಿ ವಿಚಾರದಲ್ಲಿ, ಏಕಪಕ್ಷೀಯವಾಗಿ ಬದಲಾವಣೆಗೆ ಒಳಗಾಗಿದ್ದಾರೆ. ಕೇವಲ ಭಾರತೀಯ ಬಳಕೆದಾರರನ್ನು ಕೇಂದ್ರೀಕರಿಸಿ, ಫೇಸ್​ಬುಕ್ ಈ ರೀತಿ ವರ್ತಿಸಿರುವುದು ನಮ್ಮ ಕಾಳಜಿಗೆ ಕಾರಣ ಎಂದು ಸರ್ಕಾರ ಹೈಕೋರ್ಟ್​ಗೆ ಹೇಳಿಕೆ ನೀಡಿದೆ.

ಈ ಕುರಿತಾಗಿ, ನ್ಯಾಯಮೂರ್ತಿ ಸಂಜೀವ್ ಸಚ್​ದೇವ ಮುಂದೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಹೇಳಿಕೆ ನೀಡಿದ್ದಾರೆ. ಫೇಸ್​ಬುಕ್ ಒಡೆತನದ, ವಾಟ್ಸ್​ಆ್ಯಪ್​ನ  ಹೊಸ ಗೌಪ್ಯತಾ ನೀತಿಗಳ ಬಗ್ಗೆ ವಿಚಾರಣೆ ನಡೆಸುವ ವೇಳೆ ಈ ಮಾಹಿತಿ ನೀಡಲಾಗಿದೆ.

ಭಾರತೀಯ ವಾಟ್ಸ್​ಆ್ಯಪ್ ಬಳಕೆದಾರರಿಗೆ, ತಮ್ಮ ಮಾಹಿತಿಯನ್ನು (ಡಾಟಾ) ಫೇಸ್​ಬುಕ್​ನ ಇತರ ಕಂಪೆನಿಗಳೊಂದಿಗೆ ಹಂಚಿಕೊಳ್ಳುವ ವಿಚಾರದಲ್ಲಿ ಆಯ್ಕೆ ನೀಡಿಲ್ಲ. ವಾಟ್ಸ್​ಆ್ಯಪ್ ನೀತಿಯನ್ನು ಒಪ್ಪಿಕೊಳ್ಳಬೇಕು ಅಥವಾ ಬಳಕೆ ನಿಲ್ಲಿಸಬೇಕು ಎಂಬ ಎರಡೇ ಆಯ್ಕೆಗಳು ಬಳಕೆದಾರರ ಎದುರು ಇದೆ. ಇದು ಸರಿಯಲ್ಲ ಎಂದು ವಿಚಾರಣೆಯ ವೇಳೆ ಚೇತನ್ ಶರ್ಮಾ ಹೇಳಿದ್ದಾರೆ. ಈ ನೀತಿಯು, ಬಳಕೆದಾರರ ಮಾಹಿತಿ ಗೌಪ್ಯತೆ ಹಾಗೂ ಮಾಹಿತಿ ಸುರಕ್ಷತೆಯನ್ನು ಉಲ್ಲಂಘಿಸಿದಂತೆ ಎಂದು ಶರ್ಮಾ ಕೋರ್ಟ್​ಗೆ ತಿಳಿಸಿದ್ದಾರೆ.

ಈ ಬಗ್ಗೆ ಸರ್ಕಾರ ಕಾಳಜಿ ವಹಿಸಿದೆ ಹಾಗೂ ಈ ವಿಚಾರವನ್ನು ಈಗಾಗಲೇ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಮತ್ತು ಸೂಕ್ತ ಮಾಹಿತಿಗಳಿಗಾಗಿ ಸರ್ಕಾರ, ಫೇಸ್​ಬುಕ್ ಜೊತೆ ಸಂವಹನ ನಡೆಸಿರುವುದಾಗಿ ಶರ್ಮಾ ಮಾಹಿತಿ ನೀಡಿದ್ದಾರೆ. ಫೇಸ್​ಬುಕ್ ಪರ ವಾದಿಸುತ್ತಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್, ಸಂವಹನ ಸಂದೇಶವನ್ನು ಸ್ವೀಕರಿಸಿದ್ದೇವೆ ಮತ್ತು ಪ್ರತಿಕ್ರಿಯಿಸುತ್ತೇವೆ ಎಂದು ಕೋರ್ಟ್​ನಲ್ಲಿ ಹೇಳಿಕೆ ನೀಡಿದ್ದಾರೆ. ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 1ಕ್ಕೆ ಮುಂದೂಡಿದೆ.

ವಾಟ್ಸ್​ಆ್ಯಪ್ ಹೊಸ ನೀತಿಯಿಂದ ಸಂವಿಧಾನದ ಆಶಯ ಉಲ್ಲಂಘನೆ: ದೆಹಲಿ ಹೈಕೋರ್ಟ್​ಗೆ ಅರ್ಜಿ

ವಾಟ್ಸಾಪ್​​-ಟೆಲಿಗ್ರಾಂ-ಸಿಗ್ನಲ್​: ಯಾವ ಆ್ಯಪ್​ ಹೆಚ್ಚು ಸೇಫ್​? ಇಲ್ಲಿದೆ ವಿವರ

Published On - 4:03 pm, Mon, 25 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!