AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Lakshmi Hegde
|

Updated on: May 02, 2021 | 9:13 AM

Share

ಇಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ. ಬೆಳಗ್ಗೆಯಿಂದಲೇ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ರಾಜಕೀಯ ಪಕ್ಷಗಳ ವಕ್ತಾರರು ಡಿಬೇಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಂದು ಮಹತ್ವದ ನಿರ್ಧಾರ ಮಾಡಿದ್ದು, ನಮ್ಮ ಪಕ್ಷದಿಂದ ಯಾವುದೇ ವಕ್ತಾರನನ್ನೂ ಟಿವಿ ಡಿಬೇಟ್​ಗಳಿಗೆ ಕಳಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈಗ ನಾವು ಅವುಗಳ ಬಗ್ಗೆ ಚರ್ಚಿಸಬೇಕೇ ಹೊರತು ಚುನಾವಣೆಯ ಸೋಲು ಗೆಲುವುಗಳನ್ನಲ್ಲ ಎಂದು ಹೇಳಿದ್ದಾರೆ.

ನಾವು ಈಗ ಚುನಾವಣಾ ಡಿಬೇಟ್​​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರನ್ನೂ ಕಳಿಸದೆ ಇರಲು ನಿರ್ಧರಿಸಿದ್ದೇವೆ. ಅದರ ಹೊರತಾಗಿ ಮಾಧ್ಯಮ ಸ್ನೇಹಿತರು ಹೊರಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ನಾವು ಈ ಚುನಾವಣೆಯಲ್ಲಿ ಗೆಲ್ಲಬಹುದು.. ಸೋಲಬಹುದು. ಆದರೆ ಈಗ ಜನರು ಆಮ್ಲಜನಕ, ಹಾಸಿಗೆ, ಔಷಧ, ವೆಂಟಿಲೇಟರ್​ ಇಲ್ಲದೆ ಪರದಾಡುತ್ತಿದ್ದಾರೆ. ನಾವು ಅವರ ಪರ ನಿಲ್ಲುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೋಗಿಗಳ ನೆರವಿಗೆ ನಿಂತು, ಅನಾಥ ಶವಗಳಿಗೆ ಮುಕ್ತಿ ಕೊಡುತ್ತಿದ್ದಾರೆ ಹಾವೇರಿಯ ಅಬ್ದುಲ್ ಖಾದರ

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!