AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Lakshmi Hegde
|

Updated on: May 02, 2021 | 9:13 AM

Share

ಇಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ. ಬೆಳಗ್ಗೆಯಿಂದಲೇ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ರಾಜಕೀಯ ಪಕ್ಷಗಳ ವಕ್ತಾರರು ಡಿಬೇಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಂದು ಮಹತ್ವದ ನಿರ್ಧಾರ ಮಾಡಿದ್ದು, ನಮ್ಮ ಪಕ್ಷದಿಂದ ಯಾವುದೇ ವಕ್ತಾರನನ್ನೂ ಟಿವಿ ಡಿಬೇಟ್​ಗಳಿಗೆ ಕಳಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈಗ ನಾವು ಅವುಗಳ ಬಗ್ಗೆ ಚರ್ಚಿಸಬೇಕೇ ಹೊರತು ಚುನಾವಣೆಯ ಸೋಲು ಗೆಲುವುಗಳನ್ನಲ್ಲ ಎಂದು ಹೇಳಿದ್ದಾರೆ.

ನಾವು ಈಗ ಚುನಾವಣಾ ಡಿಬೇಟ್​​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರನ್ನೂ ಕಳಿಸದೆ ಇರಲು ನಿರ್ಧರಿಸಿದ್ದೇವೆ. ಅದರ ಹೊರತಾಗಿ ಮಾಧ್ಯಮ ಸ್ನೇಹಿತರು ಹೊರಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ನಾವು ಈ ಚುನಾವಣೆಯಲ್ಲಿ ಗೆಲ್ಲಬಹುದು.. ಸೋಲಬಹುದು. ಆದರೆ ಈಗ ಜನರು ಆಮ್ಲಜನಕ, ಹಾಸಿಗೆ, ಔಷಧ, ವೆಂಟಿಲೇಟರ್​ ಇಲ್ಲದೆ ಪರದಾಡುತ್ತಿದ್ದಾರೆ. ನಾವು ಅವರ ಪರ ನಿಲ್ಲುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೋಗಿಗಳ ನೆರವಿಗೆ ನಿಂತು, ಅನಾಥ ಶವಗಳಿಗೆ ಮುಕ್ತಿ ಕೊಡುತ್ತಿದ್ದಾರೆ ಹಾವೇರಿಯ ಅಬ್ದುಲ್ ಖಾದರ

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ