AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಚೀನಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ ಎಂಬ ರಾಹುಲ್ ಹೇಳಿಕೆಗೆ ಖಡಕ್ ಉತ್ತರ ನೀಡಿದ ಜೈಶಂಕರ್

ಮಿಲಿಟರಿ ಬೆದರಿಕೆಗಳನ್ನು ಭಾರತ ಹೇಗೆ ಎದುರಿಸಬೇಕು ಎಂದು ಕೇಳಿದಾಗ, ಬೆದರಿಕೆಯ ಸ್ವರೂಪಕ್ಕೆ ಭಾರತವು ಮಿಲಿಟರಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಗಾಂಧಿ ಹೇಳಿದ್ದರು. ಜೈಶಂಕರ್ ಮತ್ತು ಸರ್ಕಾರವು ಚೀನಾದಿಂದ ನಿಜವಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ

ಭಾರತ ಚೀನಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ ಎಂಬ ರಾಹುಲ್ ಹೇಳಿಕೆಗೆ ಖಡಕ್ ಉತ್ತರ ನೀಡಿದ ಜೈಶಂಕರ್
ಎಸ್ ಜೈಶಂಕರ್
ರಶ್ಮಿ ಕಲ್ಲಕಟ್ಟ
|

Updated on: Mar 18, 2023 | 3:00 PM

Share

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(S Jai Shankar) ಅವರು ಭಾರತಕ್ಕೆ ಚೀನಾ (China) ಒಡ್ಡುತ್ತಿರುವ ಬೆದರಿಕೆಯನ್ನು “ಅರ್ಥಮಾಡಿಕೊಂಡಿಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್ ಯಾರೋ ಚೀನಾದ ಮೇಲೆ ಜೊಲ್ಲು ಸುರಿಸುವುದನ್ನು ಭಾರತದ ಪ್ರಜೆಯಾಗಿ ನೋಡುವುದು ಕಷ್ಟವಾಗುತ್ತಿದೆ ಎಂದಿದ್ದಾರೆ. ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ ಜೈಶಂಕರ್, ಪಾಂಡಾವೊಂದು ಚೀನಾದ ಗಿಡುಗವಾಗಲು ಪ್ರಯತ್ನಿಸಿದರೆ ಅದು ಹಾರುವುದಿಲ್ಲ ಎಂದು ಹೇಳಿದ್ದಾರೆ.  ಈ ತಿಂಗಳ ಆರಂಭದಲ್ಲಿ ಲಂಡನ್‌ನಲ್ಲಿ ಭಾರತೀಯ ಪತ್ರಕರ್ತರ ಸಂಘದ ಸದಸ್ಯರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಯಾರೂ ಭಾರತೀಯ ಪ್ರದೇಶವನ್ನು ಪ್ರವೇಶಿಸಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯು ವಾಸ್ತವ ನಿಯಂತ್ರಣ ರೇಖೆಯಲ್ಲಿ ತನ್ನ ಆಕ್ರಮಣವನ್ನು ಪುನರಾವರ್ತಿಸಲು ಚೀನಾಕ್ಕೆ ಆಹ್ವಾನವಾಗಿದೆ ಎಂದು ಹೇಳಿದ್ದರು.

ಮಿಲಿಟರಿ ಬೆದರಿಕೆಗಳನ್ನು ಭಾರತ ಹೇಗೆ ಎದುರಿಸಬೇಕು ಎಂದು ಕೇಳಿದಾಗ, ಬೆದರಿಕೆಯ ಸ್ವರೂಪಕ್ಕೆ ಭಾರತವು ಮಿಲಿಟರಿಯಾಗಿ ಪ್ರತಿಕ್ರಿಯಿಸುವ ಅಗತ್ಯವಿದೆ ಎಂದು ಗಾಂಧಿ ಹೇಳಿದ್ದರು. ಜೈಶಂಕರ್ ಮತ್ತು ಸರ್ಕಾರವು ಚೀನಾದಿಂದ ನಿಜವಾದ ಬೆದರಿಕೆಯನ್ನು ಅರ್ಥಮಾಡಿಕೊಂಡಿಲ್ಲ. ಪ್ರಧಾನಿಯವರ ಹೇಳಿಕೆಯು ಬೆದರಿಕೆಯ ಗ್ರಹಿಕೆಯ ಕೊರತೆಯನ್ನು ಪ್ರದರ್ಶಿಸುತ್ತದೆ ಎಂದಿದ್ದರು ರಾಹುಲ್ ರಾಹುಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜೈಶಂಕರ್, “ಯಾರೋ ಚೀನಾದ ಮೇಲೆ ಜೊಲ್ಲು ಸುರಿಸುತ್ತಿರುವುದನ್ನು ಮತ್ತು ಭಾರತದ ಬಗ್ಗೆ ತಿರಸ್ಕಾರ ಮಾಡುತ್ತಿರುವುದನ್ನು ನೋಡಿದರೆ  ಭಾರತದ ಪ್ರಜೆಯಾಗಿ ನನಗೆ ಕಷ್ಟವಾಗುತ್ತಿದೆ ಎಂದು ಹೇಳಿದರು. ಯುಕೆಯಲ್ಲಿ ರಾಹುಲ್ ಗಾಂಧಿಯವರ ಇತ್ತೀಚಿನ ಭಾಷಣದ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.

ಇದನ್ನೂ ಓದಿ:Global Millets Conference: ಆಹಾರ ಭದ್ರತೆ ಸವಾಲು ಎದುರಿಸಲು ಸಿರಿಧಾನ್ಯ ನೆರವಾಗಬಹುದು; ಪ್ರಧಾನಿ ಮೋದಿ

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರನ್ನು ಟೀಕಿಸಿದ ಜೈಶಂಕರ್, ಭಾರತ ಚೀನಾಕ್ಕೆ ಹೆದರುತ್ತಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದರು. “ರಾಹುಲ್ ಗಾಂಧಿ ಚೀನಾದ ಬಗ್ಗೆ ಮೆಚ್ಚುಗೆಯಿಂದ ಮಾತನಾಡುತ್ತಾರೆ ಮತ್ತು ದೇಶವನ್ನು ‘ಸಾಮರಸ್ಯ’ ಎಂದು ವಿವರಿಸುತ್ತಾರೆ, ಅವರು ಚೀನಾ ಶ್ರೇಷ್ಠ ತಯಾರಕ ಎಂದು ಹೇಳುತ್ತಾರೆ ಮತ್ತು ‘ಮೇಕ್ ಇನ್ ಇಂಡಿಯಾ’ ಕೆಲಸ ಮಾಡುವುದಿಲ್ಲ ಅಂತಾರೆ ಎಂದು ಜೈಶಂಕರ್ ಹೇಳಿದ್ದಾರೆ.

“ನೀವು ದೇಶದ ಬಗ್ಗೆ ದೃಷ್ಟಿಕೋನವನ್ನು ಹೊಂದಬಹುದು, ಆದರೆ ನೀವು ರಾಷ್ಟ್ರೀಯ ನೈತಿಕತೆಯನ್ನು ದುರ್ಬಲಗೊಳಿಸಬಾರದು” ಎಂದು ಸಚಿವರು ಹೇಳಿದ್ದಾರೆ.

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!