AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್​​​ಗೆ ಯಾವಾಗ ಮದುವೆ ಎಂದ ರೈತ ಮಹಿಳೆಯರ ಬಳಿ ನೀವೇ ಹುಡುಗಿ ಹುಡುಕಿ ಎಂದ ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಸೋನಿಪತ್ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಈ ಬಗ್ಗೆ ರಾಹುಲ್​​ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

Rahul Gandhi: ರಾಹುಲ್​​​ಗೆ ಯಾವಾಗ ಮದುವೆ ಎಂದ ರೈತ ಮಹಿಳೆಯರ ಬಳಿ ನೀವೇ ಹುಡುಗಿ ಹುಡುಕಿ ಎಂದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ ಮತ್ತು ರೈತ ಮಹಿಳೆಯರು, ರಾಹುಲ್​​ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Jul 29, 2023 | 4:40 PM

Share

ದೆಹಲಿ,ಜು.29: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ (Sonia Gandhi )ಅವರನ್ನು ಇಂದು ಹರಿಯಾಣ ರೈತ ಮಹಿಳೆಯರು ಭೇಟಿಯಾಗಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರೈತ ಮಹಿಳೆಯರು ಸೋನಿಯಾ ಗಾಂಧಿಯವರಿಗೆ ರಾಹುಲ್​​ ಗಾಂಧಿ (Rahul Gandhi) ಅವರು ಯಾವಾಗ ಮದುವೆಯಾಗುತ್ತಾರೆ ಎಂದು ಹಾಸ್ಯವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಜೋರಾಗಿ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ, ನೀವೇ ಅವನಿಗೆ ಹುಡುಗಿಯನ್ನು ಹುಡುಕಿ ಎಂದು ಹೇಳಿದ್ದಾರೆ. ಇನ್ನು ಪಕ್ಕದಲ್ಲೇ ನಿಂತಿದ್ದ ರಾಹುಲ್​ ಗಾಂಧಿ ಅವರು “ಮುಂದೆ ನೋಡುವ” ಎಂದು ನಗುತ್ತಲೇ ಉತ್ತರಿಸಿದ್ದಾರೆ.

ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಆಯೋಜಿಸಿದ್ದ ಉಪಾಹಾರ ಕೂಟದಲ್ಲಿ ಸೋನಿಪತ್ ರೈತ ಮಹಿಳೆಯರು ಭಾಗವಹಿಸಿದ್ದಾರೆ. ಈ ಬಗ್ಗೆ ರಾಹುಲ್​​ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಇಂದು ನಾನು, ಅಮ್ಮ, ಪ್ರಿಯಾಂಕ ನೆನಪಿಡುವ ದಿನ, ಏಕೆಂದರೆ ದೆಹಲಿಯಲ್ಲಿ ಇಂದು ಬೆಳಿಗ್ಗೆ ಸೋನಿಪತ್‌ನ ರೈತ ಸಹೋದರಿಯರ ದರ್ಶನವಾಗಿದೆ, ಮನೆಯಲ್ಲಿ ಅವರೊಂದಿಗೆ ಭೋಜನ, ಒಂದಿಷ್ಟು ಹಾಸ್ಯ, ಹರಟೆ ಎಲ್ಲವೂ ನಡೆಯಿತು.  ಅವರು ನಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅಮೂಲ್ಯವಾದ ಉಡುಗೊರೆಗಳನ್ನು ನೀಡಿದ್ದಾರೆ. ದೇಸಿ ತುಪ್ಪ, ಸಿಹಿ ಲಸ್ಸಿ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ ಮತ್ತು ಬಹಳಷ್ಟು ಪ್ರೀತಿ ಎಲ್ಲವನ್ನು ನಮ್ಮ ಜತೆಗೆ ಹಂಚಿಕೊಂಡಿದ್ದಾರೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:  ಮಾನನಷ್ಟ ಮೊಕದ್ದಮೆ, ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆ ಆ.4ಕ್ಕೆ ಮುಂದೂಡಿದ ಸುಪ್ರೀಂ

ರಾಹುಲ್​​ ಗಾಂಧಿ ಅವರು ಈ ಹಿಂದೆ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಹರಿಯಾಣದ ಸೋನಿಪತ್​​ಗೆ ಭೇಟಿ ನೀಡಿದ್ದ ಸಮಯದಲ್ಲಿ ಅಲ್ಲಿನ ಜನರ ಜತೆಗೆ ಸಂವಾದ ನಡೆಸಿದ್ದರು. ನಾನು ದೆಹಲಿಯಲ್ಲಿ ಸೋನಿಪತ್ ರೈತ ಮಹಿಳೆಯರನ್ನು ಭೇಟಿ ಮಾಡಿ. ಜತೆಗೆ ಅವರಿಗಾಗಿ ಔತಣಕೂಟದ ವ್ಯವಸ್ಥೆಯನ್ನು ಮಾಡುವೆ ಎಂದು ಹೇಳಿದ್ದರು. ಅದೇ ರೀತಿಯಲ್ಲಿ ರಾಹುಲ್​​ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:30 pm, Sat, 29 July 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ