AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಚೀನಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ ಎಂಬ ರಾಹುಲ್ ಹೇಳಿಕೆಗೆ ಖಡಕ್ ಉತ್ತರ ನೀಡಿದ ಜೈಶಂಕರ್

ಮಿಲಿಟರಿ ಬೆದರಿಕೆಗಳನ್ನು ಭಾರತ ಹೇಗೆ ಎದುರಿಸಬೇಕು ಎಂದು ಕೇಳಿದಾಗ, ಬೆದರಿಕೆಯ ಸ್ವರೂಪಕ್ಕೆ ಭಾರತವು ಮಿಲಿಟರಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಗಾಂಧಿ ಹೇಳಿದ್ದರು. ಜೈಶಂಕರ್ ಮತ್ತು ಸರ್ಕಾರವು ಚೀನಾದಿಂದ ನಿಜವಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ

ಭಾರತ ಚೀನಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ ಎಂಬ ರಾಹುಲ್ ಹೇಳಿಕೆಗೆ ಖಡಕ್ ಉತ್ತರ ನೀಡಿದ ಜೈಶಂಕರ್
ಎಸ್ ಜೈಶಂಕರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 18, 2023 | 3:00 PM

Share

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(S Jai Shankar) ಅವರು ಭಾರತಕ್ಕೆ ಚೀನಾ (China) ಒಡ್ಡುತ್ತಿರುವ ಬೆದರಿಕೆಯನ್ನು “ಅರ್ಥಮಾಡಿಕೊಂಡಿಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್ ಯಾರೋ ಚೀನಾದ ಮೇಲೆ ಜೊಲ್ಲು ಸುರಿಸುವುದನ್ನು ಭಾರತದ ಪ್ರಜೆಯಾಗಿ ನೋಡುವುದು ಕಷ್ಟವಾಗುತ್ತಿದೆ ಎಂದಿದ್ದಾರೆ. ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಜೈಶಂಕರ್, ಪಾಂಡಾವೊಂದು ಚೀನಾದ ಗಿಡುಗವಾಗಲು ಪ್ರಯತ್ನಿಸಿದರೆ ಅದು ಹಾರುವುದಿಲ್ಲ ಎಂದು ಹೇಳಿದ್ದಾರೆ.  ಈ ತಿಂಗಳ ಆರಂಭದಲ್ಲಿ ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘದ ಸದಸ್ಯರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಯಾರೂ ಭಾರತೀಯ ಪ್ರದೇಶವನ್ನು ಪ್ರವೇಶಿಸಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯು ವಾಸ್ತವ ನಿಯಂತ್ರಣ ರೇಖೆಯಲ್ಲಿ ತನ್ನ ಆಕ್ರಮಣವನ್ನು ಪುನರಾವರ್ತಿಸಲು ಚೀನಾಕ್ಕೆ ಆಹ್ವಾನವಾಗಿದೆ ಎಂದು ಹೇಳಿದ್ದರು.

ಮಿಲಿಟರಿ ಬೆದರಿಕೆಗಳನ್ನು ಭಾರತ ಹೇಗೆ ಎದುರಿಸಬೇಕು ಎಂದು ಕೇಳಿದಾಗ, ಬೆದರಿಕೆಯ ಸ್ವರೂಪಕ್ಕೆ ಭಾರತವು ಮಿಲಿಟರಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಗಾಂಧಿ ಹೇಳಿದ್ದರು. ಜೈಶಂಕರ್ ಮತ್ತು ಸರ್ಕಾರವು ಚೀನಾದಿಂದ ನಿಜವಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ. ಪ್ರಧಾನಿಯವರ ಹೇಳಿಕೆಯು ಬೆದರಿಕೆಯ ಗ್ರಹಿಕೆಯ ಕೊರತೆಯನ್ನು ಪ್ರದರ್ಶಿಸುತ್ತದೆ ಎಂದಿದ್ದರು ರಾಹುಲ್ ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೈಶಂಕರ್, “ಯಾರೋ ಚೀನಾದ ಮೇಲೆ ಜೊಲ್ಲು ಸುರಿಸುತ್ತಿರುವುದನ್ನು ಮತ್ತು ಭಾರತದ ಬಗ್ಗೆ ತಿರಸ್ಕಾರ ಮಾಡುತ್ತಿರುವುದನ್ನು ನೋಡಿದರೆ  ಭಾರತದ ಪ್ರಜೆಯಾಗಿ ನನಗೆ ಕಷ್ಟವಾಗುತ್ತಿದೆ ಎಂದು ಹೇಳಿದರು. ಯುಕೆಯಲ್ಲಿ ರಾಹುಲ್ ಗಾಂಧಿಯವರ ಇತ್ತೀಚಿನ ಭಾಷಣದ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಇದನ್ನೂ ಓದಿ:Global Millets Conference: ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು; ಪ್ರಧಾನಿ ಮೋದಿ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರನ್ನು ಟೀಕಿಸಿದ ಜೈಶಂಕರ್, ಭಾರತ ಚೀನಾಕ್ಕೆ ಹೆದರುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದರು. “ರಾಹುಲ್ ಗಾಂಧಿ ಚೀನಾದ ಬಗ್ಗೆ ಮೆಚ್ಚುಗೆಯಿಂದ ಮಾತನಾಡುತ್ತಾರೆ ಮತ್ತು ದೇಶವನ್ನು ‘ಸಾಮರಸ್ಯ’ ಎಂದು ವಿವರಿಸುತ್ತಾರೆ, ಅವರು ಚೀನಾ ಶ್ರೇಷ್ಠ ತಯಾರಕ ಎಂದು ಹೇಳುತ್ತಾರೆ ಮತ್ತು ‘ಮೇಕ್ ಇನ್ ಇಂಡಿಯಾ’ ಕೆಲಸ ಮಾಡುವುದಿಲ್ಲ ಅಂತಾರೆ ಎಂದು ಜೈಶಂಕರ್ ಹೇಳಿದ್ದಾರೆ.

“ನೀವು ದೇಶದ ಬಗ್ಗೆ ದೃಷ್ಟಿಕೋನವನ್ನು ಹೊಂದಬಹುದು, ಆದರೆ ನೀವು ರಾಷ್ಟ್ರೀಯ ನೈತಿಕತೆಯನ್ನು ದುರ್ಬಲಗೊಳಿಸಬಾರದು” ಎಂದು ಸಚಿವರು ಹೇಳಿದ್ದಾರೆ.

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ