AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಕಿಡ್ನಿ ಕೊಡೋ ಸಮಯ ಬಂದಾಗ ಮಗ ಓಡಿ ಹೋಗಿದ್ದ: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್​ಜೆಡಿ ಹೀನಾಯವಾಗಿ ಸೋತ ಬಳಿಕ, ಲಾಲು ಪ್ರಸಾದ್ ಯಾದವ್ ಮನೆಯಲ್ಲಿ ಕುದಿಯುತ್ತಿದ್ದ ಕುಟುಂಬ ಕಲಹ ಬೀದಿಗೆ ಬಂದಿದೆ. ತೇಜಸ್ವಿ ಯಾದವ್ ಮತ್ತು ಅವರ ಆಪ್ತರಿಂದ ಅವಮಾನಕ್ಕೊಳಗಾಗಿರುವುದಾಗಿ ಆರೋಪಿಸಿ ಇತ್ತೀಚೆಗೆ ರಾಜಕೀಯದಿಂದ ಹೊರನಡೆಯುವುದಾಗಿ ಘೋಷಿಸಿದ್ದ ಲಾಲು ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಸಾಮಾಜಿಕ ಮಾಧ್ಯಮದಲ್ಲಿ ಸಂವೇದನಾಶೀಲ ವೀಡಿಯೊವನ್ನು ಹಂಚಿಕೊಂಡಿದ್ದು, ವಿವಾದವನ್ನು ಮತ್ತಷ್ಟು ಹೆಚ್ಚಾಗಿದೆ.

ತಂದೆಗೆ ಕಿಡ್ನಿ ಕೊಡೋ ಸಮಯ ಬಂದಾಗ ಮಗ ಓಡಿ ಹೋಗಿದ್ದ: ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ
ರೋಹಿಣಿ ಆಚಾರ್ಯ
ನಯನಾ ರಾಜೀವ್
|

Updated on:Nov 19, 2025 | 8:26 AM

Share

ಪಾಟ್ನಾ, ನವೆಂಬರ್ 19: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್​ಜೆಡಿ(RJD) ಹೀನಾಯವಾಗಿ ಸೋತ ಬಳಿಕ, ಲಾಲು ಪ್ರಸಾದ್ ಯಾದವ್ ಮನೆಯಲ್ಲಿ ಕುದಿಯುತ್ತಿದ್ದ ಕುಟುಂಬ ಕಲಹ ಬೀದಿಗೆ ಬಂದಿದೆ. ತೇಜಸ್ವಿ ಯಾದವ್ ಮತ್ತು ಅವರ ಆಪ್ತರಿಂದ ಅವಮಾನಕ್ಕೊಳಗಾಗಿರುವುದಾಗಿ ಆರೋಪಿಸಿ ಇತ್ತೀಚೆಗೆ ರಾಜಕೀಯದಿಂದ ಹೊರನಡೆಯುವುದಾಗಿ ಘೋಷಿಸಿದ್ದ ಲಾಲು ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಸಾಮಾಜಿಕ ಮಾಧ್ಯಮದಲ್ಲಿ ಸಂವೇದನಾಶೀಲ ವೀಡಿಯೊವನ್ನು ಹಂಚಿಕೊಂಡಿದ್ದು, ವಿವಾದವನ್ನು ಮತ್ತಷ್ಟು ಹೆಚ್ಚಾಗಿದೆ.

ರೋಹಿಣಿ ಅವರು ಪತ್ರಕರ್ತ ಕನ್ಹಯ್ಯಾ ಭೇಲಾರಿ ಅವರೊಂದಿಗಿನ ತಮ್ಮ ಫೋನ್ ಸಂಭಾಷಣೆಯ 5 ನಿಮಿಷ, 44 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ನಾನು ನನ್ನ ಪೋಷಕರ ಮನೆಗೆ ಎಷ್ಟು ಬಾರಿ ಭೇಟಿ ನೀಡುತ್ತೇನೆ ಮತ್ತು ನಾನು ಎಷ್ಟು ಕಾಲ ಅಲ್ಲಿಯೇ ಇರುತ್ತೇನೆ ಎಂಬುದರ ಕುರಿತು ನಿಮ್ಮ ಬಳಿ ಯಾವುದೇ ಡೇಟಾ ಇದೆಯೇ ಎಂದು ತೀಕ್ಷ್ಣವಾಗಿ ಪ್ರಶ್ನಿಸುವುದನ್ನು ಕೇಳಬಹುದು.

ಕಿಡ್ನಿ ಕೊಡೋ ಸಮಯ ಬಂದಾಗ ಮಗ ಓಡಿ ಹೋಗಿದ್ದ ಎಂದು ತೇಜಸ್ವಿ ಯಾದವ್​ ಬಗ್ಗೆ ರೋಹಿಣಿ ಟೀಕೆ ಮಾಡಿದ್ದಾರೆ. ಹಾಗೆಯೇ ರೋಹಿನಿ ಚುನಾವಣೆಗೂ ಮುನ್ನ ಲಾಲು ನಿವಾಸದಲ್ಲಿ ಹೆಚ್ಚು ದಿನಗಳ ಕಾಲ ಇದ್ದರು, ಚುನಾವಣೆಯಲ್ಲಿ ಅವರು ಸೋಲು ಕಾಣುತ್ತಿದ್ದಂತೆ ಮನೆಯಿಮದ ಹೊರಬಂದಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಮತ್ತಷ್ಟು ಓದಿ: ಬಿಹಾರದಲ್ಲಿ ಆರ್‌ಜೆಡಿ ಸೋಲಿನ ಬಳಿಕ ಕುಟುಂಬ, ರಾಜಕೀಯವೆರಡನ್ನೂ ತೊರೆದ ಲಾಲು ಯಾದವ್ ಮಗಳು ರೋಹಿಣಿ ಆಚಾರ್ಯ

ತನ್ನ ತಂದೆಗೆ ಮೂತ್ರಪಿಂಡವನ್ನು ದಾನ ಮಾಡುವ ನಿರ್ಧಾರವನ್ನು ಪ್ರಶ್ನಿಸುವವರಿಗೆ ಅವರು ಸವಾಲು ಹಾಕಿದರು, ಅವರು ಸಾರ್ವಜನಿಕ ಚರ್ಚೆಗೆ ಸಿದ್ಧರಾಗಿರಬೇಕು ಎಂದು ಹೇಳಿದ್ದರು. ಮಗಳ ಮೂತ್ರಪಿಂಡ ಕೊಳಕು ಎಂದು ಕರೆಯುವವರು ಮೊದಲು ತಮ್ಮ ಸ್ವಂತ ಮೂತ್ರಪಿಂಡವನ್ನು ದಾನ ಮಾಡಬೇಕು. ಬಾಟಲಿ ರಕ್ತ ನೀಡುವ ಯೋಚನೆ ಬಂದರೆ ನಡುಗುವ ಜನರು ಮೂತ್ರಪಿಂಡ ದಾನದ ಬಗ್ಗೆ ಬೋಧಿಸುತ್ತೀರಾ.

ತೇಜಸ್ವಿ ಯಾದವ್ ಲಾಲು ಪ್ರಸಾದ್‌ಗೆ ತಮ್ಮ ಮೂತ್ರಪಿಂಡವನ್ನು ಏಕೆ ನೀಡಲಿಲ್ಲ ಎಂದು ರೋಹಿಣಿ ಕೇಳುತ್ತಿದ್ದಾರೆ. ಮೂತ್ರಪಿಂಡ ದಾನದ ಬಗ್ಗೆ ಮಾತನಾಡುವುದು ಸುಲಭ, ಆದರೆ ಯಾರೂ ಅದನ್ನು ಮಾಡುವುದಿಲ್ಲ.

ತೇಜಸ್ವಿ ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ, ನನ್ನ ಮೇಲೆ ಚಪ್ಪಲಿ ಎತ್ತಿದ್ದಾರೆ, ಆಪ್ತರು ನನ್ನದು ಕೊಳಕು ಕಿಡ್ನಿ, ಈ ಕೊಳಕು ಕಿಡ್ನಿಯ ಬದಲಾಗಿ ಚುನಾವಣಾ ಟಿಕೆಟ್ ಪಡೆದಿದ್ದಳು ಎಂದು ಆರೋಪಿಸಿರುವುದಾಗಿ ರೋಹಿಣಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:24 am, Wed, 19 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ