AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ

2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು.

ಕಥುವಾ ರೇಪ್​ ಕೇಸ್ ಆರೋಪಿಗೆ ಜಾಮೀನು; ನ್ಯಾಯದ ಚಕ್ರ ಕುಸಿದುಬಿದ್ದಿದೆ ಎಂದ ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
TV9 Web
| Edited By: |

Updated on: Dec 25, 2021 | 6:06 PM

Share

2018ರಲ್ಲಿ ಜಮ್ಮು-ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಮುಸ್ಲಿಂ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಂಜಾಬ್​-ಹರ್ಯಾಣ ಉಚ್ಛ ನ್ಯಾಯಾಲಯ ಜಾಮೀನು ನೀಡಿದೆ. ಅದರ ಬೆನ್ನಲ್ಲೇ  ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯೆ ನೀಡಿ, ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂದು ಹೇಳಿದ್ದಾರೆ. ಕಥುವಾ ರೇಪ್​ ಕೇಸ್​ಗೆ ಸಂಬಂಧಪಟ್ಟಂತೆ ಸಾಕ್ಷ್ಯ ನಾಶ ಮಾಡಲು ಸಹಕಾರ ನೀಡಿದ್ದ ಎಂಬ ಆರೋಪದಡಿ ಆನಂದ ದತ್ತ ಎಂಬುವರನ್ನು ಬಂಧಿಸಲಾಗಿತ್ತು. ಆತನಿಗೆ ಡಿಸೆಂಬರ್​ 21ರಂದು ಹೈಕೋರ್ಟ್ ಜಾಮೀನು ನೀಡಿದ್ದು, ಶ್ಯೂರಿಟಿ ಬಾಂಡ್​ಗೆ ಸಹಿ ಹಾಕಿಸಿಕೊಂಡು ಬೇಲ್​ ನೀಡಿದೆ. ಘಟನೆ ನಡೆದಾಗ ಈ ಆನಂದ್ ದತ್ತಾ ಸ್ಟೇಶನ್​ ಆಫೀಸರ್​ ಆಗಿದ್ದರು. ಅವರು ಸಾಕ್ಷ್ಯ ನಾಶ ಪಡಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ ಐದು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು. 

ಡಿ.21ರಂದು ಆನಂದ್​ ದತ್ತಗೆ ಜಾಮೀನು ನೀಡುತ್ತಿದ್ದಂತೆ ಮೆಹಬೂಬಾ ಮುಫ್ತಿ ಟ್ವೀಟ್​ ಮಾಡಿದ್ದಾರೆ. ಕಥುವಾ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ನಾಶ ಪಡಿಸಿದ್ದಾರೆ ಎಂದು ಜೈಲಿಗೆ ಹಾಕಲಾಗಿದ್ದ ಪೊಲೀಸ್​ ಸಿಬ್ಬಂದಿಯನ್ನು ಇದೀಗ ಬಿಡುಗಡೆಗೊಳಿಸಲಾಗಿದೆ. ಅವರ ಉಳಿದ ವರ್ಷದ ಜೈಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಗೊಂದಲಕ್ಕೆ ಕಾರಣವಾಗಿದೆ. ಅತ್ಯಾಚಾರಕ್ಕೆ ಒಳಗಾಗಿ ಕೊಲ್ಲಲ್ಪಟ್ಟ ಮಗುವಿಗೆ ಸಿಗಬೇಕಾಗಿದ್ದ ನ್ಯಾಯ ಪೂರ್ತಿ ಸಿಗದಂತಾಯಿತು. ನ್ಯಾಯದ ಚಕ್ರಗಳು ಸಂಪೂರ್ಣವಾಗಿ ಕುಸಿದಿವೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ದೇಶವನ್ನು ನಡುಗಿಸಿತ್ತು ಈ ಅತ್ಯಾಚಾರ 2018ರ ಜನವರಿಯಲ್ಲಿ ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಂಜಾಬ್​ನ ಪಠಾಣ್​ಕೋಟ್​ ನ್ಯಾಯಾಲಯ 2019ರ ಜೂನ್​ 10ರಂದು ತೀರ್ಪು ನೀಡಿತ್ತು. ಇದರಲ್ಲಿ ಪ್ರಮುಖ ಆರೋಪಿ ಸಂಜಿ ರಾಮ್​ ಸೇರಿ ಒಟ್ಟು ಆರು ಮಂದಿಯನ್ನು ದೋಷಿ ಎಂದು ಘೋಷಿಸಿತ್ತು. ಹಾಗೇ, ಆನಂದ್​ ದತ್ತಾ, ತಿಲಕ್​ ರಾಜ್​ ಮತ್ತು ಸುರೇಂದ್ರ ವರ್ಮಾರು ಸಾಕ್ಷ್ಯ ನಾಶ ಪಡಿಸಿದ್ದಕ್ಕಾಗಿ ಅವರಿಗೆ 5ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆ ಕಡಿಮೆ ಮಾಡುವಂತೆ ಆನಂದ್​ ದತ್ತ ಮನವಿಯನ್ನು ಪುರಸ್ಕರಿಸಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಕನಸಿನಂತೆ ಖಾದಿ ಕುಶಲಕರ್ಮಿಗಳ ಆರ್ಥಿಕ ವಿಮೋಚನೆ ಅಗತ್ಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ