AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ

2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು.

ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Updated By: Lakshmi Hegde|

Updated on: Dec 25, 2021 | 6:06 PM

Share

2018ರಲ್ಲಿ ಜಮ್ಮು-ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಮುಸ್ಲಿಂ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಂಜಾಬ್​-ಹರ್ಯಾಣ ಉಚ್ಛ ನ್ಯಾಯಾಲಯ ಜಾಮೀನು ನೀಡಿದೆ. ಅದರ ಬೆನ್ನಲ್ಲೇ  ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿ, ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಹೇಳಿದ್ದಾರೆ. ಕಥುವಾ ರೇಪ್​ ಕೇಸ್​ಗೆ ಸಂಬಂಧಪಟ್ಟಂತೆ ಸಾಕ್ಷ್ಯ ನಾಶ ಮಾಡಲು ಸಹಕಾರ ನೀಡಿದ್ದ ಎಂಬ ಆರೋಪದಡಿ ಆನಂದ ದತ್ತ ಎಂಬುವರನ್ನು ಬಂಧಿಸಲಾಗಿತ್ತು. ಆತನಿಗೆ ಡಿಸೆಂಬರ್​ 21ರಂದು ಹೈಕೋರ್ಟ್ ಜಾಮೀನು ನೀಡಿದ್ದು, ಶ್ಯೂರಿಟಿ ಬಾಂಡ್​ಗೆ ಸಹಿ ಹಾಕಿಸಿಕೊಂಡು ಬೇಲ್​ ನೀಡಿದೆ. ಘಟನೆ ನಡೆದಾಗ ಈ ಆನಂದ್ ದತ್ತಾ ಸ್ಟೇಶನ್​ ಆಫೀಸರ್​ ಆಗಿದ್ದರು. ಅವರು ಸಾಕ್ಷ್ಯ ನಾಶ ಪಡಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ಐದು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು. 

ಡಿ.21ರಂದು ಆನಂದ್​ ದತ್ತಗೆ ಜಾಮೀನು ನೀಡುತ್ತಿದ್ದಂತೆ ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿದ್ದಾರೆ. ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ನಾಶ ಪಡಿಸಿದ್ದಾರೆ ಎಂದು ಜೈಲಿಗೆ ಹಾಕಲಾಗಿದ್ದ ಪೊಲೀಸ್​ ಸಿಬ್ಬಂದಿಯನ್ನು ಇದೀಗ ಬಿಡುಗಡೆಗೊಳಿಸಲಾಗಿದೆ. ಅವರ ಉಳಿದ ವರ್ಷದ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಗೊಂದಲಕ್ಕೆ ಕಾರಣವಾಗಿದೆ. ಅತ್ಯಾಚಾರಕ್ಕೆ ಒಳಗಾಗಿ ಕೊಲ್ಲಲ್ಪಟ್ಟ ಮಗುವಿಗೆ ಸಿಗಬೇಕಾಗಿದ್ದ ನ್ಯಾಯ ಪೂರ್ತಿ ಸಿಗದಂತಾಯಿತು. ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ದೇಶವನ್ನು ನಡುಗಿಸಿತ್ತು ಈ ಅತ್ಯಾಚಾರ 2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಸಂಜಿ ರಾಮ್​ ಸೇರಿ ಒಟ್ಟು ಆರು ಮಂದಿಯನ್ನು ದೋಷಿ ಎಂದು ಘೋಷಿಸಿತ್ತು. ಹಾಗೇ, ಆನಂದ್​ ದತ್ತಾ, ತಿಲಕ್​ ರಾಜ್​ ಮತ್ತು ಸುರೇಂದ್ರ ವರ್ಮಾರು ಸಾಕ್ಷ್ಯ ನಾಶ ಪಡಿಸಿದ್ದಕ್ಕಾಗಿ ಅವರಿಗೆ 5ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆ ಕಡಿಮೆ ಮಾಡುವಂತೆ ಆನಂದ್​ ದತ್ತ ಮನವಿಯನ್ನು ಪುರಸ್ಕರಿಸಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಕನಸಿನಂತೆ ಖಾದಿ ಕುಶಲಕರ್ಮಿಗಳ ಆರ್ಥಿಕ ವಿಮೋಚನೆ ಅಗತ್ಯ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?