AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

Assembly Election Result 2021: ಚುನಾವಣಾ ಫಲಿತಾಂಶದ ದಿನ ಕಾಂಗ್ರೆಸ್​​ ಮಹತ್ವದ ನಿರ್ಧಾರ; ಟ್ವೀಟ್ ಮಾಡಿ ತಿಳಿಸಿದ ರಣದೀಪ್​ ಸುರ್ಜೇವಾಲಾ
ರಣ​ದೀಪ್ ಸುರ್ಜೇವಾಲಾ
Lakshmi Hegde
|

Updated on: May 02, 2021 | 9:13 AM

Share

ಇಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ. ಬೆಳಗ್ಗೆಯಿಂದಲೇ ಸುದ್ದಿ ಮಾಧ್ಯಮಗಳು ಚುನಾವಣಾ ಫಲಿತಾಂಶದ ಸುದ್ದಿಗಳನ್ನು ಬಿತ್ತರಿಸುತ್ತಿವೆ. ರಾಜಕೀಯ ಪಕ್ಷಗಳ ವಕ್ತಾರರು ಡಿಬೇಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಒಂದು ಮಹತ್ವದ ನಿರ್ಧಾರ ಮಾಡಿದ್ದು, ನಮ್ಮ ಪಕ್ಷದಿಂದ ಯಾವುದೇ ವಕ್ತಾರನನ್ನೂ ಟಿವಿ ಡಿಬೇಟ್​ಗಳಿಗೆ ಕಳಿಸುವುದಿಲ್ಲ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್​ ಸಿಂಗ್​ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ. ಈಗ ನಾವು ಅವುಗಳ ಬಗ್ಗೆ ಚರ್ಚಿಸಬೇಕೇ ಹೊರತು ಚುನಾವಣೆಯ ಸೋಲು ಗೆಲುವುಗಳನ್ನಲ್ಲ ಎಂದು ಹೇಳಿದ್ದಾರೆ.

ನಾವು ಈಗ ಚುನಾವಣಾ ಡಿಬೇಟ್​​ಗಳಿಗೆ ನಮ್ಮ ಪಕ್ಷದಿಂದ ಯಾವುದೇ ವಕ್ತಾರರನ್ನೂ ಕಳಿಸದೆ ಇರಲು ನಿರ್ಧರಿಸಿದ್ದೇವೆ. ಅದರ ಹೊರತಾಗಿ ಮಾಧ್ಯಮ ಸ್ನೇಹಿತರು ಹೊರಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ. ನಾವು ಈ ಚುನಾವಣೆಯಲ್ಲಿ ಗೆಲ್ಲಬಹುದು.. ಸೋಲಬಹುದು. ಆದರೆ ಈಗ ಜನರು ಆಮ್ಲಜನಕ, ಹಾಸಿಗೆ, ಔಷಧ, ವೆಂಟಿಲೇಟರ್​ ಇಲ್ಲದೆ ಪರದಾಡುತ್ತಿದ್ದಾರೆ. ನಾವು ಅವರ ಪರ ನಿಲ್ಲುತ್ತೇವೆ. ಅವರಿಗೆ ಸಹಾಯ ಮಾಡುತ್ತೇವೆ ಎಂದು ಸುರ್ಜೇವಾಲಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೋಗಿಗಳ ನೆರವಿಗೆ ನಿಂತು, ಅನಾಥ ಶವಗಳಿಗೆ ಮುಕ್ತಿ ಕೊಡುತ್ತಿದ್ದಾರೆ ಹಾವೇರಿಯ ಅಬ್ದುಲ್ ಖಾದರ

ಹಸಿವು ತಾಳಲಾರದೆ ಕಸದ ರಾಶಿಯಲ್ಲಿ ಊಟಕ್ಕೆ ಹುಡುಕಾಟ, ಹಾಸನದಲ್ಲಿ ಮನಕಲಕುವ ಘಟನೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!