AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Building: ಭಾರತ ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುವುದು, ಭಾರತ ಪ್ರಜಾತಂತ್ರ ರಾಷ್ಟ್ರ ಮಾತ್ರವಲ್ಲ ಪ್ರಜಾತಂತ್ರದ ಜನನಿ ಕೂಡ: ಮೋದಿ

ಭಾರತವು ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುತ್ತದೆ, ಸಂಸತ್ ಭವನವು ಭಾರತದ ವಿಕಾಸ ಹಾಗೂ ವಿಶ್ವ ವಿಕಾಸಕ್ಕೆ ಆಹ್ವಾನ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

New Parliament Building: ಭಾರತ ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುವುದು, ಭಾರತ ಪ್ರಜಾತಂತ್ರ ರಾಷ್ಟ್ರ ಮಾತ್ರವಲ್ಲ ಪ್ರಜಾತಂತ್ರದ ಜನನಿ ಕೂಡ: ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:May 28, 2023 | 1:38 PM

ಭಾರತವು ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುತ್ತದೆ, ಸಂಸತ್ ಭವನ(Parliament Building)ವು ಭಾರತದ ವಿಕಾಸ ಹಾಗೂ ವಿಶ್ವ ವಿಕಾಸಕ್ಕೆ ಆಹ್ವಾನ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಹೊಸ ಮಾರ್ಗಗಳನ್ನು ಅನುಸರಿಸುವುದರಿಂದ ಮಾತ್ರ ಹೊಸ ದಾಖಲೆಗಳು ಸೃಷ್ಟಿಯಾಗುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಉತ್ಸಾಹವಿದೆ, ಹೊಸ ಪ್ರಯಾಣವಿದೆ, ಹೊಸ ಚಿಂತನೆ, ಹೊಸ ದಿಕ್ಕು, ಹೊಸ ದೃಷ್ಟಿ. ನಿರ್ಣಯ ಹೊಸದು, ನಂಬಿಕೆ ಹೊಸದು. ಈ ಕಟ್ಟಡ ಕೇವಲ ಕಟ್ಟಡವಲ್ಲ ಇದು ಭಾರತದ ಪ್ರಜಾಪ್ರಭುತ್ವದ ಪ್ರತೀಕ ಎಂದರು. ಈ ಹೊಸ ಕಟ್ಟಡ ಸ್ವಾವಲಂಬಿ ಭಾರತದ ಸೂರ್ಯೋದಯಕ್ಕೆ ಸಾಕ್ಷಿಯಾಗಲಿದೆ.

ಹಳೆಯ ಸಂಸತ್ತಿನಲ್ಲಿ ಸಮಸ್ಯೆಗಳಿದ್ದವು, ಮುಂಬರುವ ದಿನಗಳಲ್ಲಿ ಸಂಸದರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕಾಗಿಯೇ ಸಂಸತ್ತಿನ ಹೊಸ ಕಟ್ಟಡವನ್ನು ನಿರ್ಮಿಸುವುದು ಇಂದಿನ ಅಗತ್ಯವಾಗಿತ್ತು. ನಮ್ಮ ಪ್ರಜಾಪ್ರಭುತ್ವವೇ ನಮಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಮ್ಮ ಸಂವಿಧಾನವೇ ನಮ್ಮ ನಿರ್ಣಯ ಎಂದು ಹೇಳಿದರು.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕು, ಗುರಿ ದೊಡ್ಡದು ದಾರಿಯೂ ಸುಲಭವಲ್ಲ, ಪ್ರತಿಯೊಬ್ಬ ಪ್ರಜೆಯೂ ಇದಕ್ಕಾಗಿ ಶ್ರಮಿಸಬೇಕಾಗಿದೆ. ಹೊಸ ನಿರ್ಣಯಗಳನ್ನು ತೆಗೆದುಕೊಳ್ಳಬೇಕು, ಹೊಸ ವೇಗವನ್ನು ತೆಗೆದುಕೊಳ್ಳಬೇಕು. ಭಾರತೀಯರ ನಂಬಿಕೆ ಭಾರತಕ್ಕಷ್ಟೇ ಸೀಮಿತವಾಗಿಲ್ಲ ಎಂಬುದಕ್ಕೆ ಇತಿಹಾಸವೇ ಸಾಕ್ಷ ಎಂದಿರುವ ಅವರು ವೇದದ ಜತೆಗೆ ಬಸವೇಶ್ವರರ ಅನುಭವ ಮಂಟಪವನ್ನೂ ಸ್ಮರಿಸಿದ್ದಾರೆ.

ಮತ್ತಷ್ಟು ಓದಿ: New Parliament Building Inauguration: ನೂತನ ಸಂಸತ್ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

ಸ್ವಾತಂತ್ರ್ಯ ಹೋರಾಟ ಅನೇಕ ದೇಶಗಳಲ್ಲಿ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಿತು. ಇಂದು ಪ್ರತಿಯೊಬ್ಬ ಭಾರತೀಯನೂ ಹೊಸ ಸಂಸತ್ತನ್ನು ನೋಡಿ ಹೆಮ್ಮೆ ಪಡುತ್ತಾನೆ. ಈ ಕಟ್ಟಡದಲ್ಲಿ ಕಲೆಯ ಜೊತೆಗೆ ಕೌಶಲ್ಯವೂ ಇದೆ. ಅದರಲ್ಲಿ ಸಂವಿಧಾನದ ಧ್ವನಿಯ ಜೊತೆಗೆ ಸಂಸ್ಕೃತಿಯೂ ಇದೆ. ಲೋಕಸಭೆಯ ಒಳಭಾಗವು ರಾಷ್ಟ್ರೀಯ ಪಕ್ಷಿ ನವಿಲನ್ನು ಆಧರಿಸಿದೆ.

ರಾಷ್ಟ್ರೀಯ ಪುಷ್ಪ ಕಮಲವನ್ನು ಆಧರಿಸಿದ ರಾಜ್ಯಸಭೆಯ ಒಳಭಾಗ. ಸಂಸತ್ತಿನ ಆವರಣದಲ್ಲಿ ರಾಷ್ಟ್ರೀಯ ಆಲದ ಮರವೂ ಇದೆ. ಈ ಕಟ್ಟಡದಲ್ಲಿ ನಮ್ಮ ದೇಶದ ವೈವಿಧ್ಯತೆಯನ್ನು ಸೇರಿಸಲಾಗಿದೆ. ಯುಪಿಯ ಕುಶಲಕರ್ಮಿಗಳು ರತ್ನಗಂಬಳಿಗಳನ್ನು ನೇಯ್ದಿದ್ದಾರೆ. ಈ ಕಟ್ಟಡದ ಪ್ರತಿಯೊಂದು ಕಣವೂ ಏಕ ಭಾರತ, ಶ್ರೇಷ್ಠ ಭಾರತ ಎಂಬ ಕನಸನ್ನು ಹೊಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:24 pm, Sun, 28 May 23

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್